ಕೇರಳ ಸಿಎಂ ಪುತ್ರಿಯ 135 ಕೋಟಿ ವಂಚನೆ ಕೇಸ್, ವೀಣಾ ವಿಜಯನ್ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

Published : Feb 16, 2024, 04:20 PM ISTUpdated : Feb 16, 2024, 04:28 PM IST
ಕೇರಳ ಸಿಎಂ ಪುತ್ರಿಯ 135 ಕೋಟಿ ವಂಚನೆ ಕೇಸ್, ವೀಣಾ ವಿಜಯನ್ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

ಸಾರಾಂಶ

ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರ ಪುತ್ರಿ ಮೇಲೆ ಕೇಳಿ ಬಂದಿರುವ  135 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಎಫ್ಐಒ ತನಿಖೆ ಪ್ರಶ್ನಿಸಿ ವೀಣಾ ವಿಜಯನ್‌ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಬೆಂಗಳೂರು (ಫೆ.16): ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರ ಪುತ್ರಿ ಮೇಲೆ ಕೇಳಿ ಬಂದಿರುವ  135 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಎಫ್ಐಒ ತನಿಖೆ ಪ್ರಶ್ನಿಸಿ ವೀಣಾ ವಿಜಯನ್‌ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಕೇಂದ್ರದ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ.  ನ್ಯಾ.ಎಂ.ನಾಗಪ್ರಸನ್ನ ಅವರ ಪೀಠ ಈ ತೀರ್ಪು ಪ್ರಕಟಿಸಿದೆ.

ಪಿಣರಾಯಿ ವಿಜಯನ್ ಪುತ್ರಿ ಟಿ.ವೀಣಾ  ಎಕ್ಸಲಾಜಿಕ್ ಸಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ನಿರ್ದೇಶಕಿಯಾಗಿದ್ದಾರೆ. ಈ ವೀಣಾ ಕಂಪೆನಿ ಮತ್ತು  ಕೊಚ್ಚಿನ್ ಮಿನರಲ್ಸ್‌- ರುಟೈಲ್ ಲಿಮಿಟೆಡ್‌ ನಡುವಿನ ಆರ್ಥಿಕ ವಹಿವಾಟುಗಳ ಕುರಿತ ವಿವಾದಕ್ಕೆ ಸಂಬಂಧಿಸಿ  ಕೇಂದ್ರ ಸರ್ಕಾರದ ಅಧೀನದ ಗಂಭೀರ ವಂಚನೆಗಳ ತನಿಖಾ ಕಚೇರಿಗೆ (ಎಸ್‌ಎಫ್‌ಐಒ) ಪ್ರಕರಣವನ್ನು ಒಪ್ಪಿಸಲಾಗಿದೆ. ಎಸ್‌ಎಫ್‌ಐಒ ತನಿಖೆ ಪ್ರಶ್ನಿಸಿ ವೀಣಾ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು ಅದು ಈಗ ವಜಾಗೊಂಡಿದೆ. ಈಗಾಗಲೇ ವೀಣಾ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸಬಾರದು ಹೈಕೋರ್ಟ್ ಎಸ್‌ಎಫ್‌ಐಒ  ಸೂಚನೆ ನೀಡಿತ್ತು.

ವೈದ್ಯಕೀಯ ಮತ್ತು ಉನ್ನತ ಶಿಕ್ಷಣಕ್ಕೆ ಸಿದ್ದರಾಮಯ್ಯ ಘೋಷಿಸಿದ ಅನುದಾನಗಳಿವು

ಅಲ್ಲದೆ, ಕಂಪನಿಗೆ ಸಂಬಂಧಿಸಿದ ದಾಖಲೆಗಳನ್ನು ಅರ್ಜಿದಾರರು ಎಸ್‌ಎಫ್‌ಐಒಗೆ ಒದಗಿಸಬೇಕು. ಅರ್ಜಿದಾರರ ವಿರುದ್ಧ ಬಂಧನದಂತಹ ಯಾವುದೇ ಬಲವಂತದ ಕ್ರಮವನ್ನು ಎಸ್‌ಫ್‌ಐಒ ಕೈಗೊಳ್ಳಬಾರದು ಎಂದು ಈಗಾಗಲೇ ಸೂಚಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಎರಡೂ ಕಂಪನಿಗಳ ನಡುವಿನ ಆರ್ಥಿಕ ವ್ಯವಹಾರದ ಮಾಹಿತಿ ನೀಡದಿರುವುದು ವಂಚನೆಯಾಗುವುದಿಲ್ಲ. ಯಾವುದೇ ಅಪರಾಧ ಎಸಗದಿದ್ದರೂ ಅರ್ಜಿದಾರರ ವಿರುದ್ಧ ಎಸ್‌ಎಫ್‌ಓ ತನಿಖೆಗೆ ಕೇಂದ್ರ ಸರ್ಕಾರ ಆದೇಶಿಸಿರುವುದು ಕಾನೂನುಬಾಹಿರ ಕ್ರಮವಾಗಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದಿದ್ದರು.

ಅಲ್ಪಸಂಖ್ಯಾತ ಸಮುದಾಯಕ್ಕೆ ಬಂಪರ್ ಘೋಷಿಸಿದ ಸಿದ್ದರಾಮಯ್ಯ, 393 ಕೋಟಿ ರೂ ಅನುದಾನ ಮೀಸಲು

ಕೇಂದ್ರ ಸರ್ಕಾರದ ಪರ ವಕೀಲರು, ಕೊಚ್ಚಿನ್ ಮಿನರಲ್ಸ್ ಕಂಪನಿ ಅರ್ಜಿದಾರರ ಆಪೇಕ್ಷೆಯಂತೆ 135 ಕೋಟಿ ರು. ರಾಜಕೀಯ ವ್ಯಕ್ತಿಗಳಿಗೆ ನೀಡಿದೆ ಹಾಗೂ ಸಾಫ್ಟ್‌ವೇರ್‌ ಸೇವೆಗೆಂದು 1.72 ಕೋಟಿ ರು. ನೀಡಿದೆ. ಆದರೆ, ವಾಸ್ತವವಾಗಿ ಯಾವುದೇ ಸೇವೆ ನೀಡದಿದ್ದರೂ ಎಕ್ಸಾಲಜಿಕ್‌ ಸಲ್ಯೂಷನ್ಸ್‌ ಕಂಪನಿಗೆ ಕೊಚ್ಚಿನ್ ಮಿನರಲ್ಸ್ ಹಣ ಸಂದಾಯ ಮಾಡಿದೆ. ಮಾಹಿತಿ ಕೇಳಿದರೆ ಜಿಎಸ್ ಟಿ ಪಾವತಿಸಿರುವುದಾಗಿ ಕಂಪನಿ ಹೇಳುತ್ತಿದೆ. ಈ ಎರಡು ಕಂಪನಿಗಳ ನಡುವಿನ ಹಲವು ವ್ಯವಹಾರಗಳು ಅನುಮಾನಾಸ್ಪದವಾಗಿವೆ ಎಂದು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ