ಶಿವಕುಮಾರ್ ಶ್ರೀ ಲಿಂಗೈಕ್ಯರಾದ ದಿನವನ್ನು 'ದಾಸೋಹ' ದಿನವನ್ನಾಗಿ ಆಚರಿಸಲು ಸುತ್ತೋಲೆ

Published : Sep 03, 2021, 07:45 PM IST
ಶಿವಕುಮಾರ್ ಶ್ರೀ ಲಿಂಗೈಕ್ಯರಾದ ದಿನವನ್ನು 'ದಾಸೋಹ' ದಿನವನ್ನಾಗಿ ಆಚರಿಸಲು ಸುತ್ತೋಲೆ

ಸಾರಾಂಶ

* ಶಿವಕುಮಾರ್ ಸ್ವಾಮೀಜಿ ಲಿಂಗೈಕೈರಾದ ದಿನವನ್ನ ದಾಸೋಹದ ದಿನ ಎಂದು ಅಚರಿಸಲು ಸರ್ಕಾರ ತೀರ್ಮಾನ * ದಾಸೋಹ ದಿನದ ರೂಪರೇಷೆಗಳನ್ನ ತಯಾರಿಸಿ ಕಾರ್ಯಕ್ರಮ ಜಾರಿಗೊಳಿಸಲು ಸೂಚನೆ * ದಾಸೋಹ ದಿನ ಆಚರಣೆ ಮಾಡ್ತೀನಿ ಎಂದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಘೋಷಣೆ ಮಾಡಿದ್ದರು..

ಬೆಂಗಳೂರು, (ಸೆ.03): ತ್ರಿವಿಧ ದಾಸೋಹಿ ಸಿದ್ಧಗಂಗಾ ಶಿವಕುಮಾರ್ ಸ್ವಾಮೀಜಿಯವರು ಲಿಂಗೈಕ್ಯರಾಗಿರುವ ಜನವರಿ 21ನ್ನು 'ದಾಸೋಹ' ದಿನವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸುತ್ತೋಲೆ ಹೊರಡಿಸಿದೆ. 

ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಎಂ. ರಾಜು ಇಂದು (ಸೆ.03) ಸುತ್ತೋಲೆ ಹೊರಡಿಸಿದ್ದು, ದಾಸೋಹ ದಿನದ ರೂಪುರೇಷೆಗಳನ್ನು ತಯಾರಿಸಿ ಕಾರ್ಯಕ್ರಮ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ವಿವಿಧ ಇಲಾಖೆಗಳಿಗೆ ಸೂಚನೆ ನೀಡಿದ್ದಾರೆ.

ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ 111 ಅಡಿ ಪ್ರತಿಮೆ ನಿರ್ಮಾಣ

ಸಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಶ್ರೀಗಳು ತಮ್ಮನ್ನು ತಾವು ತೊಡಗಿಸಿಕೊಂಡು ಲಿಂಗೈಕ್ಯರಾಗಿದ್ದರು.ಈ ಅಭೂತಪೂರ್ವ ಸೇವೆಯನ್ನು ಸ್ಮರಿಸುವ ಸಲುವಾಗಿ , ಶ್ರೀಗಳು ಲಿಂಗೈಕ್ಯರಾಗಿದ ದಿನವನ್ನು ಅಂದರೆ ಜನವರಿ 21ರಂದು ಸರ್ಕಾರದ ವತಿಯಿಂದ 'ದಾಸೋಹ ದಿನ'ವೆಂದು ಆಚರಿಸುವಂತೆ ಈ ಮೂಲಕ ತಿಳಿಸಲಾಗಿದೆ ಎಂದು ಸತ್ತೋಲೆಯಲ್ಲಿ ತಿಳಿಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ 2ನೇ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲೇ ಈ ದಾಸೊಹ ದಿನದ ಘೋಷಣೆ ಮಾಡಿದ್ದರು. ಇದೀಗ ಈ ದಾಸೋಹ ದಿನದ ಆಚರಣೆಗೆ ರಾಜ್ಯ ಸರ್ಕಾರ ಅಧಿಕೃತ ಸುತ್ತೋಲೆ ಹೊರಡಿಸಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!