ರೋಹಿಣಿ ಸಿಂಧೂರಿ ಸೇರಿ ನಾಲ್ವರು IAS ಅಧಿಕಾರಿಗಳ ಎತ್ತಂಗಡಿ

Published : Feb 22, 2019, 05:11 PM ISTUpdated : Feb 22, 2019, 05:52 PM IST
ರೋಹಿಣಿ ಸಿಂಧೂರಿ ಸೇರಿ ನಾಲ್ವರು IAS ಅಧಿಕಾರಿಗಳ ಎತ್ತಂಗಡಿ

ಸಾರಾಂಶ

ರಾಜ್ಯ ಮೈತ್ರಿ ಸರ್ಕಾರದಲ್ಲಿ ಅಧಿಕಾರಿಗಳ ವರ್ಗಾವಣೆ ಮುಂದುವರಿದಿದ್ದು, ಇಂದು ರೋಹಿಣಿ ಸಿಂಧೂರಿ ಸೇರಿದಂತೆ ನಾಲ್ವರು IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ಬೆಂಗಳೂರು, (ಫೆ.22): ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಗೆ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಖಡಕ್ ಡಿಸಿ, ಜನ ಮೆಚ್ಚಿದ ದಕ್ಷ ಅಧಿಕಾರಿ ರೋಹಿಣಿ ಸಿಂಧೂರಿ

ರೋಹಿಣಿ ಸಿಂಧೂರಿ ಸ್ಥಾನಕ್ಕೆ ಅಕ್ರಂ ಪಾಷಾ ಅವರನ್ನು ನೇಮಕ ಮಾಡಿ ಇಂದು [ಶುಕ್ರವಾರ] ಆದೇಶ ಹೊರಡಿಸಿದೆ. ಈ ಮೊದಲು ಅಕ್ರಂ ಪಾಷಾ ಅಲ್ಪ ಸಂಖ್ಯಾತ ನಿರ್ದೇಶನಾಲಯದ ನಿರ್ದೇಶಕರಾಗಿದ್ದರು.

ಸಚಿವ ರೇವಣ್ಣ ಬೆಂಬಲಿಗನಿಗೆ ಡಿಸಿ ರೋಹಿಣಿ ಕೊಟ್ಟ ‘ಮರಳೇಟು’

ಇನ್ನು ಹಾವೇರಿ ಜಿಲ್ಲಾಧಿಕಾರಿಯಾಗಿದ್ದ ಎಂ.ವಿ ವೆಂಕಟೇಶ್ ಅವರನ್ನು ರಾಷ್ಟ್ರೀಯ ತೋಟಗಾರಿಕಾ ಮಿಷನ್ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದ್ದು, ಹಾವೇರಿ ಜಿಲ್ಲಾಧಿಕಾರಿಯಾಗಿ ಕೆಪಿಎಸ್ಸಿ ಪರೀಕ್ಷಾಧಿಕಾರಿಯಾಗಿದ್ದ ಕೃಷ್ಣಾ ಬಾಜಪೇಯಿ ಅವರನ್ನು ನೇಮಿಸಲಾಗಿದೆ.

ವರ್ಗಾವಣೆ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದು, ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಲಿಲ್ಲ. ರೋಹಿಣಿ ಬದಲಾಗಿ ಹೆಚ್ಚುವರಿ ಜಿಲ್ಲಾಧಿಕಾರಿ ವೈಶಾಲಿ ಅವರು ಹಾಸನ ನೂತನ ಡಿಸಿ ಅಕ್ರಂ ಪಾಷಾ  ಅವರಿಗೆ ಅಧಿಕಾರ ಹಸ್ತಾಂತರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದ್ವೇಷ ಭಾಷಣದ ವಿರುದ್ದ ಕಾನೂನು ತಂದಿರುವುದು ಸಂವಿಧಾನಕ್ಕೆ ವಿರುದ್ಧ: ಸಂಸದ ಬೊಮ್ಮಾಯಿ
ಕ್ರೀಡಾಪಟುಗಳಿಗೆ ಸರ್ಕಾರಿ ನೇಮಕಾತಿಯಲ್ಲಿ ಹೆಚ್ಚುವರಿ ಮೀಸಲಾತಿ: ಸಿಎಂ ಸಿದ್ದರಾಮಯ್ಯ