ಲಿಂಗಾಯತ ಪಂಚಮಸಾಲಿಗೆ 2 ಸಿ, 2 ಡಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣೆ ಹೊಸ್ತಿಲಿನಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಯಥಾಸ್ಥಿತಿ ಆದೇಶ ತೆರವುಗೊಳಿಸಿದೆ.
ಬೆಂಗಳೂರು (ಮಾ.23): ಲಿಂಗಾಯತ ಪಂಚಮಸಾಲಿಗೆ 2 ಸಿ, 2 ಡಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣೆ ಹೊಸ್ತಿಲಿನಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಯಥಾಸ್ಥಿತಿ ಆದೇಶ ತೆರವುಗೊಳಿಸಿದೆ. ರಾಘವೇಂದ್ರ ಡಿ.ಜಿ. ಎಂಬುವವರು ಪಂಚಮಸಾಲಿಗೆ 2 ಎ ಮೀಸಲಾತಿ ನೀಡದಂತೆ ಪಿಐಎಲ್ ಅರ್ಜಿ ಸಲ್ಲಿಸಲಿದ್ದರು. ಕೇಂದ್ರ ಸರ್ಕಾರದ ಸಾಲಿಸಿಟರ್ 2ಎ ಮೀಸಲಾತಿಯಲ್ಲಿ ಪರಿವರ್ತನೆ ಮಾಡುವುದಿಲ್ಲ ಎಂದು ಹೈಕೋರ್ಟ್ ಗೆ ಭರವಸೆ ನೀಡಿದ ಹಿನ್ನೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದ್ದ ಮಧ್ಯಂತರ ಆದೇಶ ತೆರವುಗೊಳಿಸಲಾಗಿದೆ.
ಹೀಗಾಗಿ ಪಂಚಮಸಾಲಿಗೆ 2 ಸಿ, 2 ಡಿ ಮೀಸಲಾತಿ ನೀಡಲು ಅಡ್ಡಿ ಇಲ್ಲದಂತಾಗಿದೆ. 2 ಎ ಮೀಸಲಾತಿಯಲ್ಲಿ ಬದಲಾವಣೆ ಮಾಡದಂತೆ ಲಿಖಿತ ಹೇಳಿಕೆ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಯಾವುದೇ ಕ್ರಮ ಹೈಕೋರ್ಟ್ ಅಂತಿಮ ತೀರ್ಪಿಗೆ ಬದ್ದವಾಗಿರಬೇಕೆಂದು ಸೂಚನೆ ನೀಡಲಾಗಿದೆ.
ನಾಳೆ ಸಂಪುಟ ಸಭೆ ನಿರ್ಧಾರ:
ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯದ ಮೀಸಲಾತಿ ವಿಚಾರ ನಾಳೆ ಸಂಜೆ 4ಗಂಟೆಗೆ ನಡೆಯುವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿ ಪ್ರಕಾರ ಸರ್ಕಾರದಿಂದ ತಿರ್ಮಾನ ಹೊರಬೀಳುವ ಸಾಧ್ಯತೆ ಇದೆ. ಈ ಹಿಂದೆ ಘೋಷಣೆ ಮಾಡಿದಂತೆ ಲಿಂಗಾಯತರಿಗೆ ಪ್ರತ್ಯೇಕ ಮೀಸಲಾತಿ. 2 ಡಿ ಪ್ರವರ್ಗದ ಮೂಲಕ 7% ಮೀಸಲಾತಿ ಸಾಧ್ಯತೆ.
ಪಂಚಮಸಾಲಿ ಮೀಸಲು ಬಗ್ಗೆ ನಾಡಿದ್ದು ನಿರ್ಧಾರ?
ಈಗಾಗಲೇ ಲಿಂಗಾಯತರು 3ಬಿ ಯಡಿ5% ಮೀಸಲಾತಿ ಪಡೆಯುತ್ತಿದ್ದಾರೆ. ಲಿಂಗಾಯತ ಸಮುದಾಯದ ಎಲ್ಲಾ ಪಂಗಡಗಳು ಮತ್ತು ಜಾತಿಗಳು ಒಂದೇ ಸೂರಿನಡಿ ತರುವ ನಿರ್ಧಾರದ ಹಿನ್ನೆಲೆಯಲ್ಲಿ ಲಿಂಗಾಯತ ಸಮುದಾಯ 2ಡಿ ಅನ್ನೋ ಪ್ರವರ್ಗ ದಡಿ 5% ಮೀಸಲಾತಿ ಜೊತೆಗೆ ಹೆಚ್ಚುವರಿಯಾಗಿ 2% ಪಡೆಯಲಿದ್ದಾರೆ. ಈ ನಿರ್ಧಾರ ಜಾರಿಯಾದರೆ ಲಿಂಗಾಯತರು ಒಟ್ಟು 7 % ಮೀಸಲಾತಿ ಪಡೆಯಲಿದ್ದಾರೆ.
ಎಸ್ಸಿ ಎಸ್ಟಿ ಮೀಸಲು ಹೆಚ್ಚಳ ಕಾಯ್ದೆ ಬೋಗಸ್: ಸುರ್ಜೇವಾಲಾ ಆರೋಪ
ಇದರ ಜತೆಗೆ ಒಕ್ಕಲಿಗ ಸಮುದಾಯದ ಮೀಸಲಾತಿ ಪ್ರಮಾಣ ಏರಿಕೆಯಾಗಲಿದೆ. ಸದ್ಯ ಒಕ್ಕಲಿಗರು 3ಎ ಪ್ರವರ್ಗದಡಿ 4% ಮೀಸಲಾತಿ ಪಡೆಯುತ್ತಿದ್ದಾರೆ. ನಾಳೆಯ ಸಂಪುಟ ಸಭೆಯಲ್ಲಿ 3ಎ ಪ್ರವರ್ಗ ರದ್ದು ಮಾಡಿ 2 ಸಿ ಪ್ರವರ್ಗ ಸೃಷ್ಟಿಸಲು ಸರ್ಕಾರ ಮುಂದಾಗಿದೆ. ಈ ಪ್ರವರ್ಗದ ಮೂಲಕ ಹೆಚ್ಚುವರಿಯಾಗಿ 2% ಮೀಸಲಾತಿ ನೀಡಲು ಸರ್ಕಾರದ ಲೆಕ್ಕಾಚಾರ ಹಾಕಿಕೊಂಡಿದೆ. ಇದರಿಂದ 2ಸಿ ಮೂಲಕ ಮೀಸಲಾತಿ ಪ್ರಮಾಣ 6% ಕ್ಕೆ ಏರಿಕೆಯಾಗಲಿದೆ. ಸರ್ಕಾರದ ಈ ಕ್ರಮದಿಂದ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಕ್ಕೆ ಹೆಚ್ಚಿನ ಬಲ ಸಿಗಲಿದೆ. ಹೀಗಾಗಿ ನಾಳೆಯ ಸಚಿವ ಸಂಪುಟ ಸಭೆ ಕುತೂಹಲ ಮೂಡಿಸಿದೆ.