
ಬೆಂಗಳೂರು (ಜೂ.10): ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾರ್ಮಿಕರ ನೆರವಿಗೆ ನೀಡಬಹುದಾದಂತಹ ಸೌಲಭ್ಯಗಳ ಕುರಿತಂತೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಬುಧವಾರ ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಮಿಕ ಸಂಘಟನೆಯ ಪ್ರಮುಖರೊಂದಿಗೆ ಸಭೆ ನಡೆಸಿದರು.
ಕಾರ್ಮಿಕ ಸಂಘಟನೆಗಳ ಮುಖಂಡರು ಹಾಗೂ ಅಧಿಕಾರಿಗಳೊಂದಿಗೆ ಸವಿಸ್ತಾರವಾಗಿ ಚರ್ಚಿಸಿ ಎಲ್ಲರ ಸಲಹೆಗಳನ್ನು ಸ್ವೀಕರಿಸಿದ ಸಚಿವರು, ಕಟ್ಟಡ ಕಾರ್ಮಿಕರಿಗೆ ಸಹಾಯಧನ ತಲುಪಿಸುವ ಜೊತೆಗೆ ಆಹಾರದ ಕಿಟ್ ಹಾಗೂ ಕೋವಿಡ್ ಸುರಕ್ಷಾ ಕಿಟ್ಗಳನ್ನು ನೀಡಲಾಗುವುದು.
ನಮಗೆ ಊರಿಗೆ ಹೋಗೋಕೆ ಹೆಲ್ಪ್ ಮಾಡ್ರಿ.... ಲಾಕ್ಡೌನ್ನಿಂದ ಕಾರ್ಮಿಕರ ಬದುಕು ಫುಟ್ಪಾತ್ಗೆ ...
ಮೊಬೈಲ್ ಕ್ಲಿನಿಕ್ಗಳನ್ನು ನೀಡುವುದು ಮತ್ತು ಮಂಡಳಿಯ ಕಾರ್ಯಕ್ರಮಗಳಾದ ಕಟ್ಟಡ ಕಾರ್ಮಿಕರಿಗೆ ರೋಗನಿರೋಧಕ ಶಕ್ತಿ ಹೆಚ್ಚಿಸುವಂತಹ ಇಮ್ಯೂನಿಟಿ ಬೂಸ್ಟರ್ಗಳನ್ನು ಒದಗಿಸಲಾಗುವುದು ತಿಳಿಸಿದರು. ಈ ಸಂದರ್ಭದಲ್ಲಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ.ಜಿ ಕಲ್ಪನಾ, ಆಯುಕ್ತ ಅಕ್ರಂ ಪಾಷಾ ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ