ಅನುಕಂಪದ ನೌಕರಿ ನಿರಾಕರಣೆಗೆ 'ಹುದ್ದೆ ಖಾಲಿ ಇಲ್ಲ' ನೆಪ ಒಪ್ಪಲ್ಲ: ಹೈಕೋರ್ಟ್ | ಏನಿದು ಪ್ರಕರಣ?

Kannadaprabha News, Ravi Janekal |   | Kannada Prabha
Published : Aug 13, 2025, 10:13 AM IST
Karnataka High Court (Photo/ANI)

ಸಾರಾಂಶ

ಅನುದಾನಿತ ಕಾಲೇಜಿನಲ್ಲಿ ಉದ್ಯೋಗ ಖಾಲಿಯಿಲ್ಲದಿದ್ದರೂ ಅನುಕಂಪದ ಆಧಾರದ ಮೇಲೆ ನೌಕರಿ ನೀಡಲು ನಿರಾಕರಿಸುವಂತಿಲ್ಲ. ರಾಜ್ಯದ ಇತರೆ ಅನುದಾನಿತ ಕಾಲೇಜಿನಲ್ಲಿ ಖಾಲಿಯಿರುವ ಹುದ್ದೆ ಹುಡುಕಿ ನೀಡಬೇಕೆಂದು ಹೈಕೋರ್ಟ್ ಆದೇಶ.

ಬೆಂಗಳೂರು (ಆ.13): ನಿರ್ದಿಷ್ಟ ಅನುದಾನಿತ ಕಾಲೇಜಿನಲ್ಲಿ ಉದ್ಯೋಗ ಖಾಲಿಯಿಲ್ಲ ಎಂಬ ಕಾರಣಕ್ಕಾಗಿ ಅನುಕಂಪದ ಆಧಾರದ ಮೇಲೆ ನೌಕರಿ ನೀಡಲು ನಿರಾಕರಿಸಲು ಸಾಧ್ಯವಿಲ್ಲ. ರಾಜ್ಯದ ಇತರೆ ಅನುದಾನಿತ ಕಾಲೇಜಿನಲ್ಲಿ ಖಾಲಿಯಿರುವ ನೌಕರಿ ಹುಡುಕಿ ನೀಡಬೇಕಾಗುತ್ತದೆ ಎಂದು ಹೈಕೋರ್ಟ್ ಆದೇಶಿಸಿದೆ. 

ಬಾಗಲಕೋಟೆಯ ಅನುದಾನಿತ ಆದರ್ಶ ಪಿಯು ಕಾಲೇಜಿನಲ್ಲಿ ಎಫ್‌ಡಿಎ ನೌಕರನಾಗಿದ್ದ ತಮ್ಮ ತಂದೆ ಮೃತಪಟ್ಟ ಹಿನ್ನೆಲೆಯಲ್ಲಿ ಅನುಕಂಪದ ಆಧಾರದಲ್ಲಿ ತನಗೆ ನೌಕರಿ ನೀಡಲು ಕೋರಿ‌ ಸಂತೋಷ್ ಯಮನಪ್ಪ ವಡಕರ್ ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯಿಸಿದ್ದ ಪದವಿ ಪೂರ್ವಶಿಕ್ಷಣ ಇಲಾಖೆಯು ಹುದ್ದೆ ಖಾಲಿಯಿಲ್ಲ ಎಂದು ನೌಕರಿ ನಿರಾಕರಿಸಿ ಹಿಂಬರಹ ನೀಡಿತ್ತು. ಅದನ್ನು ಪ್ರಶ್ನಿಸಿ ಯಮನಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಪೀಠ, ಹುದ್ದೆ ಖಾಲಿಯಿಲ್ಲ ಎಂಬ ಕಾರಣ ನೀಡಿ ಅನುಕಂಪದ ಆಧಾರದ ಹುದ್ದೆಗಳಿಗೆ ಸಲ್ಲಿಕೆಯಾಗುವ ಮನವಿ ತಿರಸ್ಕರಿಸಲಾಗುವುದಿಲ್ಲ. ಇತರೆ ಅನುದಾನಿತ ಸಂಸ್ಥೆಗಳಲ್ಲಿ ಖಾಲಿ ಹುದ್ದೆ ಹುಡುಕಿ ಹಂಚಿಕೆ ಮಾಡಬೇಕು ಎಂದು ತಿಳಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಯಮನಪ್ಪಗೆ ನೀಡಿದ್ದ ಹಿಂಬರಹ ರದ್ದುಪಡಿಸಿದೆ.

ಪ್ರಕರಣದ ವಿವರ:

ಅರ್ಜಿದಾರರ ತಂದೆ ಬಾಗಲಕೋಟೆ ಜಿಲ್ಲೆಯ ಬೇವೂರಿನಲ್ಲಿರುವ ಸರ್ಕಾರಿ ಅನುದಾನಿತ ಆದರ್ಶ ವಿದ್ಯಾವರ್ಧಕ ಸಂಘದ ಅಧೀನದ ಆದರ್ಶ ಕಾಂಪೋಸಿಟ್ ಪ್ರೀ-ಯೂನಿವರ್ಸಿಟಿ ಕಾಲೇಜಿನಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಅವರ ನಿಧನ ಬಳಿಕ ಅವರ ಮಗ ಯಮನಪ್ಪ ಅನುಕಂಪದ ನೇಮಕಾತಿಗಾಗಿ ಆದರ್ಶ ವಿದ್ಯಾವರ್ಧಕ ಸಂಘದ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ್ದರು.

ಈ ಮನವಿಯನ್ನು ಸಂಘವು ಪದವಿ ಪೂರ್ವ ಶಿಕ್ಷಣದ ಉಪ ನಿರ್ದೇಶಕರಿಗೆ ರವಾನಿಸಿತ್ತು. ಅರ್ಜಿ ಪರಿಶೀಲಿಸಿದ್ದ ಪದವಿ ಪೂರ್ವ ಶಿಕ್ಷಣ ಇಲಾಖೆ, ಪ್ರಸ್ತುತ ಅನುಕಂಪದ ಮೇಲೆ ಉದ್ಯೋಗ ನೀಡಲು ಖಾಲಿ ಹುದ್ದೆಗಳಿಲ್ಲ ಎಂದು ತಿಳಿಸಿ ಮನವಿ ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್​ ಮೆಟ್ಟಿಲೇರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್