ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಯತ್ನಾಳ್ ಹೇಳಿದ್ದು ಸತ್ಯವಾಯ್ತು...!

Published : Feb 16, 2021, 10:21 PM IST
ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಯತ್ನಾಳ್ ಹೇಳಿದ್ದು ಸತ್ಯವಾಯ್ತು...!

ಸಾರಾಂಶ

ಬಿಜೆಪಿ ಶಾಸಕ ಮೊದಲೇ ನುಡಿದಂತೆಯೇ ರಾಜ್ಯ ಸರ್ಕಾರ ಮತ್ತೆ ಅಧಿಕಾರಿಗಳನ್ನ ವರ್ಗಾವಣೆ ಮಾಡಿದ್ದು, ಅಚ್ಚರಿಗೆ ಕಾರಣವಾಗಿದೆ.

ಬೆಂಗಳೂರು, (ಫೆ.16): ಇತ್ತೀಚೆಗಷ್ಟೇ 9 ಜಿಲ್ಲಾಧಿಕಾರಿಗಳು ಸೇರಿದಂತೆ 41 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಬೆನ್ನಲ್ಲೇ ರಾಜ್ಯ ಸರ್ಕಾರ ಮತ್ತೆ ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಹೌದು... ರಾಜ್ಯ ಸರ್ಕಾರ ಇಂದು (ಮಂಗಳವಾರ) ಮತ್ತೆ ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆ ಹಿಂದೆ ದೊಡ್ಡ ದಂಧೆ ಇದೆ ಎಂದು ಆರೋಪ ಮಾಡಿದ್ದರು. ಅಲ್ಲದೇ ಐಪಿಎಸ್ ಟ್ರಾನ್ಸ್‌ಫರ್ ಪಟ್ಟಿ ರೆಡಿಯಾಗಿದೆ ಎಂದು ಮೊದಲೇ ಹೇಳಿದ್ದರು.

ಅದರಂತೆ ಮಂಗಳವಾರ) ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ.

ವರ್ಗಾವಣೆಯಾದ ಅಧಿಕಾರಿಗಳ ಪಟ್ಟಿ
* ಭಾಸ್ಕರರಾವ್ -ಎಡಿಜಿಪಿ ರೈಲ್ವೆ,
* ಪ್ರಶಾಂತ್ ಕುಮಾರ್ ಠಾಕೂರ್ -ಎಡಿಜಿಪಿ ಲೋಕಾಯುಕ್ತ,
* ಡಾ.ಎಸ್. ಮೂರ್ತಿ - ಎಡಿಜಿಪಿ ಮತ್ತು ಎಂಡಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ,
* ಡಾ.ಕೆ. ರಾಮಚಂದ್ರರಾವ್ -ಎಡಿಜಿಪಿ ಬಿಎಂಟಿಎಫ್
* ಅರುಣ್ ಚಕ್ರವರ್ತಿ -ಎಡಿಜಿಪಿ ಆಂತರಿಕ ಭದ್ರತಾ ವಿಭಾಗ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ