
ಬೆಂಗಳೂರು, (ಜು.15): ಕೊರೋನಾ ಎರಡನೇ ಅಲೆ ಬಳಿಕ ಸಾಮಾನ್ಯ ಜನರ ಆತಂಕ ನಡುವೆ ಉದ್ಯಮ ವಲಯದಲ್ಲಿ ಹೂಡಿಕೆಗೆ ರಾಜ್ಯ ಸರ್ಕಾರ ಆಸಕ್ತಿ ತೋರಿಸಿದೆ.
ಹೌದು.. ಇಲೆಕ್ಟ್ರಿಕ್ ವಾಹನ, ಅದಾನಿ ಡೇಟಾ ಸೇಂಟರ್, ಏರೋಸ್ಪೇಸ್ ಹಾಗೂ ರಕ್ಷಣಾ ಕಂಪನಿಗಳು ಸೇರಿದಂತೆ 23 ಕಂಪನಿಗಳಿಂದ ರಾಜ್ಯದಲ್ಲಿ ಸುಮಾರು 28,000 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದಕ್ಕೆ ರಾಜ್ಯ ಸರ್ಕಾರ ಇಂದು (ಗುರುವಾರ) ಸಹಿ ಹಾಕಿದೆ.
ಇನ್ವೆಸ್ಟ್ ಕರ್ನಾಟಕ ವೇದಿಕೆಯ ಸಹಯೋಗದೊಂದಿಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯೋಜಿಸಿದ್ದ ಸಮಾರಂಭದಲ್ಲಿ ಈ ಒಪ್ಪಂದಗಳಿಗೆ ಸಹಿ ಹಾಕಲಾಗಿದ್ದು, ಕಾಲಮಿತಿಯಲ್ಲಿ ಯೋಜನೆಗಳನ್ನು ಜಾರಿಗೊಳಿಸಿ ಸ್ಥಳೀಯರಿಗೆ ಹೆಚ್ಚು ಉದ್ಯೋಗಾವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ.
ಲಿಥಿಯನ್ -ಅಯಾನ್ ಸೆಲ್ ಉತ್ಪಾದನಾ ಕ್ಷೇತ್ರದ ಪ್ರಮುಖ ಕಂಪನಿಯಾಗಿರುವ ಅಮೆರಿಕದ ಸಿ4ವಿ ರಾಜ್ಯದಲ್ಲಿ 4015 ಕೋಟಿ ರೂಪಾಯಿಗಳ ಹೂಡಿಕೆ ಮಾಡಲು ಮುಂದಾಗಿದೆ.
ಸಿಂಗಾಪುರ ಮೂಲದ ಎಲ್ಎನ್ಜಿ ಟರ್ಮಿನಲ್ ಆಪರೇಟರ್ ಎಲ್ಎನ್ಜಿ ಅಲೈಯನ್ಸ್ನೊಂದಿಗೆ 2250 ಕೋಟಿ ರೂ., ಅದಾನಿ ಡೇಟಾ ಸೆಂಟರ್ ಸ್ಥಾಪನೆಗೆ 5000 ಕೋಟಿ ರೂ. ಒಪ್ಪಂದ ಆಗಿದೆ.
ಕೊರೋನಾ ಸಂಕಷ್ಟದ ನಡುವೆಯೂ ಹೂಡಿಕೆ ಪ್ರಸ್ತಾವನೆಗಳು ಹಾಗೂ ಒಪ್ಪಂದಗಳ ಮೂಲಕ ಕರ್ನಾಟಕಕ್ಕೆ 28,000 ಕೋಟಿ ರೂ. ಹೂಡಿಕೆ ಹರಿದು ಬರಲಿದೆ.
ಕೊರೋನಾ ಸಂಕಷ್ಟದ ನಡುವೆಯೂ ಕಳೆದ ವರ್ಷದ ಮಾರ್ಚ್ನಿಂದ ಕರ್ನಾಟಕ ಸರ್ಕಾರ 77,000 ಕೋಟಿ ರೂ. ಹೂಡಿಕೆಯ 520ಕ್ಕೂ ಹೆಚ್ಚು ಯೋಜನೆಗಳಿಗೆ ಅನುಮೋದನೆ ನೀಡಿದೆ. ಇದಲ್ಲದೇ, ಹೆಚ್ಚುವರಿ ಪ್ರಸ್ತಾವನೆಗಳು ಹಾಗೂ 23,000 ಕೋಟಿ ರೂ. ಮೊತ್ತದ ಒಪ್ಪಂದವೂ ಸೇರಿ ಒಟ್ಟು 1 ಲಕ್ಷ ಕೋಟಿ ರೂ. ಹೂಡಿಕೆ ಆಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ