10 ಲಕ್ಷ ರು. ಮೌಲ್ಯದ ರೇಷ್ಮೆ ಸೀರೆ ಬಿಡುಗಡೆಗೆ ರಾಜ್ಯ ಸರ್ಕಾರ ಚಿಂತನೆ

Kannadaprabha News   | Asianet News
Published : Sep 28, 2021, 08:01 AM IST
10 ಲಕ್ಷ ರು. ಮೌಲ್ಯದ ರೇಷ್ಮೆ ಸೀರೆ ಬಿಡುಗಡೆಗೆ ರಾಜ್ಯ ಸರ್ಕಾರ ಚಿಂತನೆ

ಸಾರಾಂಶ

ರೇಷ್ಮೆ ಇಲಾಖೆಯಿಂದ 10 ಲಕ್ಷ ರು. ಮೌಲ್ಯದ ರೇಷ್ಮೆ ಸೀರೆ ಬಿಡುಗಡೆಗೆ ಚಿಂತನೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಹೇಳಿಕೆ

ಶಿವಮೊಗ್ಗ (ಸೆ.28): ರೇಷ್ಮೆ ಇಲಾಖೆಯಿಂದ (Silk Board) 10 ಲಕ್ಷ ರು. ಮೌಲ್ಯದ ರೇಷ್ಮೆ ಸೀರೆ ಬಿಡುಗಡೆಗೆ ಚಿಂತನೆ ನಡೆದಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ (Narayana Gowda) ಹೇಳಿದ್ದಾರೆ.

 ರಾಜ್ಯದ ರೇಷ್ಮೆ ಅತ್ಯಂತ ನೈಜವಾಗಿದೆ. ಆದ್ದರಿಂದ ಜಗತ್‌ಪ್ರಸಿದ್ಧಿ ಪಡೆದಿದೆ. .10 ಲಕ್ಷಕ್ಕೆ ಒಂದು ಸೀರೆ (Saree) ಮಾರುವ ಯೋಚನೆ ಇದೆ. ರೇಷ್ಮೆ ಮಾರುಕಟ್ಟೆವೃದ್ಧಿಸಲು ಪ್ರತಿ ವಿಮಾನ ನಿಲ್ದಾಣಗಳಲ್ಲಿ ರೇಷ್ಮೆ ಮಳಿಗೆಗಳನ್ನು ತೆರೆಯಲು ಯೋಜನೆ ತಯಾರಿಸಲಾಗುತ್ತಿದೆ. 

ಚಿಕ್ಕಬಳ್ಳಾಪುರ ಜಿಲ್ಲೆಯ ರೇಷ್ಮೆ ಸೀರೆಗೆ ರಾಜ್ಯ ಪ್ರಶಸ್ತಿಯ ಗರಿ

ಅಲ್ಲದೆ ರೇಷ್ಮೆ ಬೆಳೆಗಾರರ ಕುಂದು ಕೊರತೆಗಳನ್ನು ಆಲಿಸಲು ಹಾಗೂ ಸಹಕರಿಸಲು ಶೀಘ್ರದಲ್ಲೇ ಸಹಾಯವಾಣಿ ತೆರೆಯಲಾಗುವುದು ಎಂದರು. ರೇಷ್ಮೆ ಬೆಳೆಗಾರರು ಗೂಡ್ಸ್‌ ಗಾಡಿಗಳಲ್ಲಿ ರಾಮನಗರದ ಮಾರುಕಟ್ಟೆಗೆ ಸಾಗುವಾಗ ದಾರಿ ಮಧ್ಯೆ ತಡೆಯದಂತೆ ಪೊಲೀಸ್‌ ಇಲಾಖೆಗೆ ತಿಳಿಸಲಾಗುತ್ತದೆ. ರೈತರಿಗೆ ವಿಐಪಿ ರೀತಿಯಲ್ಲಿ ಪಾಸ್‌ ಒದಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
  
ವಿವಿಧ ಬೇಡಿಕೆಗೆ ನೇಕಾರರ ಆಗ್ರಹ :   ರಾಷ್ಟ್ರೀಯಕೃತ, ಸಹಕಾರಿ ಸಂಘ ಹಾಗೂ ಮೈಕ್ರೊ ಫೈನಾನ್ಸ್‌ಗಳಲ್ಲಿರುವ ರಾಜ್ಯ ನೇಕಾರರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವುದು ಹಾಗೂ ನೇಕಾರರಿಗೂ ಕಟ್ಟಡ ಕಾರ್ಮಿಕರ ಸೌಲಭ್ಯಗಳನ್ನು ಜಾರಿ ಮಾಡುವುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶನಿವಾರ ಕರ್ನಾಟಕ ರಾಜ್ಯ ನೇಕಾರರ ಸೇವಾ ಸಂಘದ ನೇತೃತ್ವದಲ್ಲಿ ನೇಕಾರರು ಬೆಳಗಾವಿ (Belagavi) ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಅನೇಕ ವರ್ಷಗಳಿಂದ ಸಂಕಷ್ಟಕ್ಕೆ ಸಿಲುಕಿರುವ ವೃತ್ತಿಪರ ನೇಕಾರರು ಕಾರ್ಮಿಕ ಸೌಲಭ್ಯಗಳಿಲ್ಲದೆ ವಂಚಿತರಾಗುತ್ತಿದ್ದಾರೆ. 5ರಿಂದ 6 ಲಕ್ಷ ಜನ ಕಾರ್ಮಿಕರು ನೇಕಾರಿಕೆಯನ್ನು ನಂಬಿಕೊಂಡು ಬದುಕು ಸಾಗಿಸುತ್ತಿದ್ದಾರೆ. ಆದರೆ ಕಳೆದ 10 ವರ್ಷಗಳಲ್ಲಿ ಬರಗಾಲ , ಅತೀವೃಷ್ಟಿ, ಅನಾವೃಷ್ಟಿ, ಜಿಎಸ್‌ಟಿ, ನೋಟ್‌ ರದ್ದು ಇದರ ನಡುವೆ ಕೊರೋನಾ ಹಿನ್ನೆಲೆಯಲ್ಲಿ ಲಾಕ್‌ಡೌನ್‌ನಿಂದ ಸಂಪೂರ್ಣ ಉದ್ಯಮ ನೆಲಕಚ್ಚಿದೆ. ಅಲ್ಲದೇ ಪಕ್ಕಾ ವಸ್ತುವಿನ ಮಾರಾಟವಾಗದೆ ದುಡಿಮೆ ನಿಂತು ಹೋಗಿದೆ. ಆರ್ಥಿಕ ಸಾಲದ ಹೊರೆಯಿಂದಾಗಿ ರಾಜ್ಯದಲ್ಲಿ 26 ಜನ ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆರೆ ಹಾವಳಿಯಿಂದ ಮಗ್ಗ ಹಾಗೂ ಮನೆಗಳು ಹಾಳಾಗಿವೆ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದುರುವ ನೇಕಾರರಿಗೆ ಔದ್ಯೋಗಿಕ ಭದ್ರತೆ ಇಲ್ಲದಂತಾಗಿದೆ. ಇದರಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳಬೇಕಾದ ಅನಿವಾರ್ಯತೆಗೆ ಸಿಲುಕುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ