ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ರದ್ದಾಯ್ತು ಈ ನಿಯಮ

Published : Nov 15, 2018, 01:05 PM IST
ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ರದ್ದಾಯ್ತು ಈ ನಿಯಮ

ಸಾರಾಂಶ

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ  ನೇತೃತ್ವದ ರಾಜ್ಯ ಸರ್ಕಾರ ಇದೀಗ ಗುಡ್ ನ್ಯೂಸ್ ಒಂದನ್ನು ನೀಡಿದೆ. ಇನ್ನು ಮುಂದೆ ಪೊಲೀಸರಿಗೆ ಇದ್ದ ಕಡ್ಡಾಯ ವರ್ಗಾವಣೆಯನ್ನು ರದ್ದು ಮಾಡಿದೆ. 

ಬೆಂಗಳೂರು :  ಕಮಿಷನರೇಟ್‌ಗಳಲ್ಲಿ 5 ವರ್ಷ ಕೆಲಸ ಮಾಡಿದ ಪೊಲೀಸ್ ಅಧಿಕಾರಿಗಳನ್ನು ಕಡ್ಡಾಯವಾಗಿ ಬೇರೆ ಕಡೆಗೆ ವರ್ಗಾಯಿಸಬೇಕು ಎಂಬ ನಿಯಮವನ್ನು ರಾಜ್ಯ ಸರ್ಕಾರ ರದ್ದುಪಡಿಸಿದೆ.

ಈ ಹಿಂದಿನ ಸಿದ್ದರಾಮಯ್ಯ ಸರ್ಕಾರ ಕಮಿಷನರೇಟ್ ವ್ಯಾಪ್ತಿಯಲ್ಲಿ 5 ವರ್ಷ ಕಡ್ಡಾಯವಾಗಿ ಕೆಲಸ ಮಾಡಿದ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಎಸಿಪಿಗಳನ್ನು ಬೇರೆ ಡೆಗೆ ವರ್ಗಾಯಿಸಬೇಕು ಎಂಬ ನಿಯಮ ಜಾರಿಗೊಳಿಸಿತ್ತು. ಇತ್ತೀಚೆಗೆ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಸಿಸಿಬಿಗಳನ್ನು ಈ ನಿಯಮದಿಂದ ಹೊರಗಿಟ್ಟು ಕುಮಾರ ಸ್ವಾಮಿ ಸರ್ಕಾರ ಆದೇಶ ಹೊರಡಿಸಿತ್ತು.

ಬುಧವಾರ ಕಮಿಷನರೇಟ್ ವ್ಯಾಪ್ತಿಯ ಕಾನೂನು ಸುವ್ಯವಸ್ಥೆ ಹಾಗೂ ಸಂಚಾರ ವಿಭಾಗಗಳಿಗೂ ಅನ್ವಯಿಸುವಂತೆ ಈ ನಿಯಮವನ್ನು ಸರ್ಕಾರ ಹಿಂಪಡೆದಿದೆ. ತನ್ಮೂಲಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರದ ಬಹುಮುಖ್ಯ ಆದೇಶವನ್ನು ಹಿಂಪಡೆದುಕೊಂಡಂತಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಪೊಲೀಸ್ ಕಮಿಷನರೇಟ್‌ಗಳಲ್ಲಿ ಇನ್ಸ್ ಪೆಕ್ಟರ್ ಮತ್ತು ಎಸಿಪಿಗಳಿಗೆ ಐದು ವರ್ಷ ಸೇವಾವಧಿ ನಿಗದಪಡಿಸಿ ಕಾಂಗ್ರೆಸ್ ಸರ್ಕಾರವು ನಿಯಮ ಜಾರಿಗೆ ತಂದಿತ್ತು. ಇದರ ಪರಿಣಾಮ ಹತ್ತಾರು ವರ್ಷಗಳು ಬೆಂಗಳೂರಿನಲ್ಲಿ ಬೀಡುಬಿಟ್ಟಿದ್ದ ಅಧಿಕಾರಿ ಗಳು ನಗರವನ್ನು ತೊರೆಯುವಂತಾ ಯಿತು. 

ಈ ಆದೇಶ ಹಿಂಪಡೆಯುವಂತೆ ನಾಲ್ಕು ವರ್ಷಗಳಿಂದ ಕೆಲ ಅಧಿಕಾರಿಗಳು ತಮ್ಮ ಗಾಡ್‌ಫಾದರ್‌ಗಳ ಮೂಲಕ ಸರ್ಕಾರ ಮಟ್ಟದಲ್ಲಿ ಲಾಬಿ ನಡೆಸಿದ್ದರು. ಇದಕ್ಕೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸೊಪ್ಪು ಹಾಕಿರಲಿಲ್ಲ. ಆದರೆ, ಈಗ ಅಧಿಕಾರಿಗಳ ಲಾಬಿ ಯಶಸ್ಸು ಕಂಡಿದೆ. 

ವಾರದ ಹಿಂದೆ ಐದು ವರ್ಷ ಸೇವಾವಧಿ ನಿಯಮದಿಂದ ಸಿಸಿಬಿಯನ್ನು ಪ್ರತ್ಯೇಕ ಗೊಳಿಸಿದ ಸರ್ಕಾರವು, ಈಗ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂಚಾರ ವಿಭಾಗಗಳಿಗೂ ಆ ನಿಯಮವನ್ನು ಹಿಂಪ ಡೆದುಕೊಂಡಿದೆ. ಇದರೊಂದಿಗೆ ಬೆಂಗಳೂರಿಗೆ ಹಳೇ ಅಧಿಕಾರಿಗಳ ದಂಡು ಮರು ಪ್ರವೇಶಕ್ಕೂ ಬಾಗಿಲು ತೆರೆದಂತಾಗಿದೆ.

ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅನುಭವಿ ಅಧಿಕಾರಗಳ ಅಗತ್ಯವಿದೆ. ಹಾಗಾಗಿ ಹಿಂದಿನ ವರ್ಗಾವಣೆ ನಿಯಮ ಆದೇಶವನ್ನು ಹಿಂಪಡೆಯಲಾಗುತ್ತಿದೆ ಎಂದು ಪೊಲೀಸ್ ಸೇವೆಗಳಿಗೆ ಸಂಬಂಧಿಸಿದ ಒಳಾಡಳಿತ ಇಲಾಖೆಯ ಅಧೀನ ಕಾರ್ಯ ದರ್ಶಿ ವಿಜಯಕುಮಾರ್ ಬುಧವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಏಷ್ಯಾನೆಟ್ ಕನ್ನಡಪ್ರಭ ಸುವರ್ಣ ನ್ಯೂಸ್ ವತಿಯಿಂದ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ
ಉತ್ತರ ಕನ್ನಡ: ಯುವಜನತೆಯಲ್ಲಿ ಹೆಚ್ಚುತ್ತಿದೆ ಹೆಚ್‌ಐವಿ ಸೋಂಕು, ಜೆನ್ ಝೀ ಕಿಡ್‌ ಗಳಲ್ಲೇ ಅತೀ ಹೆಚ್ಚು!