
ಬೆಂಗಳೂರು (ಜೂ.21): ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಗ್ರಾಮ ಪಂಚಾಯತಿಗಳಲ್ಲೇ ‘ವಾಸ ಸ್ಥಳ ದೃಢೀಕರಣ ಪತ್ರ’(Residence confirmation letter) ನೀಡುವಂತೆ ಪಂಚಾಯತಿ ಅಭಿವೃದ್ಧಿ ಅಧಿಕಾರಿ(PDO)ಗಳಿಗೆ ರಾಜ್ಯ ಸರ್ಕಾರ ಆದೇಶಿಸಿದೆ.
ಪಂಚಾಯತಿ ಅಭಿವೃದ್ಧಿ ಅಧಿಕಾರಿಯು ತಮ್ಮ ಗ್ರಾಪಂ ವ್ಯಾಪ್ತಿಯ ಅರ್ಹ ನಿವಾಸಿಗಳಿಗೆ ಒಂದು ಬಾರಿಗೆ ಅಭಿಯಾನ ಮಾದರಿಯಲ್ಲಿ ವಾಸ ಸ್ಥಳ ಪ್ರಮಾಣ ಪತ್ರ ನೀಡಬೇಕು. ಇದಕ್ಕಾಗಿ ಪ್ರಸ್ತುತ ಅಟಲ್ ಜೀ ಜನಸ್ನೇಹಿ ಕೇಂದ್ರದ ತಂತ್ರಾಂಶದಲ್ಲಿ ಲಭ್ಯವಿರುವ ಸೇವೆಯನ್ನು ಬಳಸಿಕೊಳ್ಳಬೇಕು. ವಾಸ ಸ್ಥಳ ಪ್ರಮಾಣ ಪತ್ರ ನೀಡಲು ಯಾವುದೇ ಸೇವಾ ಶುಲ್ಕವನ್ನು ವಿಧಿಸುವಂತಿಲ್ಲ. ವಾಸ ಸ್ಥಳ ದೃಢೀಕರಣ ಪತ್ರ ನೀಡಲು ಅಗತ್ಯವಿರುವ ದಾಖಲೆಗಳು ಮತ್ತು ಕಾರ್ಯವಿಧಾನದ ಕುರಿತು ಪ್ರತ್ಯೇಕ ಮಾರ್ಗಸೂಚಿ ಹೊರಡಿಸುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ವೇಳೆ ಗ್ರಾಮೀಣ ಭಾಗದ ಜನರಿಗೆ ವಾಸಸ್ಥಳದ ದಾಖಲೆ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಸರ್ಕಾರ ಈ ತೀರ್ಮಾನ ಮಾಡಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ