ಕೊರೋನಾ ಪೀಡಿತ ಕಾರ್ಮಿಕರಿಗೆ ವೇತನ ಸಹಿತ ರಜೆ, ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

Published : Mar 05, 2020, 04:04 PM ISTUpdated : Mar 05, 2020, 04:06 PM IST
ಕೊರೋನಾ ಪೀಡಿತ ಕಾರ್ಮಿಕರಿಗೆ ವೇತನ ಸಹಿತ ರಜೆ, ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಸಾರಾಂಶ

ಡೆಡ್ಲಿ ಕೊರೋನಾ ವೈರಸ್ ಕರ್ನಾಟಕ್ಕೂ ಕಾಲಿಟ್ಟಿದ್ದು, ಜನರು ಆತಂಕ ಸೃಷ್ಟಿಸಿದೆ. ರಾಜ್ಯದಲ್ಲಿ ಕೊರೊನಾ ಭೀತಿ ಹಿನ್ನೆಲೆ ಸರ್ಕಾರದಿಂದ ಕಾರ್ಮಿಕ ಇಲಾಖೆಗೆ ಮಹತ್ವದ ಸುತ್ತೋಲೆ ಹೊರಡಿಸಿದೆ.

ಬೆಂಗಳೂರು, (ಮಾ.05): ಚೀನಾದಲ್ಲಿ ಹುಟ್ಟಿಕೊಂಡಿರುವ ಕೊರೋನಾ ಮಹಾಮಾರಿ ಇದೀಗ ಇಡೀ ವಿಶ್ವವನ್ನೇ ವ್ಯಾಪಿಸುತ್ತಿದೆ. ಇದರಿಂದ ಆಯಾ ದೇಶಗಳಲ್ಲಿ ಮುಮಜಾಗ್ರತಾ ಕ್ರಮವಾಗಿ ನಾನಾ ಕ್ರಮಗಳನ್ನ ಕೈಗೊಳ್ಳಲಾಗಿದೆ.

ಇನ್ನು ದುಬೈಗೆ ತೆರಳಿದ್ದ ಟೆಕ್ಕಿಯೊಬ್ಬ ಬೆಂಗಳೂರಿ ಬಂದು ಹೋಗಿದ್ದರಿಂದ ರಾಜ್ಯದಲ್ಲೂ ಕೊರೋನಾ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆ ಹೈಅಲರ್ಟ್ ಆಗಿದೆ. ಇದೀಗ ಕೊರೋನಾ ಪೀಡಿತ ಕಾರ್ಮಿಕರಿದ್ದರೆ 28 ದಿನ ರಜೆ ಕೊಡಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಬೆಂಗಳೂರು: ಟೆಕ್ಕಿಗೆ ಕೊರೊನಾ ವೈರಸ್, ಕಂಪನಿಗೆ ರಜೆ ಘೋಷಣೆ

ಸರ್ಕಾರದ ಉಪ ಕಾರ್ಯದರ್ಶಿ ಸಂಧ್ಯಾ ಎಲ್‌ ನಾಯಕ್  ಅವರು ಕೊರೋನಾ ಪೀಡಿತ ಕಾರ್ಮಿಕರಿದ್ದರೆ ವೇತನ ಸಹಿತ 28 ದಿನ ರಜೆ ಕೊಡಬೇಕು ಎಂದು ಕಾರ್ಮಿಕ ‌ಇಲಾಖೆಗೆ ಆದೇಶಿಸಿದೆ.

ಕೊರೋನಾ ಬಾಧಿತರು ವೈದ್ಯರಿಂದ ಪ್ರಮಾಣ ಪತ್ರ ಪಡೆದು ಸಲ್ಲಿಸಬೇಕು. ಕಾರ್ಮಿಕರಿಗೆ ಇಎಸ್ ಐ ವೈದ್ಯಾಧಿಕಾರಿಗಳು ತುರ್ತಾಗಿ ಪ್ರಮಾಣ ಪತ್ರ ನೀಡಬೇಕು. ಇಎಸ್ ಐ ಕಾಯ್ದೆ ಅನ್ವಯ ಆಗದ ಸಂಸ್ಥೆಗಳು ಕೂಡ ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಲಂ 15 (3) ಅನ್ವಯ ರಜೆ ನೀಡಬೇಕು ಎಂದು ರಾಜ್ಯ ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ
ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್