
ಚಾಮರಾಜನಗರ[ಜಕ.09]: ಅಲೆಮಾರಿ ಮಕ್ಕಳಿಗೆ ರಾಜ್ಯದಲ್ಲಿ ಟೆಂಟ್ ಸ್ಕೂಲ್ಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.
ಜಿಲ್ಲಾ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲೆಮಾರಿ ಮಕ್ಕಳ ಪುನರ್ವಸತಿಗಾಗಿ ರಾಜ್ಯ ಸರ್ಕಾರದ ವತಿಯಿಂದ ದೊಡ್ಡ ಯೋಜನೆಯನ್ನೇ ಹಾಕಿಕೊಂಡಿದ್ದೇವೆ. ರಾಜ್ಯದಲ್ಲಿ ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗಬಾರದು, ಎಲ್ಲರಿಗೂ ಶಿಕ್ಷಣ ಸಿಗಬೇಕು ಎಂದು ಹೇಳಿದರು.
ಮಾ.31ರೊಳಗೆ ಮಕ್ಕಳ ಸಹಾಯವಾಣಿ:
ವಿದ್ಯಾರ್ಥಿಗಳಿಗೆ ನೆರವಾಗಲೆಂದು ಶಿಕ್ಷಣ ಇಲಾಖೆ ವತಿಯಿಂದ ಮಾ.31ರೊಳಗೆ ಸಹಾಯವಾಣಿ ಆರಂಭಿಸಲಾಗುವುದು. ಮಕ್ಕಳು, ಪೋಷಕರು ಹಾಗೂ ಶಿಕ್ಷಕರು ತಮ್ಮ ಸಮಸ್ಯೆಗಳ ಕುರಿತು ದೂರು ಸಲ್ಲಿಸಲು ಈ ಸಹಾಯವಾಣಿ ನೆರವಾಗಲಿದೆ. ನಿಗದಿತ ಅವಧಿಯೊಳಗೆ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ಸಹಾಯವಾಣಿಯ ಉದ್ದೇಶವಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ