
ಬೆಂಗಳೂರು (ಸೆ.16): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ದೆಹಲಿ ಪ್ರವಾಸಕ್ಕೆ ತೆರಳಬೇಕಿದ್ದ ಗೃಹ ಸಚಿವ ಎಸ್ ಆರ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್ ಬಂದಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಬೊಮ್ಮಾಯಿ ,ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಹುಡುಗನಿಗೆ ಕೋವಿಡ್ ಪಾಸಿಟಿವ್ ಬಂದಿದ್ದು ನಾನು ಸಹ ಪರೀಕ್ಷೆಗೆ ಒಳಪಟ್ಟದ್ದೇನೆ. ಯಾವುದೇ ಲಕ್ಷಣಗಳಿಲ್ಲದೇ ಪಾಸಿಟಿಬ್ ಬಂದಿದೆ. ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ ಎಂದು ಹೇಳಿದ್ದಾರೆ.
ಕರ್ನಾಟಕದ 30 ಜಿಲ್ಲೆಗಳಲ್ಲೂ ಕೊರೋನಾ: ಇಲ್ಲಿದೆ ಮಂಗಳವಾರದ ಅಂಕಿ-ಸಂಖ್ಯೆ .
ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಹೇಳಿದ್ದಾರೆ.
ಕಳೆದ ಹಲವು ದಿನಗಳಿಂದ ಕೇಳಿಬರುತ್ತಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ದೆಹಲಿ ಪ್ರವಾಸಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ನಾಳೆ (ಸೆ.17)ರಂದು ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಸಾಕಷ್ಟು ಕುತೂಹಲ ಸೃಷ್ಟಿಸಿರುವ ಈ ಭೇಟಿ ವೇಳೆ ಹಲವು ವಿಚಾರಗಳು ಚರ್ಚೆಗೆ ಬರಲಿವೆ. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಭೇಟಿ ಮಾಡುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ