ಕಾರ್ಮಿಕರಿಗೆ ಜ್ವರ ಇದ್ದರೆ ಕ್ವಾರಂಟೈನ್‌ಗೆ, ಇಲ್ಲದಿದ್ದರೆ ಮನೆಗೆ!

Published : May 03, 2020, 08:09 AM ISTUpdated : May 03, 2020, 09:45 AM IST
ಕಾರ್ಮಿಕರಿಗೆ ಜ್ವರ ಇದ್ದರೆ ಕ್ವಾರಂಟೈನ್‌ಗೆ, ಇಲ್ಲದಿದ್ದರೆ ಮನೆಗೆ!

ಸಾರಾಂಶ

ಕಾರ್ಮಿಕರಿಗೆ ಜ್ವರ ಇದ್ದರೆ ಕ್ವಾರಂಟೈನ್‌ಗೆ, ಇಲ್ಲದಿದ್ದರೆ ಮನೆಗೆ| ಕೆಮ್ಮು, ನೆಗಡಿ, ಉಸಿರಾಟ ತೊಂದರೆಯಿದ್ದರೂ ಕ್ವಾರಂಟೈನ್‌ಗೆ

ಬೆಂಗಳೂರು(ಮೇ.03): ರಾಜ್ಯದಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ತೆರಳುತ್ತಿರುವ ಅಂತರ್‌ ಜಿಲ್ಲಾ ಪ್ರಯಾಣಿಕರನ್ನು ಕಡ್ಡಾಯವಾಗಿ ಆರೋಗ್ಯ ತಪಾಸಣೆಗೆ ಒಳಪಡಿಸುವಂತೆ ರಾಜ್ಯ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ವಲಸೆ ಕಾರ್ಮಿಕರು, ಪ್ರವಾಸಿಗಳು, ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಿಲುಕಿರುವವರಿಗೆ ಸ್ವಂತ ಊರುಗಳಿಗೆ ತೆರಳಲು ಒಂದು ಬಾರಿಗೆ ಅವಕಾಶ ನೀಡಲಾಗಿದೆ. ಇಂತಹವರನ್ನು ಆಯಾ ಜಿಲ್ಲಾಧಿಕಾರಿಗಳು, ಆರೋಗ್ಯ ಅಧಿಕಾರಿಗಳು ಕಡ್ಡಾಯವಾಗಿ ಜಿಲ್ಲಾ ಚೆಕ್‌ಪೋಸ್ಟ್‌ ಅಥವಾ ನಿಗದಿತ ಸ್ಥಳದಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಬೇಕು.]

ಮುಂಬೈ ಆ್ಯಂಬುಲೆನ್ಸ್‌ನಿಂದ ಮಂಡ್ಯದಲ್ಲಿ ಕೊರೋನಾತಂಕ!

ಎಲ್ಲರನ್ನೂ ಥರ್ಮಲ್‌ ಸ್ಕಾ್ಯನರ್‌ ಮೂಲಕ ತಪಾಸಣೆ ನಡೆಸಿ ದೇಹದ ತಾಪಮಾನ ಸಾಮಾನ್ಯವಿದ್ದು, ಆರೋಗ್ಯವಂತವಾಗಿದ್ದರೆ ಮಾತ್ರ ಆಯಾ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಿ ಮನೆಗಳಿಗೆ ಕಳುಹಿಸಬೇಕು. ಇನ್ನು ದೇಹದ ತಾಪಮಾನ 37.5 ಡಿಗ್ರಿಗಿಂತ ಹೆಚ್ಚಿರುವುದು, ಕೆಮ್ಮು, ನೆಗಡಿ, ಉಸಿರಾಟ ತೊಂದರೆಯಂತಹ ಸಮಸ್ಯೆ ಇದ್ದರೆ ಸಾಂಸ್ಥಿಕ ಕ್ವಾರಂಟೈನ್‌ಗೆ ಕಳುಹಿಸಿ ಮುಂದಿನ ವೈದ್ಯಕೀಯ ತಪಾಸಣೆ ನಡೆಸಬೇಕು.

ವೈದ್ಯರು ಅವರಿಗೆ ಕೊರೋನಾ ಲಕ್ಷಣಗಳಿವೆ ಎಂದು ಭಾವಿಸಿದರೆ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಬೇಕು. ಸೋಂಕು ದೃಢಪಟ್ಟರೆ ನಿಗದಿ ಆಸ್ಪತ್ರೆಗೆ ಸ್ಥಳಾಂತರಿಸಬೇಕು. ವರದಿ ನೆಗೆಟಿವ್‌ ಬಂದರೆ ಕೈ ಮೇಲೆ ಕ್ವಾರಂಟೈನ್‌ ಮುದ್ರೆ ಒತ್ತಿ 14 ದಿನಗಳ ಕಾಲ ಹೋಂ ಕ್ವಾರಂಟೈನ್‌ಗೆ ಕಳುಹಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ