
ಬೆಂಗಳೂರು (ಏ.22): ಕೋವಿಡ್ ಸೋಂಕಿತರ ಮೃತದೇಹಗಳನ್ನು ಸಂಬಂಧಪಟ್ಟಕುಟುಂಬ ಸದಸ್ಯರು ತಮ್ಮ ಸ್ವಂತ ಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡಲು ಇಚ್ಛಿಸಿದರೆ ಇದಕ್ಕೆ ಅಗತ್ಯ ಕ್ರಮಗಳೊಂದಿಗೆ ಅವಕಾಶ ಮಾಡಿಕೊಡಬೇಕೆಂದು ಸರ್ಕಾರ ಬಿಬಿಎಂಪಿ ಆಯುಕ್ತರು, ಎಲ್ಲಾ ಜಿಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಈ ಸಂಬಂಧ ಆದೇಶ ಹೊರಡಿಸಿರುವ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಅವರು, ಸೋಂಕಿನಿಂದ ಮೃತಪಟ್ಟವರ ಮೃತ ದೇಹಗಳನ್ನು ತಮ್ಮದೇ ಒಡೆತನದ ಭೂಮಿಯಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ಮಾಡಿಕೊಡುವಂತೆ ಅನೇಕ ಕುಟುಂಬದವರು ಹಾಗೂ ಸಂಬಂಧಿಕರಿಂದ ಮನವಿಗಳು ಬಂದಿವೆ.
ಮತ್ತೆ 23 ಸಾವಿರ ಕೇಸ್.. ಬೆಂಗಳೂರಿನಲ್ಲಿ 13 ಸಾವಿರ.. ಜಿಲ್ಲೆಗಳ ಸ್ಥಿತಿ ಏನು? ...
ಇದಕ್ಕೆ ಅನುವು ಮಾಡಿಕೊಡುವುದರಿಂದ ಮೃತರ ಗೌರವಯುತ ಅಂತ್ಯಸಂಸ್ಕಾರ ಸಾಧ್ಯವಾಗಲಿದೆ. ಹೀಗಾಗಿ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಮೃತರ ಕುಟುಂಬದವರು ಅಥವಾ ಸಂಬಂಧಿಕರ ಭೂಮಿಯಲ್ಲಿ ಅಂತ್ಯಕ್ರಿಯೆಗೆ ಅವಕಾಶ ಮಾಡಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ