ಸಾರ್ವಜನಿಕರೊಂದಿಗೆ ಆಫೀಸರ್, ಸಿಬ್ಬಂದಿ ಹೇಗಿರಬೇಕು? ಸರ್ಕಾರದಿಂದ ಮಹತ್ವದ ಸುತ್ತೋಲೆ

Published : Dec 16, 2020, 06:42 PM IST
ಸಾರ್ವಜನಿಕರೊಂದಿಗೆ ಆಫೀಸರ್, ಸಿಬ್ಬಂದಿ ಹೇಗಿರಬೇಕು? ಸರ್ಕಾರದಿಂದ ಮಹತ್ವದ ಸುತ್ತೋಲೆ

ಸಾರಾಂಶ

ಸಾರ್ವಜನಿಕರೊಂದಿಗೆ ಸೌಜನ್ಯಯುತ, ಸಮಾಧಾನದಿಂದ ವರ್ತಿಸುವಂತೆ ರಾಜ್ಯ ಸರ್ಕಾರ ಮಹತ್ದ ಆದೇಶ ಹೊರಡಿಸಿದೆ.

ಬೆಂಗಳೂರು, (ಡಿ.16) : ಸರ್ಕಾರಿ ಸೇವೆಯು ಸಾರ್ವಜನಿಕ ಸೇವೆಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಕಛೇರಿಗಳಿಗೆ ಬರುವಂತ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ಹಾಗೂ ಸಮಾಧಾನವಾಗಿ ವರ್ತಿಸುವಂತೆ ರಾಜ್ಯ ಸರ್ಕಾರ, ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸೂಚಿಸಿದೆ.

ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಆಸು-ತಪಾಸಣೆ)ಯ ಸರ್ಕಾರದ ಅಧೀನ ಕಾರ್ಯದರ್ಶಿ ಹೆಚ್.ಸಿ.ಹರ್ಷರಾಣಿ, ಸರ್ಕಾರಿ ಸೇವೆಯು ಸಾರ್ವಜನಿಕ ಸೇವೆಯಾಗಿರುವುದರಿಂದ, ಸಾರ್ವಜನಿಕರು ತಮ್ಮ ಸಮಸ್ಯೆಯ ಕುರಿತು ವ್ಯವಹರಿಸಲು ಸರ್ಕಾರಿ ಕಛೇರಿಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ, ಸಮಾಧಾನವಾಗಿ ವರ್ತಿಸ ಬೇಕೆಂದು ತಿಳಿಸಿದೆ.

ಬಲಿಷ್ಠ ಭಾರತ ತಂಡ ಪ್ರಕಟ, ಕೋತಿ ದಾಳಿಯಿಂದ ಬಚಾವ್ ಆದ ಶಾಸಕ; ಡಿ.16ರ ಟಾಪ್ 10 ಸುದ್ದಿ!

ಇನ್ನೂ ಮುಂದುವರೆದು, ತಾರತಮ್ಯ ಮಾಡದೇ ಬಂದವರೆಲ್ಲರಿಗೂ ಕುರ್ಚಿಗಳಲ್ಲಿ ಕುಳಿತುಕೊಳ್ಳಲು ಹೇಳುವಂತೆ ಸಚಿವಾಲಯದ ಅಧಿಕಾರಿ, ಸಿಬ್ಬಂದಿಗಳಿಗೆ ಹಾಗೂ ಅಧೀನ ಇಲಾಖೆಗಳ ಮುಖ್ಯಸ್ಥರ ಮೂಲಕ ಎಲ್ಲಾ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳಿಗೆ ತಿಳಿಸುವಂತೆ ಸೂಚಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ