ಫೈನಾನ್ಸ್‌ ಸಂಸ್ಥೆಗಳಿಗೆ ಬ್ರೇಕ್‌ : ಕಠಿಣ ಕ್ರಮ

Kannadaprabha News   | Asianet News
Published : Oct 23, 2020, 07:36 AM IST
ಫೈನಾನ್ಸ್‌ ಸಂಸ್ಥೆಗಳಿಗೆ ಬ್ರೇಕ್‌ : ಕಠಿಣ ಕ್ರಮ

ಸಾರಾಂಶ

ಖಾಸಗಿ ಹಣಕಾಸು ಸಂಸ್ಥೆಗಳ ಮೇಲೆ ನಿಯಂತ್ರಣ ಹೇರಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಮಹತ್ವದ ನಿರ್ಧಾರ ಒಂದನ್ನು ತೆಗೆದುಕೊಂಡಿದೆ. 

ಬೆಂಗಳೂರು (ಅ.23):  ಹೆಚ್ಚಿನ ಬಡ್ಡಿಯ ಆಸೆ ತೋರಿಸಿ ಸಾರ್ವಜನಿಕರನ್ನು ವಂಚಿಸುವ ಖಾಸಗಿ ಹಣಕಾಸು ಸಂಸ್ಥೆಗಳ ಮೇಲೆ ನಿಯಂತ್ರಣ ಹೇರಲು ರಾಜ್ಯ ಸರ್ಕಾರ ಮುಂದಾಗಿದೆ. ಇಂತಹ ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ವಿಧೇಯಕಕ್ಕೆ ನಿಯಮಗಳನ್ನು ರೂಪಿಸಲು ಸಚಿವ ಸಂಪುಟ ಸಭೆ ಮಹತ್ವದ ನಿರ್ಣಯ ಕೈಗೊಂಡಿದೆ.

ವಿಧಾನಸೌಧದಲ್ಲಿ ಗುರುವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಕರ್ನಾಟಕ ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ವಿಧೇಯಕ -2020’ಕ್ಕೆ ಅನುಮೋದನೆ ನೀಡಲಾಗಿದೆ. ಮಸೂದೆಗೆ ವಿಧಾನಮಂಡಲದ ಒಪ್ಪಿಗೆ ಬೇಕಿದೆ. ತೀರಾ ತುರ್ತು ಅಗತ್ಯ ಬಿದ್ದರೆ ಸುಗ್ರೀವಾಜ್ಞೆ ಹೊರಡಿಸುವ ಅವಕಾಶವೂ ಎಂದು ಮೂಲಗಳು ಹೇಳಿವೆ.

ಏರಿದ ಚಿನ್ನದ ದರ, ಬೆಳ್ಳಿ ಬೆಲೆ ಇಳಿಕೆ: ಇಲ್ಲಿದೆ ಅ.22 ಗೋಲ್ಡ್ ರೇಟ್! ..

ಹೆಚ್ಚಿನ ಬಡ್ಡಿಯ ಆಸೆ ತೋರಿಸಿ ಸಾರ್ವಜನಿಕರನ್ನು ವಂಚಿಸುವ ಸಂಸ್ಥೆಗಳ ಮೇಲೆ ನಿಯಂತ್ರಣ ಹೇರುವ ವಿಧೇಯಕ ಇದಾಗಿದೆ. ರಾಜ್ಯದಲ್ಲಿ ಐಎಂಎ ಸೇರಿದಂತೆ ಹಲವು ಖಾಸಗಿ ಸಂಸ್ಥೆಗಳು ಠೇವಣಿಯನ್ನು ಸಾರ್ವಜನಿಕರಿಂದ ಸಂಗ್ರಹಿಸಿ ವಂಚನೆ ಮಾಡುವ ಪ್ರಕರಣಗಳಿಗೆ ಕಡಿವಾಣ ಹಾಕಲು ಇದರಿಂದ ಸಹಕಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ವಿಧೇಯಕಕ್ಕೆ ನಿಯಮಗಳನ್ನು ರೂಪಿಸಲು ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ.

ಸುಗ್ರೀವಾಜ್ಞೆಗೂ ಸಿದ್ಧ:

ವಿಧೇಯಕಕ್ಕೆ ನಿಯಮಗಳನ್ನು ರೂಪಿಸಿ ನಂತರ ಅನುಷ್ಠಾನಗೊಳಿಸಲಾಗುವುದು. ಅಕ್ರಮ ಠೇವಣಿ ಚಟುವಟಿಕೆಗಳ ಭೀತಿಯನ್ನು ನಿಭಾಯಿಸಲು ಈ ವಿಧೇಯಕ ಸಹಾಯವಾಗಲಿದೆ. ಕಠಿಣ ಆಡಳಿತಾತ್ಮಕ ಕ್ರಮಗಳ ಕೊರತೆಯಿಂದಾಗಿ, ಪ್ರಸ್ತುತ ಇರುವ ನಿಯಂತ್ರಣಗಳನ್ನು ದುರ್ಬಳಕೆ ಮಾಡಿಕೊಂಡು, ಬಡವರು ಮತ್ತು ಕಷ್ಟಪಟ್ಟು ದುಡಿದ ಜನರು ತಮ್ಮ ಉಳಿತಾಯದ ಹಣಕ್ಕೆ ಮೋಸ ಹೋಗುವುದನ್ನು ತಪ್ಪಿಸಲಾಗುತ್ತದೆ. ಕೇಂದ್ರದ ವಿಧೇಯಕಕ್ಕೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿದ ಬಳಿಕ ಕರಡು ಸಿದ್ಧಪಡಿಸಲಾಗುತ್ತದೆ. ತದನಂತರ ವಿಧಾನಮಂಡಲದ ಉಭಯ ಸದನಗಳ ಅಧಿವೇಶನದಲ್ಲಿ ವಿಧೇಯಕ ಮಂಡಿಸಿದ ಬಳಿಕ ರಾಜ್ಯದಲ್ಲಿ ಕಾಯ್ದೆಯನ್ನಾಗಿ ಪರಿವರ್ತನೆಯಾಗಲಿದೆ. ತೀರಾ ತುರ್ತು ಎನಿಸಿದಲ್ಲಿ ಸುಗ್ರೀವಾಜ್ಞೆ ಮೂಲಕ ಅನುಷ್ಠಾನಗೊಳಿಸುವ ಅವಕಾಶವೂ ಇದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರದ ರೀತಿ ರಾಜ್ಯದಲ್ಲೂ ಮಸೂದೆ

ಇತ್ತೀಚಿನ ದಿನಗಳಲ್ಲಿ ವಂಚನೆ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಇಂಥದೊಂದು ವಿಧೇಯಕವನ್ನು ಮಂಡಿಸುವುದು ಅಗತ್ಯ ಎಂದು ಮನಗಂಡ ಕೇಂದ್ರ ಸರ್ಕಾರವು ಕಳೆದ ವರ್ಷ ಈ ವಿಧೇಯಕವನ್ನು ಮಂಡಿಸಿ ಜಾರಿಗೊಳಿಸಿತ್ತು. ಕೇಂದ್ರದ ನಿರ್ಣಯದ ಆಧಾರದ ಮೇಲೆ ಇದೀಗ ರಾಜ್ಯ ಸರ್ಕಾರವು ಜಾರಿಗೊಳಿಸಲು ಮುಂದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಎಂ ಪುತ್ರ ಯತೀಂದ್ರ ಹೇಳಿಕೆ ವಿವಾದ; ಬೆಳಗಾವಿಯಲ್ಲಿ ಡಿಕೆಶಿ ಅಲರ್ಟ್, ಆಪ್ತರ ಲಂಚ್ ಮೀಟಿಂಗ್!
ಪದೇಪದೆ 'ನಮ್ಮಪ್ಪನೇ ಸಿಎಂ..' ಯತೀಂದ್ರ ಹೇಳಿಕೆಯಿಂದ ಸರ್ಕಾರಕ್ಕೆ ಮುಜುಗರ? ಸತೀಶ್ ಜಾರಕಿಹೊಳಿ ಹೇಳಿದ್ದೇನು?