ರಾಜ್ಯದಲ್ಲಿ ಆಗಸ್ಟ್‌ವರೆಗೆ ಲಸಿಕೆ ಅಭಾವ : ಡಿಸಿಎಂ ಸುಳಿವು

Suvarna News   | Asianet News
Published : May 25, 2021, 03:16 PM ISTUpdated : May 25, 2021, 03:48 PM IST
ರಾಜ್ಯದಲ್ಲಿ ಆಗಸ್ಟ್‌ವರೆಗೆ ಲಸಿಕೆ ಅಭಾವ  : ಡಿಸಿಎಂ ಸುಳಿವು

ಸಾರಾಂಶ

ಲಸಿಕೆ ಪ್ರಕ್ರಿಯೆ ಚುರುಕುಗೊಳಿಸುವತ್ತ ಸರ್ಕಾರ ಯತ್ನ  ಲಸಿಕೆ ಅಭಾವ ಸಾಧ್ಯತೆ ಬಗ್ಗೆ ಡಿಸಿಎಂ ಅಶ್ವತ್ಥ ನಾರಾಯಣ್ ಸುಳಿವು  ಲಸಿಕೆ ಅಭಿಯಾನ ಸರಿಯಾಗಿ ನಡೆಯಲು ಇನ್ನು ಎರಡು ತಿಂಗಳು ಅಗತ್ಯ

ಬೆಂಗಳೂರು (ಮೇ.25): ರಾಜ್ಯದಲ್ಲಿ ಕೊರೋನಾ ಅಟ್ಟಹಾಸದ ಆತಂಕ ಹೆಚ್ಚಾಗುತ್ತಲೇ ಇದ್ದು ಲಸಿಕೆ ಪ್ರಕ್ರಿಯೆ ಚುರುಕುಗೊಳಿಸುವತ್ತ ಸರ್ಕಾರ ಯತ್ನಿಸುತ್ತಿದೆ. ಆದರೆ ಆಗಸ್ಟ್‌ವರೆಗೂ ಲಸಿಕೆ ಅಭಾವ ಸಾಧ್ಯತೆ ಬಗ್ಗೆ ಡಿಸಿಎಂ ಅಶ್ವತ್ಥ ನಾರಾಯಣ್ ಸುಳಿವು ನೀಡಿದ್ದಾರೆ. 

ಬೆಂಗಳೂರಿನಲ್ಲಿಂದು ಮಾತನಾಡಿದ ಡಿಸಿಎಂ ಅಶ್ವತ್ಥ ನಾರಾಯಣ್ ಲಸಿಕೆ ಅಭಿಯಾನ ಸರಿಯಾಗಿ ನಡೆಯಲು ಇನ್ನು ಎರಡು ತಿಂಗಳು ಬೇಕು. ರಾಜ್ಯದ ಬೇಡಿಕೆಗೆ ಅನುಗುಣವಾಗಿ ಲಸಿಕೆ ಸಿಗಲು 2  ತಿಂಗಳ ಸಮಯದ ಅಗತ್ಯವಿದೆ ಎಂದು ಹೇಳಿದರು. 

ಡಿಸಿಎಂ ಅಶ್ವತ್ಥ ನಾರಾಯಣ್ ಆಗಸ್ಟ್ ವರೆಗೂ ಲಸಿಕೆ ಪೂರೈಕೆ ಕಷ್ಟ ಎಂಬ ಸಂದೇಶ ನೀಡಿದ್ದಾರೆ. ಆಗಸ್ಟ್ ಗೆ ನಮ್ಮಲ್ಲಿ ಹೆಚ್ಚು ಲಸಿಕೆ ಪ್ರೊಡಕ್ಷನ್ ಆಗುತ್ತವೆ.  ಈಗ ಭಾರತ್ ಬಯೋಟೆಕ್, ಸೀರಂ, ಸ್ಪುಟ್ನಿಕ್ ಲಸಿಕೆ ಉತ್ಪಾದನೆ ಆಗುತ್ತಿದೆ. ಲಸಿಕೆ ಉತ್ಪಾದನೆಯ ವಿಸ್ತರಣೆಯನ್ನು ಆಯಾ ಕಂಪನಿಗಳು ಹೆಚ್ಚಳ ಮಾಡುತ್ತಿವೆ. ಇವೆಲ್ಲವೂ ಸರಿ ಹೋಗೋದಕ್ಕೆ ಕೆಲ ತಿಂಗಳುಗಳ ಸಮಯ ಬೇಕು ಎಂದರು.

ಬ್ಲ್ಯಾಕ್ ಫಂಗಸ್ ಮೂಲ ಪತ್ತೆಗೆ ಡಿಸಿಎಂ ಸೂಚನೆ : ತಜ್ಞ ವೈದ್ಯರಿಂದ ಅಧ್ಯಯನ

 ಆದ್ಯತಾ ವಲಯಕ್ಕೆ 18 ವರ್ಷ ಮೇಲ್ಪಟ್ಟವರಿಗೂ ರಾಜ್ಯದಲ್ಲಿ ಲಸಿಕೆ ನೀಡಲಾಗುತ್ತಿದೆ. ಈ ತಿಂಗಳ ಕೊನೆಯವರೆಗೂ ಇವರಿಗೆ ಆದ್ಯತೆ ಮೇಲೆ ಲಸಿಕೆ ಕೊಡುತ್ತೇವೆ. ನಾವು ಒಂದು ದಿನವೂ ಲಸಿಕೆ‌ ಕೊಡುವುದು ನಿಲ್ಲಿಸಿಲ್ಲ. ಜನ ಸಾಮಾನ್ಯರಿಗೆ ಲಸಿಕೆ ಕೊಡುವ ಕೆಲಸ ಆಗುತ್ತಿಲ್ಲ. ಸರ್ಕಾರದ ಗುರಿ ಇರುವುದು ಈ ವರ್ಷದ ಕೊನೆಯ ಒಲಗೆ ಎಲ್ಲರಿಗೂ ಲಸಿಕೆ ನೀಡಬೇಕೆನ್ನುವುದಾಗಿದೆ ಎಂದರು.

ವರ್ಷಾಂತ್ಯದೊಳಗೆ ಎಲ್ಲಾ ನಾಗರೀಕರಿಗೂ ಒಂದು ಡೋಸ್ ಆದರು ಲಸಿಕೆ ನೀಡುವ ಗುರಿ ಇದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ್ ಹೇಳಿದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು, ಆದ್ರೆ ಒಂದರಿಂದ 2 ಮಕ್ಕಳನ್ನ ಮಾಡಿಕೊಳ್ಳಿ; ಸಿಎಂ ಸಿದ್ದರಾಮಯ್ಯ
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ