
ಬೆಂಗಳೂರು, (ಜೂ.28): ಈಗಾಗಲೇ ಜಾರಿಯಲ್ಲಿರುವ ಕ್ವಾರಂಟೈನ್ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಪರಿಷ್ಕರಣೆ ಮಾಡಿ ಹೊಸ ಆದೇಶವನ್ನು ಸರ್ಕಾರ ಹೊರಡಿಸಿದೆ.
ಸರ್ಕಾರದ ಹೊಸ ಆದೇಶದ ಪ್ರಕಾರ ಮಹಾರಾಷ್ಟ್ರದಿಂದ ಆಗಮಿಸುವವರಿಗೆ 7 ದಿನ ಸಾಂಸ್ಥಿಕ ಕ್ವಾರಂಟೈನ್ ಹಾಗೂ 7 ದಿನಗಳ ಕಾಲ ಹೋಮ್ ಕ್ವಾರಂಟೈನ್ ಕಡ್ಡಾಯ.
ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರೋರಿಗೆ ಮತ್ತೊಂದು ರೂಲ್ಸ್ ಮಾಡಿದ ಸರ್ಕಾರ
ಇನ್ನು ಮಹಾರಾಷ್ಟ್ರ ಹೊರತಾಗಿ ಇತರೆ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಬದಲು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಪಾಲನೆ ಮಾಡುವಂತೆ ಆದೇಶದಲ್ಲಿ ಉಲ್ಲೇಖಿಸಿದೆ.
ಅದರಲ್ಲೂ ಮಹಾರಾಷ್ಟ್ರದಿಂದ ಆಗಮಿಸಿದವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಪ್ರಾಥಮಿಕ, ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ನಲ್ಲಿರಿಸಲು ಸರ್ಕಾರ ಹರಸಾಹಸ ಪಡುತ್ತಿದೆ.
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರ ಸ್ವರೂಪದಲ್ಲಿ ಹರಡುತ್ತಿದೆ. ಅದರಲ್ಲೂ ಬೆಂಗಳೂರು ನಗರದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಸೋಂಕು ನಿಯಂತ್ರಣ ಮಾಡಲು ಸಾಕಷ್ಟು ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ