ಕರ್ನಾಟಕ ಹೈಕೋರ್ಟ್ ನೇಮಕಾತಿ: ಡೇಟಾ ಎಂಟ್ರಿ ಹುದ್ದೆಗಳು, 80 ಸಾವಿರದವರೆಗೆ ವೇತನ

Published : Jul 04, 2026, 09:03 AM IST
Karnataka High Court

ಸಾರಾಂಶ

ಕರ್ನಾಟಕ ಉಚ್ಚ ನ್ಯಾಯಾಲಯವು ಬೆಂಗಳೂರಿನಲ್ಲಿ ಖಾಲಿ ಇರುವ 21 ಡೇಟಾ ಎಂಟ್ರಿ ಸಹಾಯಕ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಪದವಿ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದವರಿಗೆ ಮಾಸಿಕ ₹25,500 ರಿಂದ ₹81,100 ವರೆಗೆ ವೇತನ ನೀಡಲಾಗುತ್ತದೆ.

ಕರ್ನಾಟಕ ಉಚ್ಚ ನ್ಯಾಯಾಲಯವು (Karnataka High Court) ಖಾಲಿ ಇರುವ ಡೇಟಾ ಎಂಟ್ರಿ ಸಹಾಯಕ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:

ಸಂಸ್ಥೆಯ ಹೆಸರು: ಕರ್ನಾಟಕ ಹೈಕೋರ್ಟ್

ಹುದ್ದೆಯ ಹೆಸರು: ಡೇಟಾ ಎಂಟ್ರಿ ಸಹಾಯಕ

ಒಟ್ಟು ಹುದ್ದೆಗಳು: 21

ಕೆಲಸದ ಸ್ಥಳ: ಬೆಂಗಳೂರು (ಕರ್ನಾಟಕ)

ವಿದ್ಯಾರ್ಹತೆ:

ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.

ಮಾಸಿಕ ವೇತನ :

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 25,500-81,100 ವೇತನ ನೀಡಲಾಗುತ್ತದೆ. 

ವಯೋಮಿತಿ:

ಕನಿಷ್ಠ ವಯಸ್ಸು: 18 ವರ್ಷಗಳು

ಗರಿಷ್ಠ ವಯಸ್ಸು: 40 ವರ್ಷಗಳು

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ಮತ್ತು ಒಬಿಸಿ (2A/2B/3A/3B) ಅಭ್ಯರ್ಥಿಗಳಿಗೆ: 350 ರು.

ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: 200

ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತೆ?

ಟೈಪಿಂಗ್ ಪರೀಕ್ಷೆ

ನೇರ ಸಂದರ್ಶನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ: ಜೂನ್‌ 29-2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ-28-2026

ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಜುಲೈ 28-2026

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲು ಹೈಕೋರ್ಟ್ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಿ.

ನಿಮ್ಮ ಇಮೇಲ್ ಐಡಿ, ಮೊಬೈಲ್ ನಂಬರ್ ಹಾಗೂ ಅಗತ್ಯ ದಾಖಲೆಗಳನ್ನು (ID ಪ್ರೂಫ್, ವಿದ್ಯಾರ್ಹತೆ ಸರ್ಟಿಫಿಕೇಟ್, ಫೋಟೋ) ರೆಡಿ ಇಟ್ಟುಕೊಳ್ಳಿ.

ಕೆಳಗೆ ನೀಡಿರುವ ಲಿಂಕ್ ಬಳಸಿ ಆನ್‌ಲೈನ್ ಅರ್ಜಿಯಲ್ಲಿ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.

https://judiciary.karnataka.gov.in/

ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕ ಪಾವತಿಸಿ ‘Submit’ ಬಟನ್ ಒತ್ತಿ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka SIR: ಮುರಾ ಗ್ರಾಮ ಮರ, ಟ್ರೀ ಬರೆದು ಎಡವಟ್ಟು, ಎಸ್‌ಐಆರ್ ಕನ್ನಡಲ್ಲೇ ನಡೆಸಲು ಕರವೇ ಆಗ್ರಹ
ಕಾರು ಚಲಾಯಿಸುವಾಗ ದಿಢೀರ್ ಉಸಿರಾಟ ಸಮಸ್ಯೆ, ಮಹಿಳೆಯ ಜೀವ ಉಳಿಸಿದ ಮಡಿವಾಳ ಸಂಚಾರಿ ಪೊಲೀಸ್ ಪೇದೆ