3 ಪಾಳಿಯಲ್ಲಿ ನಮಾಜ್‌ : ಕಡ್ಡಾಯ ರೂಲ್ಸ್ - ಇಲ್ಲೆಲ್ಲಾ ಮಸೀದಿ ಬಂದ್‌

Kannadaprabha News   | Asianet News
Published : Apr 15, 2021, 08:13 AM ISTUpdated : Apr 15, 2021, 08:30 AM IST
3 ಪಾಳಿಯಲ್ಲಿ ನಮಾಜ್‌ :  ಕಡ್ಡಾಯ ರೂಲ್ಸ್ - ಇಲ್ಲೆಲ್ಲಾ ಮಸೀದಿ ಬಂದ್‌

ಸಾರಾಂಶ

ಕೋವಿಡ್‌-19ರ ಹಾವಳಿ ವಿಪರೀತವಾಗಿರುವ ಹಿನ್ನೆಲೆಯಲ್ಲಿ ಮುಸ್ಲಿಮರ ಪವಿತ್ರ ಮಾಸ ರಂಜಾನ್‌ಗೆ ಹೊಸ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಹೊರಡಿಸಿದೆ.

ಬೆಂಗಳೂರು (ಏ.15):  ರಾಜ್ಯದಲ್ಲಿ ಕೋವಿಡ್‌-19ರ ಹಾವಳಿ ವಿಪರೀತವಾಗಿರುವ ಹಿನ್ನೆಲೆಯಲ್ಲಿ ಮುಸ್ಲಿಮರ ಪವಿತ್ರ ಮಾಸ ರಂಜಾನ್‌ಗೆ ಹೊಸ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಹೊರಡಿಸಿದೆ.

ಈ ಮಾರ್ಗಸೂಚಿಯ ಪ್ರಕಾರ ಕಂಟೈನ್ಮೆಂಟ್‌ ವಲಯದಲ್ಲಿನ ಮಸೀದಿಗಳನ್ನು ಬಂದ್‌ ಮಾಡಬೇಕಿದೆ. ಉಳಿದ ಮಸೀದಿಗಳಲ್ಲಿ ಸಾಮಾಜಿಕ ಅಂತರ ಮತ್ತು ಮಾಸ್ಕ್‌ ಧಾರಣೆ ಕಡ್ಡಾಯಗೊಳಿಸಲಾಗಿದೆ.

ಮಸೀದಿಗಳಲ್ಲಿ ನಮಾಜ್‌ ಮಾಡುವಾಗ ಒಂದು ಕಾರ್ಪೆಟ್‌ ಅನ್ನು ಒಬ್ಬರೇ ಬಳಸಬೇಕು. ನಮಾಜ್‌ ಮಾಡುವ ಸ್ಥಳದಲ್ಲಿ ಮಾರ್ಕ್ ಹಾಕಬೇಕು. ಮೂರು ಪಾಳಿಯಲ್ಲಿ ನಮಾಜ್‌ ಮಾಡಬೇಕು. ಇಫ್ತಾರ್‌ ಕೂಟಗಳನ್ನು ಮನೆಯಲ್ಲೇ ಆಯೋಜಿಸಬೇಕು. 60 ವರ್ಷ ಮೇಲ್ಪಟ್ಟವರು ಮನೆಯಲ್ಲೇ ನಮಾಜ್‌ ಮಾಡಬೇಕು. ಮಸೀದಿಗೆ ಆಗಮಿಸಲು ಮತ್ತು ನಿರ್ಗಮಿಸಲು ಪ್ರತ್ಯೇಕ ಗೇಟ್‌ ವ್ಯವಸ್ಥೆ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

'ಲಾಕ್ಡೌನ್‌, ನೈಟ್‌ ಕರ್ಫ್ಯೂ ಪರಿಹಾರವಲ್ಲ: ಸಾಮೂಹಿಕ ನಮಾಜ್‌, ಜಾತ್ರೆ, ರ‍್ಯಾಲಿ ನಿಷೇಧಿಸಿ!'

ನಮಾಜ್‌ ಮುಗಿದ ತಕ್ಷಣ ಮಸೀದಿಯ ಬಾಗಿಲು ಮುಚ್ಚಬೇಕು. ನಮಾಜ್‌ ಮುಗಿದ ಬಳಿಕ ಸೋಂಕು ನಿವಾರಕ ದ್ರಾವಕವನ್ನು ಸಿಂಪಡಿಸಬೇಕು. ಕೋವಿಡ್‌ನ ಲಕ್ಷಣಗಳಾದ ಶೀತ, ಕೆಮ್ಮು, ಜ್ವರ, ಉಸಿರಾಟ ತೊಂದರೆ ಇದ್ದವರು ಮಸೀದಿ ಪ್ರವೇಶಿಸುವಂತಿಲ್ಲ ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ರಂಜಾನ್‌ ಮಾಸವು ಏಪ್ರಿಲ್‌ 14ರಿಂದ ಆರಂಭವಾಗಿದ್ದು ಮೇ 12ರವರೆಗೆ ಇರಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ