ಖಾಸಗಿ ಅಂಬ್ಯುಲೆನ್ಸ್‌ಗಳಿಗೆ ಏಕರೂಪದ ದರ ನಿಗದಿ

Kannadaprabha News   | Asianet News
Published : May 11, 2021, 09:04 AM IST
ಖಾಸಗಿ ಅಂಬ್ಯುಲೆನ್ಸ್‌ಗಳಿಗೆ ಏಕರೂಪದ ದರ ನಿಗದಿ

ಸಾರಾಂಶ

ಖಾಸಗಿ ಅಂಬ್ಯುಲೆನ್ಸ್‌ಗಳು ಸುಲಿಗೆ ಮಾಡುತ್ತಿರುವುದರ ಬಗ್ಗೆ ಎಚ್ಚೆತ್ತುಕೊಂಡ ಸರ್ಕಾರ ಖಾಸಗಿ ಅಂಬ್ಯುಲೆನ್ಸ್‌ಗಳಿಗೆ ಏಕರೂಪದ ದರ ನಿಗದಿ ಪಡಿಸಿ ಆದೇಶ ಹೊರಡಿಸಲು ಸಿದ್ಧತೆ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌  ಸಮಾಲೋಚನೆ 

ಬೆಂಗಳೂರು (ಮೇ.11):  ಕೋವಿಡ್‌ -19ರ ಉಪಟಳ ಹೆಚ್ಚಾಗುತ್ತಿದ್ದಂತೆ ಕೋವಿಡ್‌ ರೋಗಿಗಳನ್ನು ಸಾಗಿಸಲು ಹಾಗು ಶವ ಸಾಗಣೆ ಸಂದರ್ಭದಲ್ಲಿ ಕೆಲ ಖಾಸಗಿ ಅಂಬ್ಯುಲೆನ್ಸ್‌ಗಳು ಸುಲಿಗೆ ಮಾಡುತ್ತಿರುವುದರ ಬಗ್ಗೆ ಕೊನೆಗೂ ಸರ್ಕಾರ ಎಚ್ಚೆತ್ತುಕೊಂಡಿದೆ. ಖಾಸಗಿ ಅಂಬ್ಯುಲೆನ್ಸ್‌ಗಳಿಗೆ ಏಕರೂಪದ ದರ ನಿಗದಿ ಪಡಿಸಿ ಆದೇಶ ಹೊರಡಿಸಲು ಮುಂದಾಗಿದೆ.

ಸೋಮವಾರ ಬೆಳಗ್ಗೆ ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರನ್ನು ಭೇಟಿಯಾದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಈ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಈ ಸಭೆಯಲ್ಲಿ ಉಭಯ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಕೊರೊನಾ ಸೋಂಕಿತರಿಗೆ ಕಾಂಗ್ರೆಸ್‌ನಿಂದ ಆಕ್ಸಿಜನ್, ಆಂಬುಲೆನ್ಸ್ ಸೇವೆ

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ, ಖಾಸಗಿ ಅಂಬ್ಯುಲೆನ್ಸ್‌ಗಳಿಗೆ ಏಕರೂಪದ ಶುಲ್ಕ ನಿಗದಿ ಮಾಡಿ ಆದೇಶ ಹೊರಡಿಸುತ್ತೇವೆ. ಈ ಶುಲ್ಕ ಮಿತಿಯನ್ನು ಉಲ್ಲಂಘಿಸುವ ಅಂಬ್ಯುಲೆನ್ಸ್‌ಗಳ ಪರವಾನಗಿ ರದ್ದು ಮಾಡುವುದಾಗಿ ಎಚ್ಚರಿಕೆ ನೀಡಿದರು.

ಖಾಸಗಿ ಅಂಬ್ಯುಲೆನ್ಸ್‌ಗಳು ಬೇಕಾಬಿಟ್ಟಿದರ ವಸೂಲಿ ಮಾಡುವುದರಿಂದ ಬಡವರಿಗೆ ತೊಂದರೆ ಆಗುತ್ತಿದೆ. ಆದ್ದರಿಂದ ದರ ನಿಗದಿ ಮಾಡುವುದು ಅನಿವಾರ್ಯವಾಗಿದೆ ಎಂದು ಸವದಿ ಹೇಳಿದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ