
ಬೆಂಗಳೂರು, (ಆ.23): ರಾಜ್ಯ ಸರ್ಕಾರ ಜುಲೈ ತಿಂಗಳ ವೇತನ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ಒಟ್ಟು 60.82 ಕೋಟಿ ಹಣವನ್ನ ಬಿಡುಗಡೆ ಮಾಡಿ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಸತ್ಯವತಿ ಇಂದು (ಆ.23) ಆದೇಶ ಹೊರಡಿಸಿದ್ದಾರೆ.
2021-22 ನೇ ಸಾಲಿನ ಆಯವ್ಯಯದ ಸಹಾಯಧನದಡಿ ಒದಗಿಸಿರುವ ಅನುದಾನದಡಿ ಒಟ್ಟಾರೆ 60.82 ಕೋಟಿ ರೂ ಹಣ ಬಿಡುಗಡೆಗೊಳಿಸಿದ್ದಾರೆ.
ರಾಷ್ಟ್ರೀಯ ನಗದೀಕರಣ ಪೈಪ್ಲೈನ್ಗೆ ಚಾಲನೆ; 6 ಲಕ್ಷ ಕೋಟಿ ರೂ ಯೋಜನೆ ಘೋಷಿಸಿದ ನಿರ್ಮಲಾ!
ಕೆಎಸ್ಆರ್ಟಿಸಿ, ವಾಯುವ್ಯ, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳ ಸಿಬ್ಬಂದಿ ಜುಲೈ ತಿಂಗಳ ಸಂಬಳಕ್ಕಾಗಿ ಶೇಕಡ 25% ರಷ್ಟು ಹಣವನ್ನ ನೀಡಿದೆ.
ಕೆಎಸ್ಆರ್ಟಿಸಿಗೆ 27.74 ಕೋಟಿ, ವಾಯುವ್ಯ ಸಾರಿಗೆ ನಿಗಮಕ್ಕೆ 17.48 ಕೋಟಿ, ಕಲ್ಯಾಣ ಕರ್ನಾಟಕ ಸಾರಿಗೆಗೆ 15.61 ಕೋಟಿ ಹಣವನ್ನ ಬಿಡುಗಡೆ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ