ವದಂತಿ ನಿವಾರಣೆಗೆ ಬರ್ತಾರೆ ಕೊರೋನಾ ಯೋಧರು!

Published : Mar 22, 2020, 07:37 AM IST
ವದಂತಿ ನಿವಾರಣೆಗೆ ಬರ್ತಾರೆ ಕೊರೋನಾ ಯೋಧರು!

ಸಾರಾಂಶ

ವದಂತಿ ನಿವಾರಣೆಗೆ ಬರ್ತಾರೆ ಕೊರೋನಾ ಯೋಧರು!|  ನೈಜ ಮಾಹಿತಿ ನೀಡಲು ವಾರ್ತಾ ಇಲಾಖೆ ಯತ್ನ| ಆಸಕ್ತ ಸ್ವಯಂ ಸೇವಕರಿಂದ ಅರ್ಜಿ ಆಹ್ವಾನ

ಬೆಂಗಳೂರು(ಮಾ.22): ಕೊರೋನಾ ವೈರಸ್‌ ಸೋಂಕು ಕುರಿತು ಹರಡುವ ವದಂತಿಗಳು ಹಾಗೂ ಅಪಪ್ರಚಾರಗಳನ್ನು ತಡೆದು ಜನರಿಗೆ ನೈಜ ಮಾಹಿತಿ ಒದಗಿಸಲು ವಾರ್ತಾ ಇಲಾಖೆಯು ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯನಿರ್ವಹಿಸಲು ‘ಕೊರೋನಾ ಯೋಧ’ ಸ್ವಯಂ ಸೇವಕರಿಗೆ ಅರ್ಜಿ ಆಹ್ವಾನಿಸಿದೆ.

ಭಾರತೀಯ ರೆಡ್‌ ಕ್ರಾಸ್‌ ಸೊಸೈಟಿ ಹಾಗೂ ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆ ಸಹಯೋಗದಲ್ಲಿ ಕೊರೋನಾ ಯೋಧರು ಕೆಲಸ ಮಾಡಲಿದ್ದಾರೆ. ಈ ಸ್ವಯಂ ಸೇವಕರು ರಾಜ್ಯಾದ್ಯಂತ ಎಲ್ಲಾ ತಾಲೂಕುಗಳಲ್ಲಿ ಹರಡುವ ವದಂತಿಗಳ ಬಗ್ಗೆ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನೈಜ ಮಾಹಿತಿಯನ್ನು ಜನರಿಗೆ ತಲುಪಿಸಲು ಉಪಕಾರ ಮಾಡಬೇಕು.

ರಾಜ್ಯದ ಪ್ರತಿ ತಾಲೂಕಿನಲ್ಲಿ ಕನಿಷ್ಠ 4 ಸ್ವಯಂಸೇವಕರು ದಿನಕ್ಕೆ ನಾಲ್ಕು ಪಾಳಿಗಳಲ್ಲಿ ಕಾರ್ಯನಿರ್ವಹಿಸಬೇಕು. ಬೆಂಗಳೂರು ನಗರದಲ್ಲೇ ಸುಮಾರು 120 ಸ್ವಯಂ ಸೇವಕರಿಗೆ ಅವಕಾಶವಿದ್ದು, ರಾಜ್ಯಾದ್ಯಂತ ಸುಮಾರು 3,000 ಸ್ವಯಂ ಸೇವಕರು ಭಾಗವಹಿಸಬಹುದು.

ಈಗಾಗಲೇ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಿ ನೋಂದಾಯಿಸಿಕೊಳ್ಳಬೇಕು. ಬಳಿಕ ಈ ಸ್ವಯಂ ಸೇವಕರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಎಲ್ಲಾ ಜಿಲ್ಲಾ ಕಚೇರಿಗಳಲ್ಲಿ ಸೂಕ್ತ ತರಬೇತಿ, ಸುರಕ್ಷತಾ ಕಿಟ್‌ ಹಾಗೂ ಗುರುತಿನ ಚೀಟಿ ಒದಗಿಸಲಾಗುವುದು. ಆಸಕ್ತರು: https://covid19.karnataka.gov.in/coronawarrior.html ಅಂತರ್ಜಾಲ ತಾಣಕ್ಕೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!