Karnataka Covid Norms : ಎಣ್ಣೆ ಪ್ರಿಯರಿಗೆ ವೀಕೆಂಡ್ ಶಾಕ್

By Suvarna NewsFirst Published Jan 6, 2022, 3:44 PM IST
Highlights
  • ರಾಜ್ಯದಲ್ಲಿ ಕೊರೋನಾ ಜೊತೆಗೆ ಒಮಿಕ್ರಾನ್  ಸೋಂಕು ದಿನದಿಂದ ದಿನಕ್ಕೆ ಏರಿಕೆ
  • ಸರ್ಕಾರ ರೂಪಿಸಿದ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು  ಜಿಲ್ಲಾಧಿಕಾರಿಗಳಿಗೆ ಸೂಚನೆ  

ಬೆಂಗಳೂರು (ಜ.06): ರಾಜ್ಯದಲ್ಲಿ ಕೊರೋನಾ (Corona) ಜೊತೆಗೆ ಒಮಿಕ್ರಾನ್  ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸರ್ಕಾರ ರೂಪಿಸಿದ ನಿಯಮಾವಳಿಗಳನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ  ನೀಡಿದೆ. 

ರಾಜ್ಯದಲ್ಲಿ ಸದ್ಯ ವೀಕೆಂಡ್ ಹಾಗು ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.  ಬಾರ್, ಪಬ್,  ಹೋಟೆಲ್ (Hotel), ರೆಸ್ಟೊರೆಂಟ್‌ಗಳನ್ನು  ಹಾಗೂ ರೆಸಾರ್ಟ್‌ಗಳನ್ನು  ವೀಕೆಂಡ್ ಕರ್ಫ್ಯೂ ವೇಳೆ ಕರ್ನಾಟಕ  ಪ್ರೈವೇಟ್ ಮೆಡಿಕಲ್ ಎಷ್ಟಾಬ್ಲಿಷ್‌ಮೆಂಟ್ ಆಕ್ಟ್  2007 ಅನ್ವಯ  ಮುಚ್ಚಿಸಬೇಕೆಂದು ಆದೇಶಿಸಲಾಗಿದೆ.  ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಗಳವರೆಗೆ  ಮುಚ್ಚಿಸಬೇಕೆಂದು ಸೂಚಿಸಲಾಗಿದೆ. ಸಂಕ್ರಾಂತಿ ನಂತರ ತೆರವಾಗುವ ಸಾಧ್ಯತೆ ಇದೆ. 

ರಾಜ್ಯದಲ್ಲಿ 2 ವಾರ ವೀಕೆಂಡ್ ಕರ್ಫ್ಯೂ : ರಾಜ್ಯದಲ್ಲಿ ಕೊರೋನಾ ವೈರಸ್(Coronavrius) ಪ್ರಮಾಣ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ. ಅಲ್ಲದೇ ಬೆಂಗಳೂರಲ್ಲಿ ಮಾತ್ರ ಶಾಲೆಗಳನ್ನ ಎರಡು ವಾರ ಬಂದ್ ಮಾಡಲು ಸರ್ಕಾರ ತೀರ್ಮಾನಿಸಿದೆ.

ಇಂದು(ಮಂಗಳವಾರ) ತಜ್ಞರ ಜೊತೆಗಿನ ಸಭೆ ಬಳಿಕ ಸಚಿವರಾದ ಅಶೋಕ್, ಸುಧಾಕರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು,  ಇದೇ ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗ್ಗೆ 5ರ ವರೆಗೆ ವೀಕೆಂಡ್ ಕರ್ಫ್ಯೂ (weekend Curfew)  ಇರಲಿದೆ ಎಂದು  ಸ್ಪಷ್ಟಪಡಿಸಿದರು. 

ಕರ್ನಾಟಕದಾದ್ಯಂತ ಎರಡು ವಾರ ವೀಕೆಂಡ್ ಜಾರಿಯಲ್ಲಿರಲಿದೆ. ಇನ್ನು ಬೆಂಗಳೂರಲ್ಲಿ ಮಾತ್ರ ಎರಡು ವಾರ ಶಾಲೆ ಬಂದ್ ಮಾಡಲು ತೀರ್ಮಾನಿಸಲಾಗಿದೆ ಎಂದರು. 

ಬೆಂಗಳೂರಿನಲ್ಲಿ ಮುಂದಿನ ಎರಡು ವಾರಗಳು (ಜನವರಿ 6ರಿಂದ) 10 ಮತ್ತು 12ನೇ ತರಗತಿ ಹೊರತು ಪಡಿಸಿ ಉಳಿದ ಎಲ್ಲ ತರಗತಿಗಳನ್ನೂ ಬಂದ್ ಮಾಡಿ ಆನ್‌ಲೈನ್‌ ಮೂಲಕ ನಡೆಸಲು ನಿರ್ಧರಿಸಲಾಗಿದೆ.

ಬೆಂಗಳೂರಿನಲ್ಲಿ 10 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದೆಲ್ಲ ಕಡೆ ಆಫ್​ಲೈನ್​ ತರಗತಿ ನಿಲ್ಲುತ್ತದೆ. ಶಾಲಾ ಕಾಲೇಜುಗಳು ಆನ್​ಲೈನ್ ವಿಧಾನದಲ್ಲಿ ನಡೆಯುತ್ತದೆ. 6ನೇ ತಾರೀಖಿನಿಂದ ಜಾರಿಯಾಗುವಂತೆ ವೀಕೆಂಡ್ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಟ್ ಕರ್ಫ್ಯೂ ಇರುತ್ತದೆ. ಆಹಾರ ವಸ್ತು, ಹೊಟೆಲ್​ಗಳಲ್ಲಿ ಪಾರ್ಸೆಲ್​, ಅತ್ಯಗತ್ಯ ಸೇವೆಗಳು ಮಾತ್ರ ಇರುತ್ತವೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಂತರ ಸಚಿವರಾದ ಆರ್. ಅಶೋಕ್‌, ಡಾ.ಕೆ. ಸುಧಾಕರ್ ವಿವರಿಸಿದರು.

* ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. 
* ಚಿತ್ರಮಂದಿರ, ಮಾಲ್, ಬಾರ್, ಪಬ್​ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ ಪ್ರವೇಶ ಇರುತ್ತದೆ. ಇಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ ಆಗಿರಲಿದೆ.

* ದೇವಸ್ಥಾನಕ್ಕೆ 50 ಜನಕ್ಕೆ ಮಾತ್ರ ಅವಕಾಶ

*  ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್ ಕಡ್ಡಾಯ ಆಗಿರಲಿದೆ. 
* ಮದುವೆ ಹೊರಾಂಗಣದಲ್ಲಿದ್ದರೆ 200, ಒಳಾಂಗಣದಲ್ಲಿದ್ದರೆ 100 ಜನರಿಗೆ ಮಾತ್ರ ಅವಕಾಶ. ಅವರಿಗೂ 2 ಡೋಸ್ ಆಗಿರಬೇಕು. 
* ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್​ಟಿಪಿಸಿಆರ್ ಕಡ್ಡಾಯ. 

* ಯಾವುದೇ ರ‍್ಯಾಲಿ, ಸಭೆ, ಸಮಾರಂಭಗಳು ನಡೆಯುವಂತಿಲ್ಲ.
* ಮೆಟ್ರೋ, ಬಸ್‍ಗಳಿಗೂ ನಿರ್ಬಂಧ ವಿಧಿಸಲಾಗಿದ್ದು, ಸೀಟು ಇರುವಷ್ಟೇ ಪ್ರಯಣಿಕರಿಗೆ ಅವಕಾಶ ನೀಡಲು ಮುಂದಾಗಿದ್ದು, ಬಿಎಂಟಿಸಿ, ಮೆಟ್ರೋಗಳಲ್ಲಿ ನಿಂತು ಪ್ರಯಾಣಿಸುವಂತಿಲ್ಲ.

ನಾವು ತೆಗೆದುಕೊಂಡ ತೀರ್ಮಾನಗಳನ್ನು ವೈಜ್ಞಾನಿವಾಗಿ ವಿಶ್ವ ಆರೋಗ್ಯ ಸಂಸ್ಥೆ, ಕೇಂದ್ರ ಸರ್ಕಾರ, ಅಕ್ಕಪಕ್ಕದ ಮಹಾರಾಷ್ಟ್ರ, ಕೇರಳ, ತಮಿಳುನಾಡು ಗಳಲ್ಲಿ ತೆಗೆದುಕೊಂಡಿರುವ ತೀರ್ಮಾನಗಳನ್ನು ಪರಾಮರ್ಶಿಸಿದೆವು. ಒಮಿಕ್ರಾನ್ ಸೋಂಕು ಕೊವಿಡ್​ಗಿಂತ 5 ಪಟ್ಟು ಜಾಸ್ತಿ ಆಗ್ತಿದೆ ಅಂತ ತಜ್ಞರು ವರದಿ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಪಸ್ತುತ 3048 ಮಂದಿಗೆ ಸೋಂಕು ಬಂದಿದೆ. 147 ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ನಮ್ಮ ರಾಜ್ಯದಲ್ಲಿ ಪಾಸಿಟಿವ್ ಪ್ರಕರಣ ಶೇ 3ಕ್ಕಿಂತ ಹೆಚ್ಚಾಗುತ್ತಿದೆ. 20ರಿಂದ 50 ವರ್ಷದವರಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ತಿದೆ ಎಂದು ಆರ್. ಅಶೋಕ್ ತಿಳಿಸಿದ್ದಾರೆ.

ಬೆಂಗಳೂರಿಗೊಂದು, ಇತರೆ ಜಿಲ್ಲೆಗೊಂದು ನಿಯಮ ಜಾರಿಗೆ ನಿರ್ಧಾರ
ಕಳೆದ 3 ದಿನಗಳಿಂದ ಕೊವಿಡ್ ಎರಡು ಮೂರು ದಿನಗಳಲ್ಲಿ ಡಬಲ್ ಆಗ್ತಿದೆ. 3ರಿಂದ 6, 6ರಿಂದ 9 ಸಾವಿರ ಆಗ್ತಿದೆ. ಐದಾರು ದಿನಗಳಲ್ಲಿ 10 ಸಾವಿರ ದಾಟುವ ಅಪಾಯ ಕಂಡುಬರುತ್ತಿದೆ. ಮಹಾರಾಷ್ಟ್ರದಲ್ಲಿ ಈಗಾಗಲೇ 10 ಸಾವಿರ ದಾಟಿದೆ ಎಂದು ಹೇಳಿದ್ದಾರೆ. ಶೇ 80ರಿಂದ 85ರಷ್ಟು ಸೋಂಕು ಮೆಟ್ರೊ ನಗರಗಳಲ್ಲಿ ಕಾಣಿಸಿಕೊಳ್ತಿದೆ. ದೇಶದೆಲ್ಲೆಡೆ ಇದೇ ವಿದ್ಯಮಾನ ವರದಿಯಾಗಿದೆ. ಅಮೆರಿಕದಲ್ಲಿಯೂ ಪ್ರಸ್ತುತ 5 ಕೋಟಿಗೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಪರಿಸ್ಥಿತಿ ನಿರ್ವಹಿಸಲು ಬೆಂಗಳೂರಿಗೆ ಒಂದು, ರಾಜ್ಯದ ಇತರೆಡೆಗೆ ಮತ್ತೊಂದು ನಿಯಮಾವಳಿ ರೂಪಿಸಲು ನಿರ್ಧರಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

click me!