ಮದ್ಯ ಬೆನ್ನಲ್ಲೇ KSRTC ಬಸ್ ಸಂಚಾರಕ್ಕೂ ಅನುಮತಿ: ಯಾವಾಗಿನಿಂದ..?

Published : May 02, 2020, 02:10 PM ISTUpdated : May 02, 2020, 06:25 PM IST
ಮದ್ಯ ಬೆನ್ನಲ್ಲೇ KSRTC ಬಸ್ ಸಂಚಾರಕ್ಕೂ ಅನುಮತಿ: ಯಾವಾಗಿನಿಂದ..?

ಸಾರಾಂಶ

ಮೇ.17ರ ವರೆಗೆ ಲಾಕ್‌ಡೌನ್ ವಿಸ್ತರಿಸಿದರೂ ಸಹ ಕೆಲವುಗಳಿಗೆ ಸಡಿಲಿಕೆ ನೀಡಲಾಗಿದೆ. ಮದ್ಯಕ್ಕೆ ಅನುಮತಿ ಸಿಕ್ಕ ಬೆನ್ನಲ್ಲೇ ಇದೀಗ ಸಾರಿಗೆ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಯಾವಾಗಿನಿಂದ..?

ಬೆಂಗಳೂರು, (ಮೇ.02) : ಕೊರೋನಾ ವೈರಸ್ ನಿಯಂತ್ರಣ ಹಿನ್ನೆಲೆಯಲ್ಲಿ ಕಳೆದ 40 ದಿನಗಳಿಂದ ಲಾಕ್ ಡೌನ್ ಇದ್ದು, ಮೇ.4ರ ಬಳಿಕ ಮತ್ತೆ ಕೆಲ ಸಡಿಲಿಕೆಯೊಂದಿಗೆ ಲಾಕ್ ಡೌನ್ ವಿಸ್ತರಣೆಯಾಗಿದೆ. 

"

ಈ ಹಿನ್ನೆಲೆಯಲ್ಲಿ ಮೇ.4 ರ ಬಳಿಕ ಹಾಟ್ ಸ್ಪಾಟ್ ಗಳಲ್ಲದ ಪ್ರದೇಶಗಳಲ್ಲಿ ಕೆಲ ನಿರ್ಬಂಧಗಳೊಂದಿಗೆ ಸಾರಿಗೆ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲು ಚಿಂತನೆ ನಡೆಸಲಾಗಿದೆ.

ರೆಡ್ ಝೋನ್ ವಿಂಗಡಣೆಯಲ್ಲಿ ಗೊಂದಲ: ಕೇಂದ್ರದ ಪ್ರಕಾರ 3, ರಾಜ್ಯದ ಪ್ರಕಾರ 14..!

ಮೇ.4ರರಂದ ಬಸ್ ಸಂಚಾರ
ಹೌದು.. ಈ ಕುರಿತಂತೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮಾಹಿತಿ ನೀಡಿದ್ದು, ಹಾಟ್ ಸ್ಪಾಟ್ ಗಳಲ್ಲದ ಪ್ರದೇಶಗಳಲ್ಲಿ ಆಯಾ ತಾಲೂಕುಗಳಲ್ಲಿ ಸಾರಿಗೆ ಸಂಚರಿಸಲಿವೆ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ನಿಗದಿಪಡಿಸಿರುವ ಚಟುವಟಿಕೆಗಳಿಗೆ ಆಯಾ ಝೋನ್ ಗಳಲ್ಲಿ ಅವಕಾಶ ನೀಡಲಾಗಿದೆ. ಮೇ. 4ರಿಂದ ಕೊರೋನಾ ಹಾಟ್‌ ಸ್ಪಾಟ್ ಹೊರತುಪಡಿಸಿ ಇನ್ನುಳಿದ ಕಡೆಗಳಲ್ಲಿ ಸಾರಿಗೆ ಬಸ್ ಸಂಚರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಇನ್ನು ಕಳೆದ 40 ದಿನಗಳ ಲಾಕ್ ಡೌನ್ ನಿಂದಾಗಿ ಸಾರಿಗೆ ಸಂಚಾರವಿಲ್ಲದೇ ಸಾರಿಗೆ ನಿಗಮಗಳು ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ ಸಾರಿಗೆ ನೌಕರರಿಗೆ ಸಂಬಳ ನೀಡಲು ಕಷ್ಟವಾಗುತ್ತಿದೆ. ಅದಕ್ಕಾಗಿ ಕೊರೊನಾ ಸೋಂಕು ಇಲ್ಲದ ಗ್ರೀನ್ ಝೋನ್, ಆರೆಂಜ್ ಜೋನ್ ಗಳಲ್ಲಿ ಸೀಮಿತ ಪ್ರಮಾಣದಲ್ಲಿ ಸಾರಿಗೆ ಸಂಚಾರ ವ್ಯವಸ್ಥೆ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ