3ನೇ ಅಲೆ ಎದುರಿಸಲು ಸರ್ಕಾರ ಸಿದ್ಧ : ತಜ್ಞರ ಸಮಿತಿ ವರದಿ ಆಧರಿಸಿ ಕ್ರಮ

Published : Jun 13, 2021, 08:54 AM ISTUpdated : Jun 13, 2021, 09:01 AM IST
3ನೇ ಅಲೆ ಎದುರಿಸಲು ಸರ್ಕಾರ ಸಿದ್ಧ :  ತಜ್ಞರ ಸಮಿತಿ ವರದಿ ಆಧರಿಸಿ ಕ್ರಮ

ಸಾರಾಂಶ

ಮೂರನೇ ಅಲೆಯನ್ನು ಎದುರಿಸಲು ಸರ್ಕಾರ  ಸಿದ್ಧ ಜನರು ಭೀತಿಪಡುವ ಅಗತ್ಯವಿಲ್ಲ ಎಂದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ  ಡಾ. ದೇವಿಪ್ರಸಾದ್‌ ಶೆಟ್ಟಿಅವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚನೆ

ಶಿವಮೊಗ್ಗ (ಜೂ.13):  ಕೋವಿಡ್‌ ಮೂರನೇ ಅಲೆಯನ್ನು ಎದುರಿಸಲು ಸರ್ಕಾರ ಎಲ್ಲ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರು ಭೀತಿಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕೋವಿಡ್‌ ನಿರ್ವಹಣೆ ಹಾಗೂ ವಿವಿಧ ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರನೇ ಅಲೆ ಕುರಿತು ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ಸರ್ಕಾರ ಡಾ. ದೇವಿಪ್ರಸಾದ್‌ ಶೆಟ್ಟಿಅವರ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ಈಗಾಗಲೇ ರಚಿಸಿದೆ. ಈ ಸಮಿತಿ ಮೂರ್ನಾಲ್ಕು ದಿನಗಳಲ್ಲಿ ವರದಿಯನ್ನು ಸಲ್ಲಿಸಲಿದ್ದು, ಸಮಿತಿಯ ವರದಿಯ ಆಧಾರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಮತ್ತೆ ರಾಜ್ಯದಲ್ಲಿ 5% ಗಡಿ ದಾಟಿದ ಪಾಸಿಟಿವಿಟಿ ದರ ...

ಅಲ್ಲದೆ ಮೂರನೇ ಅಲೆಯಿಂದ ಮಕ್ಕಳಿಗೆ ತೊಂದರೆಯಾಗಲಿದೆ ಎಂಬ ವರದಿಗಳಿದ್ದು, ಕೋವಿಡ್‌ನಿಂದ ಮಕ್ಕಳನ್ನು ರಕ್ಷಿಸಲು ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಮಾಡಲಾಗುವುದು. ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 75 ಮಕ್ಕಳ ಐಸಿಯು ಬೆಡ್‌ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದು ಹೇಳಿದರು. ಸಚಿವರಾದ ಭೈರತಿ ಬಸವರಾಜ್‌, ಕೆ.ಎಸ್‌. ಈಶ್ವರಪ್ಪ, ಕೆ. ಸುಧಾಕರ್‌, ಸಂಸದ ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು.

ಶಿವಮೊಗ್ಗ ಮಾದರಿ ಜಿಲ್ಲೆ: ಇನ್ನು ಒಂದೂವರೆ ವರ್ಷದಲ್ಲಿ ಶಿವಮೊಗ್ಗ ರಾಜ್ಯದಲ್ಲೆ ಮಾದರಿ ಜಿಲ್ಲೆಯಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಈಗಾಗಲೇ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಅಭಿವೃದ್ದಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕರ್ನಾಟಕದಲ್ಲಿ ವಾಹನ ಸವಾರರಿಗೆ ಶಾಕ್: ವಾಯು ಮಾಲಿನ್ಯ ತಪಾಸಣೆ ದರ ಹೆಚ್ಚಳ! ಯಾವ ಗಾಡಿಗೆ ಎಷ್ಟೆಷ್ಟು?
ರಾಜ್ಯದಲ್ಲಿ ಅಪ್ಪನ ಮಗನೇ ಮಿನಿಸ್ಟರ್ ಇರೋದು; ಅಕ್ರಮ ಬಾಂಗ್ಲಾದೇಶಿಗರನ್ನ ಹೊರದಬ್ಬಿ: ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿಕೆ