ಕೊರೋನಾಗೆ 1 ವಾರ ಅಘೋಷಿತ ಕರ್ನಾಟಕ ಬಂದ್ : ಏನೇನು ಇರಲ್ಲ..?

Suvarna News   | Asianet News
Published : Mar 13, 2020, 03:06 PM ISTUpdated : Mar 13, 2020, 07:43 PM IST
ಕೊರೋನಾಗೆ 1 ವಾರ ಅಘೋಷಿತ ಕರ್ನಾಟಕ  ಬಂದ್ : ಏನೇನು ಇರಲ್ಲ..?

ಸಾರಾಂಶ

ವಿಶ್ವದಾದ್ಯಂತ ಸಾವಿರಾರು ಜನರನ್ನು ಬಲಿ ಪಡೆದಿರುವ ಮಾರಕ ಕೊರೋನಾ ವೈರಸ್ ತಡೆಗಟ್ಟಲು ಕರ್ನಾಟಕ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಒಂದು ವಾರಗಳ ಕಾಲ ಕರ್ನಾಟಕದಲ್ಲಿ ಹಲವು ಸೇವೆಗಳ ಬಂದ್ ಗೆ ಸೂಚಿಸಿದೆ. 

ಬೆಂಗಳೂರು [ಮಾ.13] : ವಿಶ್ವದಾದ್ಯಂತ ಕೊರೋನಾ ಮಹಾಮಾರಿ ಮರಣ ಮೃದಂಗ ಬಾರಿಸುತ್ತಿದ್ದು, ಈ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಮುಂಜಾಗೃತ ಕ್ರಮವಾಗಿ ಅನೇಕ ರೀತಿಯ ನಿರ್ಬಂಧ ವಿಧಿಸಲಾಗಿದೆ. 

"

ಬೆಂಗಳೂರಲ್ಲಿ ಕೊರೋನಾ ಚಿಕಿತ್ಸೆಗೆ ಪ್ರತ್ಯೇಕ ಆಸ್ಪತ್ರೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿದ್ದಾರೆ.  ಕೊರೋನಾ ತಡೆಯುವ ನಿಟ್ಟಿನಲ್ಲಿ ಮಾರ್ಚ್ 14 ರಿಂದ ರಾಜ್ಯ ಸಂಪೂರ್ಣ ಸ್ತಬ್ಧ ಮಾಡಲು ಸೂಚನೆ ನೀಡಿದ್ದಾರೆ.
 

       ಏನೇನು ಸೇವೆಗಳು ಬಂದ್ 

  • ಒಂದು ವಾರದ ಮಟ್ಟಿಗೆ ಬಾರ್, ಪಬ್ ಬಂದ್ ಮಾಡಲು ಸೂಚಿಸಿದ್ದಾರೆ.
  •  ರಾಜ್ಯದ ವಿಶ್ವ ವಿದ್ಯಾಲಯಗಳೂ ಒಂದು ವಾರ ಬಂದ್
  • ಶಾಲಾ-ಕಾಲೇಜುಗಳಿಗೆ ರಜೆ
  • ರಾಜ್ಯಾದ್ಯಂತ  ಸಾರ್ವಜನಿಕ ಕಾರ್ಯಕ್ರಮ - ಬರ್ತಡೇ -ಎಂಗೇಜ್ ಮೆಂಟ್ ಬಂದ್
  • ಸರಳ ರೀತಿಯ ಮದುವೆಗೆ ಸೂಚನೆ
  • ಮದುವೆಗೆ 100 ಜನಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ
  • ಯಾವುದೇ ಕಾರ್ಯಕ್ರಮಗಳಿಗೂ ಜಿಲ್ಲಾಧಿಕಾರಿಯಿಂದ ಅನುಮತಿ ಕಡ್ಡಾಯ
  • ವಿದೇಶ ಪ್ರವಾಸಕ್ಕೆ ತೆರಳದಂತೆ ಸೂಚನೆ
  • ಎಲ್ಲಾ ಮಾದರಿಯ ಕ್ರೀಡೆಗಳಿಗೂ ನಿಷಿದ್ಧ
  • ಒಂದು ವಾರಗಳ ಕಾಲ ಮಾಲ್ ಗಳು ಬಂದ್ 
  • ವಸ್ತು ಪ್ರದರ್ಶನಗಳು ರದ್ದು
  • ಪರೀಕ್ಷೆಗಳು ಎಂದಿನಂತೆ ನಡೆಯಲಿವೆ
  • ಜಾತ್ರೆ ನಡೆಸದಂತೆ ಮುಖ್ಯಮಂತ್ರಿ ಸೂಚನೆ
  • ಸಮ್ಮರ್ ಕ್ಯಾಂಪ್ ನಡೆಸದಂತೆ ಆದೇಶ

ರಾಜ್ಯದ ಜನರಿಗಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಲ್ಲಿ 5ನೇ ಕೊರೋನಾ ಕೇಸ್ : ಗೂಗಲ್ ಉದ್ಯೋಗಿಗೆ ಸೋಂಕು...

ಮಾರ್ಚ್ 13ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!