ಕೊಂಚ ಲಾಕ್‌ಡೌನ್‌ ಸಡಿಲಿಸಿದ ಸರ್ಕಾರ

Published : Jun 06, 2021, 10:19 PM ISTUpdated : Jun 06, 2021, 10:25 PM IST
ಕೊಂಚ ಲಾಕ್‌ಡೌನ್‌ ಸಡಿಲಿಸಿದ ಸರ್ಕಾರ

ಸಾರಾಂಶ

* ರಾಜ್ಯದಲ್ಲಿ ಕಡಿಮೆಯಾದ ಕೊರೋನಾ ಪಾಸಿಟಿವಿಟಿ ಪ್ರಮಾಣ * ಹಂತ-ಹಂತವಾಗಿ ಲಾಕ್‌ಡೌನ್‌ ತೆರವು ಮಾಡಲು ಸರ್ಕಾರ ಪ್ಲಾನ್ * ಈ​ ಕಚೇರಿಗಳ ಓಪನ್​ಗೆ ಅನುಮತಿ ಕೊಟ್ಟ ಸರ್ಕಾರ

ಬೆಂಗಳೂರು, (ಜೂನ್.06): ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣದಲ್ಲಿ ​ ಇಳಿಮುಖವಾಗುತ್ತಿದ್ದಂತೆಯೇ ಸರ್ಕಾರ, ಕೆಲ ಕಚೇರಿಗಳ ಓಪನ್‌ಗೆ ಅನುಮತಿ ಕೊಟ್ಟಿದೆ.

ಹೌದು...ರಾಜ್ಯದ ಎಲ್ಲಾ ರಿಜಿಸ್ಟರ್ ಕಚೇರಿಗಳನ್ನ ತೆರೆಯುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಅವರು ಇಂದು (ಭಾನುವಾರ) ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಇಳಿಕೆ: ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆ ಡಬಲ್

 ಕೊರೋನಾ ಮಾರ್ಗಸೂಚಿಗಳನ್ನ ಅನುಸರಿಸಿ ರಿಜಿಸ್ಟ್ರಾರ್ ಕಚೇರಿಗಳನ್ನ ಓಪನ್ ಮಾಡುವಂತೆ ಅನುಮತಿ ನೀಡಲಾಗಿದೆ. ಇದರ ಅನ್ವಯ ರಾಜ್ಯದ ಎಲ್ಲಾ ಜಿಲ್ಲಾ ರಿಜಿಸ್ಟ್ರರ್ ಹಾಗೂ ಉಪ ನೋಂದಣಿ ಕಚೇರಿಗಳ ಬಾಗಿಲು ತೆರೆಯಲಿವೆ.

ಶುಕ್ರವಾರ ಶೇಕಡ 10.66 ರಷ್ಟು ಪಾಸಿಟಿವಿಟಿ ದರ ಇತ್ತು. ಕಳೆದ ಏಪ್ರಿಲ್ 15 ರ ನಂತರ ನಿನ್ನೆ (ಶನಿವಾರ) ಮೊದಲ ಬಾರಿಗೆ ಪಾಸಿಟಿವಿಟಿ ದರ ಶೇಕಡ ಶೇಕಡ 10 ಕ್ಕಿಂತ ಕಡಿಮೆಯಾಗಿ, ಭಾನುವಾರ ಶೇ.7.71 ರಷ್ಟು ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಪಾಸಿಟಿವಿಟಿ ದರ ಕಡಿಮೆಯಾದ್ರೆ ಅನ್‌ಲಾಕ್  ಮಾಡುವುದಾಗಿ ಸಿಎಂ ಹೇಳಿದ್ದರು. ಇದೀಗ ಪಾಸಿಟಿವಿಟಿ ದರ ಕಡಿಮೆಯಾಗುತ್ತಿರುವುದರಿಂದ ಲಾಕ್ ಡೌನ್ ಹಂತ ಹಂತವಾಗಿ ತೆರವುಗೊಳ್ಳುವ ಸಾಧ್ಯತೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ