ಕಲ್ಯಾಣ ಮಂಟಪಗಳಲ್ಲಿ ಮದುವೆಗೆ ಷರತ್ತುಬದ್ಧ ಅನುಮತಿ

Published : Jun 25, 2021, 07:55 PM IST
ಕಲ್ಯಾಣ ಮಂಟಪಗಳಲ್ಲಿ ಮದುವೆಗೆ ಷರತ್ತುಬದ್ಧ ಅನುಮತಿ

ಸಾರಾಂಶ

* ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆ ಅಂತ್ಯ *  ಕಲ್ಯಾಣ ಮಂಟಪಗಳಲ್ಲಿ ಮದುವೆಗೆ ಷರತ್ತುಬದ್ಧ ಅನುಮತಿ  * ಡೆಲ್ಟಾ ವೈರಸ್‌ ಬಗ್ಗೆ ಸುದೀರ್ಘ ಚರ್ಚೆ

ಬೆಂಗಳೂರು, (ಜೂನ್.25): ಹಬ್ಬದ ರೀತಿಯಲ್ಲಿ ಕಂಗೊಳಿಸುತ್ತಿದ್ದ ಮದುವೆ ಕಲ್ಯಾಣ ಮಂಟಪಗಳು ಕೊರೋನಾ ಎರಡನೇ ಅಲೆಗೆ ಸಿಲುಕಿ ಬಂದ್ ಆಗಿದ್ದವು. ಇದೀಗ ಕಲ್ಯಾಣ ಮಂಟಪಗಳಲ್ಲಿ ಮದುವೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ.

ಹೌದು...ಕೋವಿಡ್ -19 ನಿಯಂತ್ರಣದ ಕುರಿತು ಇಂದು (ಶುಕ್ರವಾರ) ಮುಖ್ಯಮಂತ್ರಿ ನಿವಾಸದಲ್ಲಿ ನಡೆದ  ಸಚಿವರು ಹಾಗು ಅಧಿಕಾರಿಗಳ ಸಭೆಯಲ್ಲಿ  ಕಲ್ಯಾಣ ಮಂಟಪಗಳಲ್ಲಿ ಮದುವೆಗೆ ಷರತ್ತುಬದ್ಧ ಅನುಮತಿ ನೀಡಲು ತೀರ್ಮಾನಿಸಲಾಗಿದೆ.

ರಾಜ್ಯದಲ್ಲಿ 2 ಡೆಲ್ಟಾಪ್ಲಸ್‌ ಕೇಸ್‌ ಪತ್ತೆ, ಇಬ್ಬರೂ ಗುಣ

ಮದುವೆಗೆ 40 ಜನರಿಗೆ ಅವಕಾಶ ನೀಡಲಾಗಿದ್ದು, ಭಾಗಿಯಾಗುವವರಿಗೆ ಪಾಸ್ ಕಡ್ಡಾಯವಾಗಿರುತ್ತದೆ. ಹೋಟೆಲ್, ರೆಸಾರ್ಟ್ ಗಳು, ಪಾರ್ಟಿ ಹಾಲ್ ಗಳಲ್ಲಿಯೂ ಮದುವೆ ಮಾಡಬಹುದು. ಸೋಮವಾರದಿಂದ ಜಾರಿಗೆ ಬರುವಂತೆ ಷರತ್ತುಬದ್ಧ ಅನುಮತಿ ನೀಡಲು ನಿರ್ಧರಿಸಲಾಗಿದೆ.

ಇನ್ನು ಸಭೆಯಲ್ಲಿ ಡೆಲ್ಟಾ ಪ್ಲಸ್ ವೈರಸ್ ಬಗ್ಗೆ ನಿಗಾ ವಹಿಸಲು ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಬೇಕು ಎಂದು ತಿಳಿಸಿದರು.

ಅಲ್ಲದೇ ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರ ಮೇಲೆ ತೀವ್ರ ನಿಗಾ ಇಟ್ಟು ಅವರನ್ನು ಕೊರೋನಾ ಟೆಸ್ಟ್ ಗೆ ಒಳಪಡಿಸುವಂತೆ ಸೂಚಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!