Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ

Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ

Published : Jun 17, 2026, 04:50 PM IST

ಕರ್ನಾಟಕ ಸರ್ಕಾರವು 'ಗೃಹಲಕ್ಷ್ಮಿ' ಮತ್ತು 'ಗೃಹಜ್ಯೋತಿ' ಯೋಜನೆಗಳನ್ನು ಪರಿಷ್ಕರಿಸಲು ಮುಂದಾಗಿದ್ದು, ಅನರ್ಹರನ್ನು ತೆಗೆದುಹಾಕುವ ಗುರಿ ಹೊಂದಿದೆ. ಈ ಕ್ರಮವು ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ವಿರೋಧ ಪಕ್ಷಗಳು ಟೀಕಿಸುತ್ತಿವೆ.

ಬೆಂಗಳೂರು (ಜೂ.17): ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಯೋಜನೆಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಅನರ್ಹರಾಗಿದ್ದರೂ ಉಚಿತ ಕರೆಂಟ್ ಹಾಗೂ ಎರಡು ಸಾವಿರ ರೂಪಾಯಿ ಹಣ ಪಡೆಯುತ್ತಿದ್ದವರಿಗೆ ಬ್ರೇಕ್ ಹಾಕಲು ಸರ್ಕಾರ ಅಖಾಡಕ್ಕಿಳಿದಿದೆ.

ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್

ಇದರಿಂದಾಗಿ ರಾಜ್ಯದಲ್ಲಿ ವೋಟ್ ಇದ್ದವರಿಗೆ ಮಾತ್ರವೇ ಗ್ಯಾರಂಟಿ ಸೌಲಭ್ಯ ಸಿಗಲಿದೆಯೇ ಹಾಗೂ ಫಲಾನುಭವಿಗಳು ಮತ್ತೆ ಅರ್ಜಿ ಸಲ್ಲಿಸಬೇಕೇ ಎಂಬ ಆತಂಕ ಶುರುವಾಗಿದೆ. ಈ ಪರಿಷ್ಕರಣೆಯನ್ನು "ತುಘಲಕ್ ದರ್ಬಾರ್" ಎಂದು ಕರೆದಿರುವ ವಿರೋಧ ಪಕ್ಷ ಬಿಜೆಪಿ, ಸರ್ಕಾರ ಯೋಜನೆಗಳನ್ನೇ ನಿಲ್ಲಿಸಲು ಸಂಚು ರೂಪಿಸಿದೆ ಎಂದು ಮುಗಿಬಿದ್ದಿದೆ.

ಆದರೆ, ಈ ಆರೋಪಗಳನ್ನು ಸ್ಪಷ್ಟವಾಗಿ ನಿರಾಕರಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್, "ಇದು ಹೃದಯದ ಪ್ರೀತಿಯ ಯೋಜನೆ, ಯಾವುದೇ ಕಾರಣಕ್ಕೂ ನಿಲ್ಲಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ. ಕೇವಲ ತಾಂತ್ರಿಕ ಪರಿಷ್ಕರಣೆ ಮಾತ್ರ ನಡೆಯುತ್ತಿದ್ದು, ಅರ್ಹರಿಗೆ ಯೋಜನೆ ಮುಂದುವರೆಯಲಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
Read more