
ಬೆಂಗಳೂರು (ಸೆ.20): ರಾಜ್ಯದ ಎಲ್ಲ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನದಲ್ಲಿ ಪ್ರಸಾದಕ್ಕೆ ಕರ್ನಾಟಕ ಹಾಲು ಒಕ್ಕೂಟದ ನಂದಿನಿ ತುಪ್ಪವನ್ನೇ ಬಳಸುವಂತೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಪತ್ತೆಯಾದ ಬೆನ್ನಲ್ಲಿಯೇ ಇತರೆ ಖಾಸಗಿ ಕಂಪನಿಗಳ ಕಡಿಮೆ ದರದ ತುಪ್ಪಗಳನ್ನು ಬಳಸದಂತೆ ನಿಗಾವಹಿಸಲು ಮುಂದಾಗಿದೆ.
ತಿರುಪತಿ ದೇವಸ್ಥಾನದ ಲಡ್ಡುನಲ್ಲಿ ದನದ ಕೊಬ್ಬು, ಹಂದಿ ಕೊಬ್ಬು ಹಾಗೂ ಮೀನಿನ ಎಣ್ಣೆ ಬಳಕೆ ಮಾಡಿರುವ ವರದಿ ಬಹಿರಂಗಗೊಂಡ ಬೆನ್ನಲ್ಲಿಯೇ ರಾಜ್ಯದ ಎಲ್ಲಾ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪೂಜೆ ಮತ್ತು ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ ಬಳಸುವುದಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಿದೆ. ಹಾಗೂ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚಿಸಿದೆ.
ತಿರುಪತಿ ಲಡ್ಡುನಲ್ಲಿ ಪ್ರಾಣಿ ಕೊಬ್ಬಿಗೂ, ಕೆಎಂಫ್ನ ನಂದಿನಿ ತುಪ್ಪಕ್ಕೂ ಸಂಬಂಧವೇ ಇಲ್ಲ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ