ಕೊರೋನಾ ಸಂಕಷ್ಟದಲ್ಲಿದ್ದ ರಾಜ್ಯ ಸಾರಿಗೆ ನೌಕರರಿಗೆ ಗುಡ್ ನ್ಯೂಸ್

Published : Jul 24, 2020, 08:48 PM ISTUpdated : Jul 24, 2020, 08:50 PM IST
ಕೊರೋನಾ ಸಂಕಷ್ಟದಲ್ಲಿದ್ದ ರಾಜ್ಯ ಸಾರಿಗೆ ನೌಕರರಿಗೆ ಗುಡ್ ನ್ಯೂಸ್

ಸಾರಾಂಶ

ಕೊರೋನಾ ಪರಿಣಾಮ ಆರ್ಥಿಕ ಮುಗಗ್ಗಟ್ಟ ಎದುರಾಗಿದೆ. ಇದರ ನಡುವೆ ಬಿಎಸ್‌ವೈ ಸರ್ಕಾರ ಸಂಕಷ್ಟದಲ್ಲಿದ್ದ ರಾಜ್ಯ ಸಾರಿಗೆ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ.

ಬೆಂಗಳೂರು, (ಜುಲೈ.24) : ಕೊರೋನಾ ಸಂಕಷ್ಟದಲ್ಲಿದ್ದ ರಾಜ್ಯ ಸಾರಿಗೆ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯ ಸರ್ಕಾರ ಬಾಕಿ ಉಳಿದಿದ್ದ ನೌಕರರ ವೇತನದ ಹಣ ಬಿಡುಗಡೆ ಮಾಡಿದೆ.

ಕೊರೋನಾ ಲಾಕ್ ಡೌನ್ ಹಿನ್ನೆಲೆ ರಾಜ್ಯದ ಸಾರಿಗೆ ನೌಕರರಿಗೆ ಕಳೆದ ಕೆಲವು ತಿಂಗಳಿನಿಂದ ವೇತನ ಸಿಕ್ಕಿರಲಿಲ್ಲ. ಕೊರೋನಾ ಆರ್ಥಿಕ ನಷ್ಟದಿಂದ ನೌಕರರಿಗೆ ವೇತನ ಬಿಡುಗಡೆಯಾಗಿರಲಿಲ್ಲ.

ಇದೀಗ ರಾಜ್ಯ ಸರ್ಕಾರ 961 ಕೋಟಿ ಹಣ ಬಿಡುಗಡೆ ಮಾಡಿದ್ದು, ಇದರಿಂದ ಬಿಎಂಟಿಸಿ, ವಾಯುವ್ಯ ಸಾರಿಗೆ, ಕೆಎಸ್‌ಆರ್‌ಟಿಸಿ, ಈಶಾನ್ಯ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗೆ ಅನುಕೂಲವಾಗಲಿದೆ.

'ಸಂಬಳವಿಲ್ಲದೇ KSRTC ಸಿಬ್ಬಂದಿ ಪರದಾಟ'

 ಜೂನ್ ನಿಂದ ಸೆಪ್ಟೆಂಬರ್ ವರೆಗೆ ನೌಕರರಿಗೆ ಸಂಬಳ ನೀಡಲು 961 ಕೋಟಿ ಹಣ ಬಿಡುಗಡೆ ಮಾಡಿದೆ. ಆದ್ರೆ, ಜೂನ್ ಮತ್ತು ಜುಲೈ ತಿಂಗಳ ಸಂಬಳಕ್ಕಾಗಿ ತಕ್ಷಣ 426 ಕೋಟಿ ರೂ ರಿಲೀಸ್ ಮಾಡಿದೆ. 

ಕೊರೋನಾ ಹಿನ್ನೆಲೆಯಲ್ಲಿ ಎರಡ್ಮೂರು ತಿಂಗಳು ಕಾಲ ಕರ್ನಾಟಕ ಸಾರಿಗೆ ಬಸ್‌ಗಳು ರಸ್ತೆಗಿಳಿದಿಲ್ಲ. ಇದೀಗ ಅನ್‌ಲಾಕ್ ಇದ್ದು, ಬಸ್‌ಗಳು ಸಂಚರಿಸುತ್ತಿವೆ. ಆದ್ರೆ, ಕೊರೋನಾ ಭೀತಿ ಹಿನ್ನೆಯಲ್ಲಿ ಪ್ರಯಾಣಿಕರು ಬಸ್ ಏರಲು ಮುಂದೆ ಬರುತ್ತಿಲ್ಲ. ಇದರಿಂದ ರಾಜ್ಯ ಸಾರಿಗೆ ಇಲಾಖೆ ಬಾರೀ ಹೊಡೆತಬಿದ್ದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!