ಕೊರೋನಾ 3ನೇ ಅಲೆ ಎದುರಿಸಲು ರಾಜ್ಯ ಸರ್ಕಾರ ಸಜ್ಜು: ತಜ್ಞ ವೈದ್ಯರ ಉನ್ನತ ಮಟ್ಟದ ಸಮಿತಿ ರಚನೆ

Published : May 26, 2021, 06:21 PM IST
ಕೊರೋನಾ 3ನೇ ಅಲೆ ಎದುರಿಸಲು ರಾಜ್ಯ ಸರ್ಕಾರ ಸಜ್ಜು: ತಜ್ಞ ವೈದ್ಯರ ಉನ್ನತ ಮಟ್ಟದ ಸಮಿತಿ ರಚನೆ

ಸಾರಾಂಶ

* ಕೊರೋನಾ 3ನೇ ಅಲೆ ಎದುರಿಸಲು ರಾಜ್ಯ ಸರ್ಕಾರ ಸಜ್ಜು * ರಾಜ್ಯದಲ್ಲಿ ಕೋವಿಡ್​ ಉನ್ನತ ವೈದ್ಯ ಸಮಿತಿ ರಚನೆ  * ತಜ್ಞ ವೈದ್ಯರ ಉನ್ನತ ಮಟ್ಟದ ಸಮಿತಿ ರಚಿಸಿದ ರಾಜ್ಯ ಸರ್ಕಾರ

ಬೆಂಗಳೂರು, (ಮೇ.26): ಕರ್ನಾಟಕ ಕೋವಿಡ್​ ನಿಯಂತ್ರಣ ಕಾರ್ಯಪಡೆ ಮುಖ್ಯಸ್ಥ, ಉಪ ಮುಖ್ಯಮಂತ್ರಿ ಡಾ. ಸಿ ಎನ್​ ಅಶ್ವತ್ಥ ನಾರಾಯಣ್​ ಅವರು ಕೊರೊನಾ 3ನೇ ಅಲೆ ಎದುರಿಸಲು ಸಜ್ಜಾಗಿದ್ದಾರೆ. 

ಈ ಸಂಬಂಧ ಖ್ಯಾತ ವೈದ್ಯ ಡಾ. ದೇವಿ ಶೆಟ್ಟಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಕೋವಿಡ್​ ಉನ್ನತ ವೈದ್ಯ ಸಮಿತಿ ರಚನೆ ಮಾಡಿದ್ದಾರೆ. ತಜ್ಞ ವೈದ್ಯರ ಉನ್ನತ ಮಟ್ಟದ ಸಮಿತಿ ರಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಸಮಿತಿಯಲ್ಲಿ ಒಟ್ಟು 13 ಮಂದಿ ವೈದ್ಯರು ಇದ್ದಾರೆ. 

ಈ ಬಗ್ಗೆ ಕರ್ನಾಟಕ ಕೋವಿಡ್​ ನಿಯಂತ್ರಣ ಕಾರ್ಯಪಡೆ ಮುಖ್ಯಸ್ಥ ಡಾ. ಸಿ ಎನ್​ ಅಶ್ವತ್ಥ ನಾರಾಯಣ್​ ಟ್ವೀಟ್​ ಮಾಡಿ ಮಾಹಿತಿ ತಿಳಿಸಿದ್ದಾರೆ.

ಮಾತುಕತೆ ಸಫಲ: ರಾಜ್ಯಕ್ಕೆ 1200 ಮೆಟ್ರಿಕ್‌ ಟನ್‌ ಆಕ್ಸಿಜನ್ ಹಂಚಿಕೆ

ಕೊರೋನಾ ಸೋಂಕು ಎರಡನೇ ಅಲೆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಡವಿದ್ದು ಸ್ಪಷ್ಟವಾಗಿತ್ತು. ಅದರ ಸರಿಪಡಿಸಿಕೊಂಡು ಮುಂದೆ ಎದುರಾಗಬಹುದಾದ ಮೂರನೇ ಕೊವಿಡ್​ ಅಲೆಯನ್ನು ಎದುರಿಸಲು ರಾಜ್ಯ ಸರ್ಕಾರ ಈ ಬಾರಿ ಮುಂಚಿತವಾಗಿಯೇ ಸಿದ್ಧತೆ ನಡೆಸಿದೆ.

 ಮುಖ್ಯವಾಗಿ ಪರಿಣತ ವೈದ್ಯರಿಂದ ಸಲಹೆ, ಸೂಚನೆ ಪಡೆಯಲು ತಯಾರಿ ನಡೆಸಿದೆ. ಅಕ್ಟೋಬರ್​- ನವೆಂಬರ್​ ತಿಂಗಳಲ್ಲಿ ಮೂರನೇ ಕೊವಿಡ್​ ಅಲೆ ಎದುರಾಗುವ ಸಾಧ್ಯತೆಯಿದೆ. ಖ್ಯಾತ ಹೃದಯತಜ್ಞ ಡಾ. ದೇವಿ ಪ್ರಸಾದ್​ ಶೆಟ್ಟಿ ಕೋವಿಡ್​ ವೈದ್ಯಕೀಯ ಉನ್ನತ ಸಮಿತಿಯ ಮುಖ್ಯಸ್ಥರಾಗಿದ್ದಾರೆ. ಗಮನಾರ್ಹವೆಂದರೆ ಕೇಂದ್ರ ಸರ್ಕಾರವೂ ಸಹ ಕೊರೊನಾ ನಿಯಂತ್ರಣದಲ್ಲಿ ಡಾ. ದೇವಿ ಪ್ರಸಾದ್​ ಶೆಟ್ಟಿ ಅವರ ವೈದ್ಯ ನೆರವು ಪಡೆದಿದೆ ಎಂದು ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!