ಸಾರಿಗೆ ನೌಕರರಿಗೆ ಸರ್ಕಾರದ ಸಿಹಿ ಸುದ್ದಿ : ಸಿಬ್ಬಂದಿ ಮಕ್ಕಳ ಮನವಿಗೆ ಕರಗಿದ BSY

Published : Nov 18, 2020, 09:36 AM ISTUpdated : Nov 18, 2020, 09:54 AM IST
ಸಾರಿಗೆ ನೌಕರರಿಗೆ ಸರ್ಕಾರದ ಸಿಹಿ ಸುದ್ದಿ : ಸಿಬ್ಬಂದಿ ಮಕ್ಕಳ ಮನವಿಗೆ ಕರಗಿದ BSY

ಸಾರಾಂಶ

ರಾಜ್ಯ ರಸ್ತೆ ಸಾರಿಗೆ ನೌಕರರಿಗೆ ಕರ್ನಾಟಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ನೌಕರರ ಮಕ್ಕಳ ಮನವಿಗೆ ಸರ್ಕಾರ ಸ್ಪಂದಿಸಿದೆ. 

ಬೆಂಗಳೂರು (ನ.18):  ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಮೂರು ತಿಂಗಳ ವೇತನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

"

ಸಾರಿಗೆ ಸಚಿವ ಹಾಗೂ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಸೋಮವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಾರಿಗೆ ನೌಕರರಿಗೆ ಮೂರು ತಿಂಗಳ ವೇತನ ಬಿಡುಗಡೆಗೆ ಮನವಿ ಮಾಡಿದ್ದರು. ಮನವಿ ಸ್ಪಂದಿಸಿದ ಮುಖ್ಯಮಂತ್ರಿಗಳು ಅಕ್ಟೋಬರ್‌, ನವೆಂಬರ್‌ ಹಾಗೂ ಡಿಸೆಂಬರ್‌ ತಿಂಗಳ ವೇತನ 634.50 ಕೋಟಿ ರು. ಹಣವನ್ನು ತಕ್ಷಣ ಬಿಡುಗಡೆ ಮಾಡುವಂತೆ ಸಂಬಂಧಪಟ್ಟಅಧಿಕಾರಿಗಳಿಗೆ ಸೂಚಿಸಿದರು.

'ಸಿಎಂ ಅಂಕಲ್ ಅಪ್ಪನಿಗೆ ಸಂಬಳ ಕೊಡಿ ಪ್ಲೀಸ್, ಮನೆಯಲ್ಲಿ ಹಬ್ಬವಿಲ್ಲ' ...

ರಾಜ್ಯ ಸರ್ಕಾರ ಮೂರು ತಿಂಗಳ ವೇತನ 634.50 ಕೋಟಿ ರು. (ಶೇ.75) ಬಿಡುಗಡೆ ಮಾಡಿದರೆ, ಉಳಿದ ಶೇ.25ರಷ್ಟನ್ನು ಆಯಾ ಸಾರಿಗೆ ನಿಗಮಗಳು ತಮ್ಮದೇ ಸಂಪನ್ಮೂಲ ಬಳಸಿಕೊಂಡು ಭರಿಸಲಿವೆ. ಮುಖ್ಯಮಂತ್ರಿಗಳ ಸ್ಪಂದನೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಈಶಾನ್ಯ ಹಾಗೂ ವಾಯುವ್ಯ ಸಾರಿಗೆ ನಿಗಮಗಳ ಸುಮಾರು 1.30 ಲಕ್ಷ ನೌಕರರಿಗೆ ವೇತನ ಪಾವತಿ ಸಾಧ್ಯವಾಗಲಿದೆ. ತಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳಿಗೆ ಸಾರಿಗೆ ನಿಗಮಗಳ ಪರವಾಗಿ ಕೃತಜ್ಞತೆ ಅರ್ಪಿಸುವುದಾಗಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಕೊರೋನಾದಿಂದ ಆದಾಯ ಇಲ್ಲದೆ ಸಾರಿಗೆ ನಿಗಮಗಳು ತೀವ್ರ ಸಂಕಷ್ಟಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ನವೆಂಬರ್‌ ಅರ್ಧ ತಿಂಗಳು ಕಳೆದರೂ ನೌಕರರಿಗೆ ಅಕ್ಟೋಬರ್‌ ತಿಂಗಳ ವೇತನ ಪಾವತಿ ಮಾಡಿರಲಿಲ್ಲ. ದೀಪಾವಳಿ ಆಚರಿಸಲು ವೇತನ ಇಲ್ಲ ಎಂದು ಸಾರಿಗೆ ನೌಕರರು ಬೇಸರ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದರು. ನೌಕರರ ಮಕ್ಕಳು ಸಹ ತಮ್ಮ ತಂದೆಯ ವೇತನ ಬಿಡುಗಡೆ ಮಾಡಿ ಎಂದು ಆಗ್ರಹಿಸಿದ್ದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದವು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

KSRTC ಪ್ರಯಾಣಿಕರಿಗೆ ಬಿಗ್ ಶಾಕ್! ಇಂಧನ ಬೆಲೆ ಏರಿಕೆ ನೆಪ, ಶೀಘ್ರ ಬಸ್‌ ದರ ಹೆಚ್ಚಳ, ಸಾರಿಗೆ ಸಚಿವ ಮಹತ್ವದ ಸುಳಿವು
80ನೇ ಸ್ವಾತಂತ್ರ್ಯ ದಿನ: 72,000 ಸರ್ಕಾರಿ ನೌಕರಿ, ಉಚಿತ ಕೋಡಿಂಗ್, AI ವಿವಿ ಘೋಷಿಸಿದ ಸಿಎಂ ಡಿ.ಕೆ.ಶಿವಕುಮಾರ್!