ಕೊರೋನಾ ಭೀತಿ: ಕೂಡಲೇ ಶಾಲೆಗಳಿಗೆ ಬೇಸಿಗೆ ರಜೆ ನೀಡಿ ರಾಜ್ಯ ಸರ್ಕಾರ ಆದೇಶ

Published : Mar 12, 2020, 06:39 PM ISTUpdated : Mar 12, 2020, 07:02 PM IST
ಕೊರೋನಾ ಭೀತಿ: ಕೂಡಲೇ ಶಾಲೆಗಳಿಗೆ ಬೇಸಿಗೆ ರಜೆ ನೀಡಿ ರಾಜ್ಯ ಸರ್ಕಾರ ಆದೇಶ

ಸಾರಾಂಶ

ಮಕ್ಕಳಿಗೆ ಬೇಗ ಕೊರೋನಾ ಎಫೆಕ್ಟ್‌ ಆಗುವುದರಿಂದ ರಾಜ್ಯ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಶಾಲೆಗಳಿಗೆ ಬೇಸಿಗೆ ರಜೆ ನೀಡಿ ಆದೇಶ ಹೊರಡಿಸಿದೆ.

ಬೆಂಗಳೂರು, (ಮಾ.12): ರಾಜ್ಯದಲ್ಲಿ ಕೊರೋನಾ ಭೀತಿ ಹಿನ್ನೆಲೆಯಲ್ಲಿ 1ರಿಂದ 6ನೇ ತರಗತಿ ವರಗೆಗಿನ ಶಾಲೆಗಳಿಗೆ ಬೇಸಿಗೆ ರಜೆ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ 1ರಿಂದ 6ನೇ ತರಗತಿ ವರಗೆ ನಾಳೆಯಿಂದ ಅಂದ್ರೆ ಶುಕ್ರವಾರ (ಮಾರ್ಚ್ 13)ದಿಂದ ಬೇಸಿಗೆ ರಜೆ ನೀಡಿ ಕರ್ನಾಟಕ ಸರ್ಕಾರ ಗುರುವಾರ ಸುತ್ತೋಲೆ ಹೊರಡಿಸಿದೆ.

ಕೊರೋನಾ ಭೀತಿ, ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ 

1 ರಿಂದ 6ನೇ ತರಗತಿ ಎಲ್ಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲಿನಲ್ಲಿ  FA1, FA2, FA3 , FA4 ಮತ್ತು SA1ರಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಶೈಕ್ಷಣಿಕ ಫಲಿತಾಂಶ ಪ್ರಕಟಿಸಿ ಮುಂದಿನ ತರಗತಿಗೆ ಬಡ್ತಿ ನೀಡಿ ಎಂದು ಶಾಲೆಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ

ಉಳಿದ ಜಿಲ್ಲೆಗಳಲ್ಲಿ ಯತಾವತ್ತಾಗಿ ಶಾಲೆಗಳು ಮುಂದುವರೆಯಲಿದ್ದು,  ರಾಜ್ಯದ ಎಲ್ಲಾ 1 ರಿಂದ 5ನೇ ತರಗತಿಯವರಿಗೆ ಮಾರ್ಚ್ 16ನೇ ತಾರೀಖಿನೊಳಗೆ ಪರೀಕ್ಷೆ ಮುಗಿಸಲು ಸೂಚಿಸಲಾಗಿದೆ.

ಇನ್ನು 7 ರಿಂದ 9 ನೇ ತರಗತಿಯವರಿಗೆ ಮಾ. 23ರೊಳಗೆ ಪರೀಕ್ಷೆ ನಡೆಸಲು ಸೂಚಿಸಿದೆ. 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 27ರಿಂದ ಪರೀಕ್ಷೆ ನಡೆಯಲಿದ್ದು, ಮಾಸ್ಕ್ ಹಾಕಿಕೊಂಡು ಬಂದು ಎಕ್ಸಾಂ ಬರೆಯಬಹುದು ಎಂದು ಸರ್ಕಾರ ತಿಳಿಸಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ
ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಬಸ್ ಮಂಡ್ಯ ಬಳಿ ಪಲ್ಟಿ, 8 ಮಂದಿಗೆ ಗಾಯ