
ಬೆಂಗಳೂರು, (ಜು.31): ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನವೇ ಮಾಸಾಶನಗಳ ಹೆಚ್ಚಳ ಘೋಷಣೆ ಮಾಡಿದ್ದರು. ಇಂದು (ಶನಿವಾರ) ಮಾಸಾಶನಗಳನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ರೈತ ಮಕ್ಕಳಿಗೆ ಶಿಕ್ಷಣ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ವೇತನ ಹೆಚ್ಚಳ ಮಾಡಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಿದ ದಿನ(ಜುಲೈ.28)ರಂದು ಘೋಷಿಸಿದ್ದರು. ಇದೀಗ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಿಡಿಸಿದೆ.
ಸಿಎಂ ಆದ ಮೊದಲ ದಿನವೇ ಮಹತ್ವದ ಘೋಷಣೆ ಮಾಡಿದ ಬಸವರಾಜ ಬೊಮ್ಮಾಯಿ..!
ಅಂಗವೈಕಲ್ಯವಿರುವವರಿಗೆ ಮಾಸಿಕವಾಗಿ ಈಗ ನೀಡಲಾಗುತ್ತಿರುವ 600 ರೂಪಾಯಿಗಳ ವೇತನವನ್ನು 800 ರೂಗೆ ಏರಿಕೆ ಮಾಡಲಾಗಿದ್ದು, 3.66 ಸಾವಿರ ಫಲಾನುಭವಿಗಳು ಪ್ರಯೋಜನವಾಗಲಿದ್ದು ಸರ್ಕಾರದ ಬೊಕ್ಕಸಕ್ಕೆ 90 ಕೋಟಿ ಹೆಚ್ಚು ವೆಚ್ಚವಾಗಲಿದೆ
ವಿಧವಾ ವೇತನವನ್ನೂ 600 ರಿಂದ 800 ರೂಪಾಯಿಗಳಿಗೆ ಏರಿಕೆ ಮಾಡಲಾಗಿದ್ದು, 17.25 ಲಕ್ಷ ಫಲಾನುಭವಿಗಳಿಗೆ ಪ್ರಯೋಜನವಾಗಲಿದೆ ಹಾಗೂ 414 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ.
ಸಂಧ್ಯಾ ಸುರಕ್ಷಾ ಯೋಜನೆಯಡಿ ಪಿಂಚಣಿಯನ್ನು ತಿಂಗಳಿಗೆ 1,000ರಿಂದ 1200 ರೂಪಾಯಿಗಳಿಗೆ ಏರಿಕೆ ಮಾಡಿದ್ದು, ಇದರಿಂದ 35 ಲಕ್ಷ ಫಲಾನುಭವಿಗಳಿಗೆ ಲಾಭ ಉಂಟಾಗಲಿದೆ. ಸರ್ಕಾರಕ್ಕೆ 863 ಕೋಟಿ ರೂಪಾಯಿ ಹೆಚ್ಚು ಖರ್ಚಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ