ರಾಜ್ಯಾದ್ಯಂತ ಹೋಟೆಲ್‌ಗಳಿಗೆ 10 ದಿನ LPG ಪೂರೈಕೆ ಬಂದ್; ಅಂಗಲಾಚಿದರೂ ಒಂದು ಸಿಲಿಂಡರ್ ಕೊಡಲಿಲ್ಲ!

Published : Mar 13, 2026, 02:55 PM IST
KH Muniyappa and Karnataka Hotel Owners Association

ಸಾರಾಂಶ

ರಾಜ್ಯದಲ್ಲಿ ಹೋಟೆಲ್‌ಗಳಿಗೆ 10 ದಿನಗಳ ಕಾಲ ಅಡುಗೆ ಅನಿಲ (LPG) ಪೂರೈಕೆಯನ್ನು ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ. ಗೃಹ ಬಳಕೆಗೆ ಆದ್ಯತೆಯಿಂದ ಹೋಟೆಲ್ ಉದ್ಯಮ, ಅದಕ್ಕೆ ಸಂಬಂಧಿಸಿದ ಸಪ್ಲೈ ಚೈನ್ ಮತ್ತು ಜನಸಾಮಾನ್ಯರ ಮೇಲೆ ತೀವ್ರ ಪರಿಣಾಮ ಬೀರುವ ಆತಂಕವನ್ನು ಹೋಟೆಲ್ ಮಾಲೀಕರು ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಮಾ.13): ರಾಜ್ಯದಲ್ಲಿ ಎದುರಾಗಿರುವ ಅಡುಗೆ ಅನಿಲ (LPG) ಪೂರೈಕೆ ಗೊಂದಲ ಈಗ ಸರ್ಕಾರ ಮತ್ತು ಹೋಟೆಲ್ ಮಾಲೀಕರ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಇಂದು ಬೆಳಿಗ್ಗೆ ಆಹಾರ ಸಚಿವರೊಂದಿಗೆ ನಡೆದ ಸಭೆಯ ನಂತರ ಹೋಟೆಲ್ ಮಾಲೀಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರದ ಧೋರಣೆಯಿಂದ ಹೋಟೆಲ್ ಉದ್ಯಮ ಬೀದಿಗೆ ಬೀಳುವ ಆತಂಕ ಎದುರಾಗಿದೆ.

10 ದಿನ ಗ್ಯಾಸ್ ಇಲ್ಲ, ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಿ!

ಸಭೆಯ ವಿವರಗಳನ್ನು ಹಂಚಿಕೊಂಡ ನಿಸರ್ಗ ಹೋಟೆಲ್ ಮಾಲೀಕ ಕೃಷ್ಣರಾಜ್ ಅವರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ‘ನಾವು ಇಂದು ಬೆಳಿಗ್ಗೆ ನಡೆದ ಸಭೆಗೆ ಹೋಗಿದ್ವಿ. ಆದರೆ ಸಚಿವರು ಮತ್ತು ಅಧಿಕಾರಿಗಳು ಮುಂದಿನ 10 ದಿನಗಳವರೆಗೆ ಹೋಟೆಲ್‌ಗಳಿಗೆ ಗ್ಯಾಸ್ ಪೂರೈಕೆ ಮಾಡಲು ಸಾಧ್ಯವಿಲ್ಲ, ನೀವೇನಾದರೂ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಿ ಎಂದು ಕೈತೊಳೆದುಕೊಂಡಿದ್ದಾರೆ. ನಾವು ಎಷ್ಟೇ ಅಂಗಲಾಚಿದರೂ ಅವರು ನಮ್ಮ ಮನವಿಯನ್ನು ಪರಿಗಣಿಸಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಮನೆಗಳಿಗೆ ಆದ್ಯತೆ, ಹೋಟೆಲ್‌ಗಳಿಗೆ ಕತ್ತರಿ:

ವಿಶೇಷವೆಂದರೆ, ರಾಜ್ಯದಲ್ಲಿ ಸದ್ಯ ಒಂದು ತಿಂಗಳಿಗೆ ಆಗುವಷ್ಟು ಗ್ಯಾಸ್ ಸ್ಟಾಕ್ ಲಭ್ಯವಿದೆ ಎಂದು ಅಧಿಕಾರಿಗಳೇ ಒಪ್ಪಿಕೊಂಡಿದ್ದಾರೆ. ಆದರೆ, "ಈ ದಾಸ್ತಾನನ್ನು ಕೇವಲ ಗೃಹ ಬಳಕೆಯ ಸಿಲಿಂಡರ್‌ಗಳಿಗೆ (Home Supply) ಮೀಸಲಿಡಬೇಕು. ಆದ್ದರಿಂದ ಹೋಟೆಲ್‌ಗಳಿಗೆ ನೀಡಲು ಸಾಧ್ಯವಿಲ್ಲ" ಎಂಬ ನಿಲುವನ್ನು ಸರ್ಕಾರ ತಳೆದಿದೆ. "ನಾವು ಪ್ರತಿಯೊಂದು ಹೋಟೆಲ್‌ಗೆ ಕನಿಷ್ಠ ಎರಡೇ ಎರಡು ಸಿಲಿಂಡರ್ ಕೊಡಿ ಎಂದು ಬೇಡಿಕೊಂಡೆವು. ಅಷ್ಟಾದರೂ ಅವರು ಒಪ್ಪಲಿಲ್ಲ" ಎಂದು ಕೃಷ್ಣರಾಜ್ ತಿಳಿಸಿದರು.

ಸರಣಿ ಉದ್ಯಮಗಳ ಮೇಲೆ ಕೆಟ್ಟ ಪರಿಣಾಮ:

ಗ್ಯಾಸ್ ಇಲ್ಲದೆ ಹೋಟೆಲ್ ನಡೆಸಲು ಸಾಧ್ಯವಿಲ್ಲ ಎಂಬುದು ಮಾಲೀಕರ ವಾದ. ಇದು ಕೇವಲ ಹೋಟೆಲ್ ಮಾಲೀಕರು ಅಥವಾ ಅಲ್ಲಿನ ಸಿಬ್ಬಂದಿಯ ಸಮಸ್ಯೆ ಮಾತ್ರವಲ್ಲ. ಹೋಟೆಲ್ ಉದ್ಯಮ ಸ್ಥಗಿತಗೊಂಡರೆ ಅದಕ್ಕೆ ತರಕಾರಿ, ಹಾಲು ಮತ್ತು ದಿನಸಿ ಪೂರೈಸುವ ಇತರ ಸಣ್ಣ ಉದ್ದಿಮೆಗಳಿಗೂ ಭಾರಿ ಹೊಡೆತ ಬೀಳಲಿದೆ. ಇಡೀ ಸಪ್ಲೈ ಚೈನ್ ಮೇಲೆ ಇದು ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಹೋಟೆಲ್ ಮಾಲೀಕರು ಎಚ್ಚರಿಸಿದ್ದಾರೆ.

ಜನ ಸಾಮಾನ್ಯರಿಗೂ ಸಂಕಷ್ಟ:

ಸರ್ಕಾರವು ಜನರನ್ನು ಮನೆಯಿಂದಲೇ ಊಟದ ಬಾಕ್ಸ್ ತನ್ನಿ ಎಂದು ಹೇಳುವುದು ಪ್ರಾಯೋಗಿಕವಾಗಿ ಸಾಧ್ಯವಿಲ್ಲ. "ಬೆಂಗಳೂರಿನಂತಹ ನಗರದಲ್ಲಿ ಜನರು ಕೆಲಸ ಕಾರ್ಯಗಳಿಗೆ ಬರುವಾಗ ಮೊದಲೇ ಪ್ಲಾನ್ ಮಾಡಿಕೊಂಡು ಬಾಕ್ಸ್ ತರಲು ಆಗುವುದಿಲ್ಲ. ಅನೇಕರು ಹೋಟೆಲ್ ಊಟವನ್ನೇ ಅವಲಂಬಿಸಿದ್ದಾರೆ. ಸಚಿವರು ಈ ವಾಸ್ತವವನ್ನು ಅರ್ಥ ಮಾಡಿಕೊಳ್ಳಬೇಕು. 10 ದಿನಗಳ ಕಾಲ ಗ್ಯಾಸ್ ಇಲ್ಲದೆ ಉದ್ಯಮ ನಡೆಸುವುದು ಅಸಾಧ್ಯದ ಮಾತು" ಎಂದು ಕೃಷ್ಣರಾಜ್ ಗುಡುಗಿದ್ದಾರೆ.

ಸದ್ಯ ಹೋಟೆಲ್ ಉದ್ಯಮ ಶೇಕಡಾ 50 ರಷ್ಟು ಪರ್ಯಾಯ ವ್ಯವಸ್ಥೆ ಮಾಡಿಕೊಂಡಿದ್ದರೂ, ಪೂರ್ಣ ಪ್ರಮಾಣದ ಅಡುಗೆಗೆ ಅನಿಲ ಸಿಲಿಂಡರ್ ಅತ್ಯಗತ್ಯವಾಗಿದೆ. ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಿ ಹೋಟೆಲ್‌ಗಳಿಗೆ ಸೀಮಿತ ಪ್ರಮಾಣದಲ್ಲಾದರೂ ಗ್ಯಾಸ್ ಪೂರೈಕೆಗೆ ಕ್ರಮ ಕೈಗೊಳ್ಳದಿದ್ದರೆ ಹೋಟೆಲ್‌ಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಲ್ಯಾಣ ಕರ್ನಾಟಕ ಹೆಬ್ಬಾಗಿಲಲ್ಲಿ ಹೊಸ ವಿಮಾನ ನಿಲ್ದಾಣ; ಬಳ್ಳಾರಿ, ಹಂಪಿ, ಹೊಸಪೇಟೆ, ಕೊಪ್ಪಳಕ್ಕೂ ಹತ್ತಿರ!
ಕುಮಾರ ಪರ್ವತ ಚಾರಣಕ್ಕೆ ಹೋಗುವ ಪ್ಲಾನ್ ಇದೆಯಾ? ಸರ್ಕಾರದ ಹೊಸ ನಿಯಮಗಳು ತಿಳ್ಕೊಳ್ಳಿ!