
ಬೆಂಗಳೂರು, [ಫೆ.25]: ಕರ್ನಾಟಕ ರಾಜ್ಯ ಸಾರಿಗೆ ಬಸ್ ಪ್ರಯಾಣ ದರ ಏರಿಕೆಯಾಗಿದೆ. ಬಿಎಂಟಿಸಿ ಹೊರತುಪಡಿಸಿ ಕೆ.ಆರ್.ಟಿ.ಸಿ, ಈಶಾನ್ಯ ಮತ್ತು ವಾಯುವ್ಯ ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಭಾರತ-ಅಮೆರಿಕಾ ಮಹತ್ವದ ಒಪ್ಪಂದ, ನಿವೇದಿತಾ-ಚಂದನ್ ಮದ್ವೆ ಅನುಬಂಧ, ಫೆ.25ರ ಟಾಪ್ 10 ಸುದ್ದಿ
ಶೇ.12ರಷ್ಟು ಪ್ರಯಾಣ ದರ ಹೆಚ್ಚಿನ ರಾಜ್ಯ ಸರ್ಕಾರ ಇಂದು [ಮಂಗಳವಾರ] ಅನುಮೋದನೆ ಹೊರಡಿಸಿದ್ದು, ಮಂಗಳವಾರ ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.
ಸಾರಿಗೆ ನಿಗಮಗಳು ಶೇ.18ರಷ್ಟು ಪ್ರಯಾಣ ದರ ಏರಿಕೆಗೆ ಸಾರಿಗೆ ನಿಗಮಗಳು ರಾಜ್ಯ ಸರ್ಕಾರಕ್ಕೆ ಪ್ರಸ್ತಾನೆ ಕಳುಹಿಸಲಾಗಿತ್ತು. ಆದ್ರೆ, ಸರ್ಕಾರ ಶೇ.12ರಷ್ಟು ದರ ಹೆಚ್ಚಿಸಲು ಒಪ್ಪಿಗೆ ಸೂಚಿಸಿದೆ.
KSRTC ನೇಮಕಾತಿ: 3745 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ಹಲವು ವರ್ಷಗಳಿಂದ ರಾಜ್ಯ ಸಾರಿಗೆ ಬಸ್ ದರ ಪರಿಷ್ಕರಣೆ ಮಾಡಿ ಬಹಳ ವರ್ಷವಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಬಸ್ ಪ್ರಯಾಣ ದರಲ್ಲಿ ಏರಿಕೆ ಮಾಡಲಾಗಿದೆ ಎನ್ನುವುದು ಸಾರಿಗೆ ನಿಗಮದ ಮಾತು.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ