ಮಕ್ಕಳನ್ನು ಬಳಸಿಕೊಂಡು ಬಿಕ್ಷಾಟನೆ ಮಾಡುವ ದಂಧೆಗೆ ಬೀಳಲಿದೆ ಬ್ರೇಕ್

Published : Jul 14, 2022, 10:38 PM ISTUpdated : Jul 14, 2022, 10:40 PM IST
ಮಕ್ಕಳನ್ನು ಬಳಸಿಕೊಂಡು ಬಿಕ್ಷಾಟನೆ ಮಾಡುವ ದಂಧೆಗೆ ಬೀಳಲಿದೆ ಬ್ರೇಕ್

ಸಾರಾಂಶ

ಮಕ್ಕಳನ್ನು ಬಳಸಿಕೊಂಡು ಬಿಕ್ಷಾಟನೆ ಮಾಡುವ ದಂಧೆ ಹಾಗೂ ತೃತೀಯ ಲಿಂಗಿಗಳು ಬಿಕ್ಷಾಟನೆ ಹೆಸರಿನಲ್ಲಿ ಸಾರ್ವಜನಿಕರಿಗೆ ಕಿರುಕುಳ ತಡೆಯಲು ಕರ್ನಾಟಕ ಸರ್ಕಾರ ಮುಂದಾಗಿದೆ.

ವರದಿ- ಸುರೇಶ್ ಎ ಎಲ್ , ಏಷ್ಯಾನೆಟ್ ಸುವರ್ಣ ನ್ಯೂಸ್

ಬೆಂಗಳೂರು, (ಜುಲೈ.14):
ಸಿಗ್ನಲ್ ಗಳಲ್ಲಿ ಪುಟ್ಟ ಮಕ್ಕಳನ್ನು ಬಳಸಿಕೊಂಡು ಬಿಕ್ಷಾಟನೆ ಮಾಡುವ ದಂಧೆ ಮೇಲೆ ರಾಜ್ಯ ಸರ್ಕಾರ ಕಣ್ಣಿಡಲು ತೀರ್ಮಾನಿಸಿದೆ. ಹಸುಗೂಸುಗಳಿಗೆ ಮಂಪರು ಮಾತ್ರೆ ತಿನ್ನಿಸಿ, ಮಕ್ಕಳನ್ನು ಬಾಡಿಗೆಗೆ ಅಂತಾ ಪಡೆದು ಸಾರ್ವಜನಿಕರ ಸಿಂಪತಿ ಪಡೆದು ಬಿಕ್ಷೆ ಕೇಳುವ ದಂಧೆಗೆ ಬ್ರೇಕ್ ಹಾಕಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. 

ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರ್ ನೇತೃತ್ವದಲ್ಲಿ ಇಂದು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಈ ವಿಚಾರವಾಗಿ ಚರ್ಚೆ ನಡೆಸಲಾಯಿತು. ಬೆಂಗಳೂರಿನ ವಿವಿಧ ಸಿಗ್ನಲ್ ಗಳು, ದೇವಸ್ಥಾನಗಳು, ಮಾರ್ಕೆಟ್ ಗಳು, ಮಾಲ್ ಗಳು, ಮತ್ತಿತರ ಜನನಿಬಿಡ ಪ್ರದೇಶಗಳಲ್ಲಿ ಹಲವು ಮಹಿಳೆಯರು ಮಕ್ಕಳನ್ನು ಕಂಕುಳಲ್ಲಿ ಇಟ್ಟುಕೊಂಡು ಬಿಕ್ಷಾಟನೆ ಮಾಡುತ್ತಿರುವುದು, ಹಾಗೂ ತೃತೀಯ ಲಿಂಗಿಗಳು ಬಿಕ್ಷಾಟನೆ ಹೆಸರಿನಲ್ಲಿ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವುದು ,ಇಲಾಖೆಯ ಗಮನಕ್ಕೆ ಬಂದಿದೆ. 

ಕೋವಿಡ್ ಬಳಿಕ ಬೆಂಗಳೂರಲ್ಲಿ ಹೆಚ್ಚಾಗಿದೆ ಭಿಕ್ಷುಕರ ಸಂಖ್ಯೆ!

ಬಿಕ್ಷಾಟನೆ ತಡೆಗಟ್ಟಲು ಹಲವು ಇಲಾಖೆಗಳ ನಡುವೆ ಸಮನ್ವಯ ಅಗತ್ಯ. ಕಾರ್ಮಿಕ ಇಲಾಖೆ, ಮಕ್ಕಳ ಕಲ್ಯಾಣ ಇಲಾಖೆ, ಪೋಲೀಸ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಎಲ್ಲರೂ ಸಮನ್ವಯ ದಿಂದ ಕೆಲಸ ಮಾಡಿ ಈ ದಂಧೆಯನ್ನು ತಡೆಗಟ್ಟಲು ಪ್ರಯತ್ನ ಮಾಡಬೇಕೆಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಸೂಚನೆ ನೀಡಿದ್ದಾರೆ.

ಬಿಕ್ಷಾಟನೆ ಯಲ್ಲಿ ಮಕ್ಕಳ ಜೊತೆ ಮಹಿಳೆ ಅಥವಾ ಬೇರೆ ಯಾರಾದ್ರೂ ವ್ಯಕ್ತಿ ಇದ್ದಲ್ಲಿ ಅಂತಹವರ ಮೇಲ ಕೂಡಲೇ ಕ್ರಮ ಜರುಗಿಸಬೇಕು ಹಾಗೂ ಆ ಮಕ್ಕಳನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವ ವ್ಯವಸ್ಥೆ ಮಾಡಬೇಕು ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಸೂಚಿಸಿದ್ದಾರೆ. ರಾಜ್ಯದ 31 ಜಿಲ್ಲೆಗಳಲ್ಲಿ ಮಕ್ಕಳ ರಕ್ಷಣಾ ಸಮಿತಿಯು ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಲು ಇಲಾಖೆಯು ನಿರ್ದೇಶನ ನೀಡಿದೆ.

ಇಲಾಖೆಯಲ್ಲಿ ಅಧಿಕಾರಿಗಳು ಸಮರ್ಥವಾಗಿ ಕೆಲಸ ಮಾಡಿ ಮಕ್ಕಳನ್ನು ಬಿಕ್ಷಾಟನೆ ಹೆಸರಿನಲ್ಲಿ ಇಂತಹಾ ದಂಧೆಗೆ ಬಳಸಿಕೊಳ್ಳುವ ವ್ಯಕ್ತಿ ಗಳ ಮೇಲೆ ಕಠಿಣ ಕ್ರಮ ತೆಗೆದು ಕೊಳ್ಳಲು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್