ವಿಧಾನಸೌಧದಂತೆ ಸುವರ್ಣಸೌಧ ಬಳಕೆ: ಡಿಸೆಂಬರಲ್ಲಿ ಬೆಳಗಾವಿಯಲ್ಲಿ ಅಧಿವೇಶನ: ಬೊಮ್ಮಾಯಿ

Published : Aug 22, 2021, 07:33 AM IST
ವಿಧಾನಸೌಧದಂತೆ ಸುವರ್ಣಸೌಧ ಬಳಕೆ: ಡಿಸೆಂಬರಲ್ಲಿ ಬೆಳಗಾವಿಯಲ್ಲಿ ಅಧಿವೇಶನ: ಬೊಮ್ಮಾಯಿ

ಸಾರಾಂಶ

* ವಿಧಾನಸೌಧದ ರೀತಿ ಸುವರ್ಣಸೌಧದ ಬಳಕೆಗೆ ಕ್ರಮ * ಡಿಸೆಂಬರಲ್ಲಿ ಬೆಳಗಾವಿಯಲ್ಲಿ ಅಧಿವೇಶನ: ಬೊಮ್ಮಾಯಿ

ಬೆಳಗಾವಿ(ಆ.22): ಮುಂದಿನ ಡಿಸೆಂಬರ್‌ನಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಸುವರ್ಣ ವಿಧಾನಸೌಧದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಡಿಸೆಂಬರ್‌ ತಿಂಗಳಲ್ಲಿ ಅಧಿವೇಶ ನಡೆಸಬೇಕು ಎಂಬುದು ನಮ್ಮ ಸರ್ಕಾರದ ಇಚ್ಛೆ. ಸುವರ್ಣ ವಿಧಾನಸೌಧವನ್ನು ಶಕ್ತಿ ಕೇಂದ್ರ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಇಲ್ಲಿನ ರೈತರ ಅಪೇಕ್ಷೆಯಂತೆ ಸಕ್ಕರೆ ಇಲಾಖೆಯ ಕಚೇರಿಯನ್ನು ಸ್ಥಳಾಂತರ ಮಾಡಲು ಬೆಂಗಳೂರಿಗೆ ಹೋದ ತಕ್ಷಣ ಆದೇಶ ಹೊರಡಿಸಲು ಸೂಚಿಸುತ್ತೇನೆ. ಆದಷ್ಟುಶೀಘ್ರ ಬೆಳಗಾವಿಗೆ ಕಚೇರಿ ಸ್ಥಳಾಂತರವಾಗಲು ಆದೇಶ ಮಾಡುವೆ ಎಂದು ಹೇಳಿದರು.

ಕೆಲವು ಇಲಾಖೆಗಳು ಬೆಳಗಾವಿಗೆ ಸ್ಥಳಾಂತರ ಆಗಬೇಕು ಎಂದು ಸೂಚಿಸಿದ್ದರೂ ಸ್ಥಳಾಂತರವಾಗಿಲ್ಲ. ಅದನ್ನು ಸಂಪೂರ್ಣವಾಗಿ ಪುನರ್‌ ವಿಮರ್ಶಿಸಿ, ಸ್ಥಳಾಂತರಕ್ಕೆ ಆಜ್ಞೆ ಮಾಡುವೆ ಎಂದ ಅವರು, ಸುವರ್ಣ ವಿಧಾನಸೌಧವು ಪೂರ್ಣ ಪ್ರಮಾಣದಲ್ಲಿ ಜನರ ಪರವಾದ ಚಟುವಟಿಕೆಯ ಕೇಂದ್ರವಾಗಬೇಕು. ಜತೆಗೆ, ಇಲ್ಲಿ ಬೆಂಗಳೂರಿನ ವಿಧಾನಸೌಧದ ರೀತಿಯಲ್ಲಿ ಕೆಲಸ, ಕಾರ್ಯಗಳು ಆಗಬೇಕು. ಈ ನಿಟ್ಟಿನಲ್ಲಿ ಎಲ್ಲವನ್ನೂ ಪರಿಶೀಲನೆ ಮಾಡುತ್ತೇನೆ. ಮಹತ್ವದ ಇಲಾಖೆಗಳು ಇಲ್ಲಿಂದಲೇ ಕೆಲಸ ಮಾಡುವುದಕ್ಕೆ ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!