16, 6 ಆಯ್ತು ಈಗ ಮತ್ತೆ 4 ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆ: ಯಾವುವು..?

Published : Jun 22, 2021, 05:42 PM IST
16, 6  ಆಯ್ತು ಈಗ ಮತ್ತೆ  4 ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆ: ಯಾವುವು..?

ಸಾರಾಂಶ

* ಮತ್ತೆ 4 ಜಿಲ್ಲೆಗಳಲ್ಲಿ ಎಲ್ಲಾ‌ ಅಂಗಡಿಗಳನ್ನು ತೆರೆಯಲು ಅನುಮತಿ * ಎಲ್ಲಾ‌ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿ ರಾಜ್ಯ ಸರ್ಕಾರ * 16, 6  ಆಯ್ತು ಈಗ ಮತ್ತೆ  4 ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆ: ಯಾವುವು..?

ಬೆಂಗಳೂರು, (ಜೂನ್.22): ರಾಜ್ಯದ ಇನ್ನೂ 4 ಜಿಲ್ಲೆಗಳಲ್ಲಿ ಎಲ್ಲಾ‌ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. 

ಹೌದು.. ದಕ್ಷಿಣ ಕನ್ನಡ, ಚಾಮರಾಜನಗರ, ಹಾಸನ ಹಾಗೂ‌ ದಾವಣಗೆರೆ ಜಿಲ್ಲೆಗಳಲ್ಲಿ ಎಸಿ ಶಾಪ್, ಎಸಿ ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ಎಸಿ ಮಾಲ್‌ಗಳನ್ನು ಹೊರತುಪಡಿಸಿ ಸಂಜೆ 5 ಗಂಟೆಯವರೆಗೆ ಎಲ್ಲಾ‌ ಅಂಗಡಿ ತೆರೆಯಲು ಸರ್ಕಾರ ಅನುಮತಿ ನೀಡಿದೆ.

16 ಜಿಲ್ಲೆಗಳೊಂದಿಗೆ ಮತ್ತೆ 6 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ

ಈ ಮೊದಲು ಅನ್​ಲಾಕ್ ಪ್ರಕಿಯೆಗೆ ಚಾಲನೆ ನೀಡಿದ್ದ ಸಿಎಂ ಯಡಿಯೂರಪ್ಪ,ಪಾಸಿಟಿವಿಟಿ ದರ ಶೇ.5ರಷ್ಟು ಇದ್ದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಜಿಲ್ಲೆ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಮಾತ್ರ ಲಾಕ್‌ಡೌನ್  ಸಡಿಲಿಕೆ ಮಾಡಿ ಆದೇಶ ಹೊರಡಿಸಲಾಗಿತ್ತು.

ಇದರ ಜೊತೆಗೆ ನಿನ್ನೆಯಷ್ಟೇ ( ಜೂನ್ 21) ಅನ್‌ಲಾಕ್ 2.0 ಜಿಲ್ಲೆಗಳ ಪಟ್ಟಿಗೆ ಮತ್ತೆ 6 ಜಿಲ್ಲೆಗಳನ್ನು ಸೇರ್ಪಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿತ್ತು. ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲೂ ಲಾಕ್​ಡೌನ್ ವಿನಾಯಿತಿ ನೀಡಲಾಗಿತ್ತು.

ಇದೀಗ ಈ ಪಟ್ಟಿ ಪತ್ತೆ ನಾಲ್ಕು ಜಿಲ್ಲೆಗಳು ಸೇರ್ಪಡೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 26 ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!