ಸಿಎಂ ನೇತೃತ್ವದ ಸಭೆಯಲ್ಲಿ ಮಹತ್ವದ ತೀರ್ಮಾನ: ಎಣ್ಣೆ ಪ್ರಿಯರಿಗೆ ಗುಡ್‌ನ್ಯೂಸ್

Published : Jun 19, 2021, 09:21 PM IST
ಸಿಎಂ ನೇತೃತ್ವದ ಸಭೆಯಲ್ಲಿ ಮಹತ್ವದ ತೀರ್ಮಾನ:  ಎಣ್ಣೆ ಪ್ರಿಯರಿಗೆ ಗುಡ್‌ನ್ಯೂಸ್

ಸಾರಾಂಶ

* ಎಣ್ಣೆ ಪ್ರಿಯರಿಗೆ ಗುಡ್‌ನ್ಯೂಸ್ * ಮದ್ಯ ಖರೀದಿಗೆ ಮತ್ತಷ್ಟು ಸಮಯಾವಕಾಶ * ಸಿಎಂ ನೇತೃತ್ವದ ಸಭೆಯಲ್ಲಿ ತೀರ್ಮಾನ

ಬೆಂಗಳೂರು, (ಜೂನ್.19): ರಾಜ್ಯದ 16 ಜಿಲ್ಲೆಗಳಲ್ಲಿ ಮತ್ತಷ್ಟು ಲಾಕ್‌ಡೌನ್ ಸಡಿಲಿಕೆಗೆ ಬಿಎಸ್‌ವೈ ಸರ್ಕಾರ ತೀರ್ಮಾನಿಸಿದೆ.  

ರಾಜ್ಯದಲ್ಲಿ ಶೇ. 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವಂತ 16 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲಾಗುತ್ತಿದೆ. ಇನ್ನುಳಿದಂತೆ ಪಾಸಿಟಿವಿಟಿ ದರಗಳು ಹೆಚ್ಚಿರುವಂತ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸಲಾಗುತ್ತಿದೆ.

ರಾಜ್ಯದಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವಂತ 16 ಜಿಲ್ಲೆಗಳಲ್ಲಿ ಮದ್ಯ ಖರೀದಿ ಸಮಯ ಬೆಳಗ್ಗೆ 5ರಿಂದ ಸಂಜೆ 5 ಗಂಟೆವರೆಗೆ ಅವಕಾಶ ನೀಡಲಾಗಿದೆ. ಅದು ಕೇವಲ ಪಾರ್ಸೆಲ್ ಗೆ ಮಾತ್ರ.

ರಾಜ್ಯದಲ್ಲಿ ಮತ್ತಷ್ಟು ಲಾಕ್‌ಡೌನ್‌ ಸಡಿಲಿಕೆ, ಬಸ್ ಓಡಾಡುತ್ತಿವೆ, ಕಂಡೀಷನ್ಸ್ ಅಪ್ಲೈ

ಬಾರ್ ಗಳಲ್ಲಿ ಕುಳಿತು ಮದ್ಯ ಸೇವಿಸುವಂತಿಲ್ಲ ಎಂಬ ಶರತ್ತು ವಿಧಿಸಲಾಗಿದೆ. ಇನ್ನು ಎಸಿ ಇಲ್ಲದೇ ಹೋಟೆಲ್, ಕ್ಲಬ್, ರೆಸ್ಟೋರೆಂಟ್ ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಸಂಜೆ 5 ಗಂಟೆಯವರೆಗೆ ಶೇ.50ರಷ್ಟು ಜನರನ್ನು ಒಳಗೊಂಡು ತೆರೆಯೋದಕ್ಕೆ ಅವಕಾಶ ನೀಡಲಾಗಿದೆ.

ಅನ್‌ಲಾಕ್‌ ಜಿಲ್ಲೆಗಳು
ರಾಯಚೂರು, ಕೊಪ್ಪಳ, ಕಲಬುರಗಿ, ರಾಮನಗರ, ಉತ್ತರ ಕನ್ನಡ, ಮಂಡ್ಯ, ಚಿಕ್ಕಬಳ್ಳಾಪುರ, ತುಮಕೂರು, ಕಲಬುರಗಿ, ರಾಮನಗರ, ಹಾವೇರಿ,ಬೀದರ್, ಬೆಳಗಾವಿ, ಕೋಲಾರ, ಯಾದಗಿರಿ ಹಾಗೂ ಬಾಗಲಕೋಟೆ.

ನೈಟ್ ಕರ್ಫ್ಯೂ
• ಪ್ರತಿ ದಿನ ನೈಟ್‌ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಇರುತ್ತದೆ.  
• ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.  
• ಬಸ್‌ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!