ಬಿಸಿಲಧಗೆ ಏರುತ್ತಿರುವ ಬೆನ್ನಲೇ ಮತ್ತೊಂದು ಆಘಾತ: ಬೆಂಗಳೂರು ನಗರದಲ್ಲಿ 2518 ಮರ ಕತ್ತರಿಸಲು ಹೈ ಅನುಮತಿ

Published : Feb 18, 2025, 12:45 PM ISTUpdated : Feb 18, 2025, 12:55 PM IST
ಬಿಸಿಲಧಗೆ ಏರುತ್ತಿರುವ ಬೆನ್ನಲೇ ಮತ್ತೊಂದು ಆಘಾತ: ಬೆಂಗಳೂರು ನಗರದಲ್ಲಿ 2518 ಮರ ಕತ್ತರಿಸಲು ಹೈ ಅನುಮತಿ

ಸಾರಾಂಶ

ಬೆಂಗಳೂರಿನಲ್ಲಿ ರೈಲು ಯೋಜನೆ ಮತ್ತು ಆಸ್ಪತ್ರೆಯ ವಿಸ್ತರಣೆಗಾಗಿ 2518 ಮರಗಳನ್ನು ಕಡಿಯಲು ಹೈಕೋರ್ಟ್ ಅನುಮತಿ ನೀಡಿದೆ. 

ಬೆಂಗಳೂರು : ನಗರದ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಭಾರತೀಯ ವಾಯುಪಡೆಯ ಕಮಾಂಡ್‌ ಆಸ್ಪತ್ರೆಯ ವಿಸ್ತರಣೆಗೆ 530 ಮರ ಹಾಗೂ ಬೆಂಗಳೂರು ಉಪನಗರ ರೈಲು ಯೋಜನೆಯಡಿ (ಬಿಎಸ್‌ಆರ್‌ಪಿ) ಅಂಬೇಡ್ಕರ್‌ ನಗರ ಮತ್ತು ಮುದ್ದೇನಹಳ್ಳಿ ಮಾರ್ಗದಲ್ಲಿ 1988 ಮರಗಳನ್ನು ತೆರವುಗೊಳಿಸಲು ಕರ್ನಾಟಕ ರೈಲ್ವೆ ಮೂಲಸೌಲಭ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ (ಕೆ-ರೈಡ್) ಅನುಮತಿ ನೀಡಿ ಹೈಕೋರ್ಟ್‌ ಆದೇಶಿಸಿದೆ.

ಮೆಟ್ರೋ ಯೋಜನೆ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ನಗರದಲ್ಲಿ ಮರ ಕಡಿಯುವುದಕ್ಕೆ ಆಕ್ಷೇಪಿಸಿ ಪರಿಸರವಾದಿ ದತ್ತಾತ್ರೇಯ ಟಿ.ದೇವರೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

 ಮರ ತಜ್ಞರ ಸಮಿತಿ (ಟಿಇಸಿ) ಶಿಫಾರಸಿನ ಮೇರೆಗೆ ಕಮಾಂಡ್ ಆಸ್ಪತ್ರೆಗಾಗಿ 530 ಮರಗಳು ಮತ್ತು ಬೆಂಗಳೂರು ಉಪನಗರ ರೈಲು ಯೋಜನೆಗಾಗಿ ಅಂಬೇಡ್ಕರ್ ನಗರದಿಂದ ಮುದ್ದನಹಳ್ಳಿಯವರೆಗಿನ ಮಾರ್ಗದಲ್ಲಿ 1988 ಮರಗಳ ಕಡಿಯಲು ಹಾಗೂ 289 ಮರಗಳನ್ನು ಸ್ಥಳಾಂತರ ಮಾಡಲು ನ್ಯಾಯಪೀಠ ಒಪ್ಪಿಗೆ ನೀಡಿದೆ. ಅಲ್ಲದೆ, ಕೆ-ರೈಡ್ ಕಡೆಯಿಂದ 580 ಮರಗಳನ್ನು ಅನುಮತಿ ಇಲ್ಲದೆ ಕತ್ತರಿಸಿರುವ ಹಿನ್ನೆಲೆಯಲ್ಲಿ ಪರಿಹಾರವಾಗಿ 5000 ಗಿಡ ನೆಡಬೇಕು ಎಂದು ಪೀಠ ಆದೇಶದಲ್ಲಿ ತಿಳಿಸಿದೆ.ರೈಲು ಯೋಜನೆ, ಆಸ್ಪತ್ರೆಯ ವಿಸ್ತರಣೆಗೆ ಬೆಂಗಳೂರು ನಗರದಲ್ಲಿ 2518 ಮರ ಕತ್ತರಿಸಲು ಅನುಮತಿ ನೀಡಿ ಹೈಕೋರ್ಟ್‌ ಆದೇಶ

ಬೆಂಗಳೂರು : ನಗರದ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಭಾರತೀಯ ವಾಯುಪಡೆಯ ಕಮಾಂಡ್‌ ಆಸ್ಪತ್ರೆಯ ವಿಸ್ತರಣೆಗೆ 530 ಮರ ಹಾಗೂ ಬೆಂಗಳೂರು ಉಪನಗರ ರೈಲು ಯೋಜನೆಯಡಿ (ಬಿಎಸ್‌ಆರ್‌ಪಿ) ಅಂಬೇಡ್ಕರ್‌ ನಗರ ಮತ್ತು ಮುದ್ದೇನಹಳ್ಳಿ ಮಾರ್ಗದಲ್ಲಿ 1988 ಮರಗಳನ್ನು ತೆರವುಗೊಳಿಸಲು ಕರ್ನಾಟಕ ರೈಲ್ವೆ ಮೂಲಸೌಲಭ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ (ಕೆ-ರೈಡ್) ಅನುಮತಿ ನೀಡಿ ಹೈಕೋರ್ಟ್‌ ಆದೇಶಿಸಿದೆ.

ಮೆಟ್ರೋ ಯೋಜನೆ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ನಗರದಲ್ಲಿ ಮರ ಕಡಿಯುವುದಕ್ಕೆ ಆಕ್ಷೇಪಿಸಿ ಪರಿಸರವಾದಿ ದತ್ತಾತ್ರೇಯ ಟಿ.ದೇವರೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

 ಮರ ತಜ್ಞರ ಸಮಿತಿ (ಟಿಇಸಿ) ಶಿಫಾರಸಿನ ಮೇರೆಗೆ ಕಮಾಂಡ್ ಆಸ್ಪತ್ರೆಗಾಗಿ 530 ಮರಗಳು ಮತ್ತು ಬೆಂಗಳೂರು ಉಪನಗರ ರೈಲು ಯೋಜನೆಗಾಗಿ ಅಂಬೇಡ್ಕರ್ ನಗರದಿಂದ ಮುದ್ದನಹಳ್ಳಿಯವರೆಗಿನ ಮಾರ್ಗದಲ್ಲಿ 1988 ಮರಗಳ ಕಡಿಯಲು ಹಾಗೂ 289 ಮರಗಳನ್ನು ಸ್ಥಳಾಂತರ ಮಾಡಲು ನ್ಯಾಯಪೀಠ ಒಪ್ಪಿಗೆ ನೀಡಿದೆ. ಅಲ್ಲದೆ, ಕೆ-ರೈಡ್ ಕಡೆಯಿಂದ 580 ಮರಗಳನ್ನು ಅನುಮತಿ ಇಲ್ಲದೆ ಕತ್ತರಿಸಿರುವ ಹಿನ್ನೆಲೆಯಲ್ಲಿ ಪರಿಹಾರವಾಗಿ 5000 ಗಿಡ ನೆಡಬೇಕು ಎಂದು ಪೀಠ ಆದೇಶದಲ್ಲಿ ತಿಳಿಸಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ಆಲೂಗಡ್ಡೆಗೆ ಮೊಳಕೆ ಬಂದರೆ ತಿನ್ನಬಹುದಾ? ತಜ್ಞರ ಎಚ್ಚರಿಕೆ ಏನು, ಯಾವುದು- ಯಾರಿಗೆ ಅಪಾಯ?