ರಾಯಚೂರಲ್ಲಿ 45.6 ಡಿಗ್ರಿ: 10 ವರ್ಷದ ದಾಖಲೆ ತಾಪ!

Published : May 01, 2024, 04:44 AM ISTUpdated : May 01, 2024, 12:02 PM IST
ರಾಯಚೂರಲ್ಲಿ 45.6 ಡಿಗ್ರಿ:  10 ವರ್ಷದ ದಾಖಲೆ ತಾಪ!

ಸಾರಾಂಶ

ರಾಜ್ಯದಲ್ಲಿ ದಿನೇದಿನೇ ತಾಪಮಾನ ಹೆಚ್ಚುತ್ತಿದ್ದು, ರಾಯಚೂರಿನಲ್ಲಿ ಮಂಗಳವಾರ 45.6 ಡಿಗ್ರಿ ಸೆಲ್ಶಿಯಸ್‌ ಉಷ್ಣಾಂಶ ದಾಖಲಾಗಿದೆ. ಇದು ಕಳೆದ ಒಂದು ದಶಕದಲ್ಲೇ ರಾಯಚೂರಿನಲ್ಲಿ ಏಪ್ರಿಲ್‌ ತಿಂಗಳಲ್ಲಿ ದಾಖಲಾದ ಅತೀ ಗರಿಷ್ಠ ತಾಪಮಾನವಾಗಿದೆ.

ಕಲಬುರಗಿ (ಮೇ.1): ರಾಜ್ಯದಲ್ಲಿ ದಿನೇದಿನೇ ತಾಪಮಾನ ಹೆಚ್ಚುತ್ತಿದ್ದು, ರಾಯಚೂರಿನಲ್ಲಿ ಮಂಗಳವಾರ 45.6 ಡಿಗ್ರಿ ಸೆಲ್ಶಿಯಸ್‌ ಉಷ್ಣಾಂಶ ದಾಖಲಾಗಿದೆ. ಇದು ಕಳೆದ ಒಂದು ದಶಕದಲ್ಲೇ ರಾಯಚೂರಿನಲ್ಲಿ ಏಪ್ರಿಲ್‌ ತಿಂಗಳಲ್ಲಿ ದಾಖಲಾದ ಅತೀ ಗರಿಷ್ಠ ತಾಪಮಾನವಾಗಿದೆ.

ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ ಸೇರಿದಂತೆ ಕರ್ನಾಟಕದ ಉತ್ತರ ಹಾಗೂ ಕಲ್ಯಾಣ ಜಿಲ್ಲೆಗಳಲ್ಲಿ ಕಳೆದ 3 ದಿನದಿಂದ ಉಷ್ಣ ಅಲೆ ಹೆಚ್ಚಿದ್ದು, ಜನಜೀವನ ಕಂಗಾಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ಏ.30ರ ಮಂಗಳವಾರ ರಾಜ್ಯದಲ್ಲೇ ಅತೀ ಹೆಚ್ಚಿನ ಗರಿಷ್ಠ 45.6 ಡಿಗ್ರಿ ಸೆಲ್ಶಿಯಸ್‌ ಉಷ್ಣಾಂಶ ರಾಯಚೂರು ಜಿಲ್ಲೆಯ ಸಾಲಗುಂದಿ ಹೋಬಳಿಯ ಧಡೇಸುಗೂರ್‌, ಸೋಮಲಾಪೂರ ಹಾಗೂ ಹುಡಾ ಹೋಬಳಿಯ ಮುಕ್ಕುಂದಾ, ರೌಡಕುಂದಾ ಗ್ರಾಮಗಳ ಪರಿಸರದಲ್ಲಿ ದಾಖಲಾಗಿದೆ.

ಕರ್ನಾಟಕಕ್ಕೆ ಇನ್ನೂ ನಾಲ್ಕು ದಿನ ಉಷ್ಣಮಾರುತ: ಹವಾಮಾನ ಇಲಾಖೆ

ಇನ್ನು ಇದೇ ದಿನ ಕಲಬುರಗಿ ಜಿಲ್ಲೆಯ ಕಾಳಗಿ, ರಾಯಚೂರು ಜಿಲ್ಲೆ ದೇವದುರ್ಗದ ಗಬ್ಬೂರ, ಗಿಲ್ಲೇಸುಗೂರ್‌ ಹಾಗೂ ಬಾಗಲಕೋಟೆ ಜಿಲ್ಲೆಯ ಹುನಗುಂದ್‌ ಹೋಬಳಿ ವ್ಯಾಪ್ತಿಯ ಕರಾಡಿ, ಮರೋಳ, ಅಮರಾವತಿ, ಬೂದಿಹಾಳಗಳಲ್ಲಿ 45.3 ಡಿಗ್ರಿ ಸೆಲ್ಶಿಯಸ್‌ ಉಷ್ಣಾಂಶ ದಾಖಲಾಗಿದೆ.

ಇನ್ನು ರಾಯಚೂರು ಜಿಲ್ಲೆ ಸಿಂಧನೂರಿನ ಬಾದರ್ಲಿ, ಮಾನ್ವಿಯಲ್ಲಿ ಕ್ರಮವಾಗಿ 45 ಹಾಗೂ 45.2, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ನಲತವಾಡದಲ್ಲಿ 45 ಡಿಗ್ರಿ ಸೆಲ್ಶಿಯಸ್‌, ಯಾದಗಿರಿ ಜಿಲ್ಲೆಯ ಶಹಾಪುರದ ಗೋಗಿಯಲ್ಲಿ 45.1 ಡಿಗ್ರಿ ಸೆಲ್ಶಿಯಸ್‌ ಉಷ್ಣಾಂಶ ದಾಖಲಾಗಿದೆ.

ರಾಜ್ಯದಲ್ಲಿ 43 ಡಿಗ್ರಿ ತಲುಪಿದ ಉಷ್ಣಾಂಶ: ಇಬ್ಬರು ವೃದ್ಧೆಯರು ಬಲಿ

ಇದಲ್ಲದೆ ರಾಯಚೂರು, ಕಲಬುರಗಿ, ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಗದಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ತುಮಕೂರು ಜಿಲ್ಲೆಯ ಕೆಲವು ಭಾಗಗಳಲ್ಲಿ ಸೋಮವಾರ 42ರಿಂದ 45.6 ಡಿಗ್ರಿ ಸೆಲ್ಸಿಯಸ್‌ ತಾಪ ದಾಖಲಾಗಿತ್ತು.

ಮುಂದಿನ 5 ದಿನಗಳ ಕಾಲ ಕರ್ನಾಟಕದ ಉತ್ತರ ಭಾಗದಲ್ಲಿ ಉಷ್ಣ ಮಾರುತಗಳು ಬೀಸುವುದು ಮುಂದುವರಿಯಲಿದೆ. ರಾತ್ರಿಯೂ ಕೂಡಾ ಉಷ್ಣಾಂಶದಲ್ಲಿ ಏರಿಕೆ ಅನುಭ‍ವಕ್ಕೆ ಬರಲಿದ್ದು, ಜನತೆ ಬಿಸಿಲಾಘಾತದಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಮುಂಜಾಗ್ರತೆ ಕ್ರಮಗಳಿಗೆ ಮುಂದಾಗುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!