
ಬೆಂಗಳೂರು, (ಡಿ.3): ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈಗಾಗಲೇ ರೈತರ ಬೆಳೆ ಸಾಲ ಮನ್ನಾ ಮಾಡಿ ಘೋಷಣೆ ಮಾಡಿದ್ದಾರೆ.
ಆದರೆ, ಸಾಲ ಮನ್ನಾ ಘೋಷಣೆ ಮಾಡಿ ಐದು ತಿಂಗಳುಗಳು ಕಳೆದರೂ ರೈತರಿಗೆ ಮಾತ್ರ ಸಾಲ ಮನ್ನಾ ಆಗಿರುವ ಹಣ ಸಿಕ್ಕಿಲ್ಲ. ಮತ್ತೊಂದೆಡೆ ಸಾಲ ಮನ್ನಾ ಆಗಿದೆಯೋ ಇಲ್ಲವೋ ಎನ್ನುವ ಗೊಂದಲದಲ್ಲಿದ್ದಾರೆ.
ಇ ನ್ನುಬ್ಯಾಂಕುಗಳಿಂದ ಇದುವರೆಗೂ ರೈತರಿಗೆ ಯಾವುದೇ ಋಣಮುಕ್ತ ಪತ್ರ ಸಿಕ್ಕಿಲ್ಲ. ಇದೀಗ ರೈತರ ಸಾಲ ಮನ್ನಾ ವಿಷಯವಾಗಿ ಒಂದು ಹೆಜ್ಜೆ ಮುಂದೆ ಬಂದಿರುವ ಸರ್ಕಾರ ಎಲ್ಲರಿಗೂ ತಿಳಿಸಲು, ಯಾವೆಲ್ಲ ರೈತರ ಬೆಳೆ ಸಾಲ ಮನ್ನಾ ಆಗಿದೆ ಎಂಬುದನ್ನು ಒಂದು ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
ಯಾವೆಲ್ಲ ರೈತರ ಸಾಲ ಮನ್ನಾ ಆಗಿದೆ ಎಂಬುದನ್ನು ( http://clws.karnataka.gov.in/…/p…/pacsreports/DataEntry.aspx ) ಲಿಂಕ್ ಮೂಲಕ ತಿಳಿದುಕೊಳ್ಳಬಹುದು. ಮೊದಲು ಈ ಲಿಂಕ್ ಕ್ಲಿಕ್ ಮಾಡಿ, ಅಲ್ಲಿ ನೀಡಿರುವ ಆಯ್ಕೆಗಳಲ್ಲಿ ಜಿಲ್ಲೆಯ ಹೆಸರನ್ನು ನಮೂದಿಸಿ, ಬ್ಯಾಂಕಿನ ಹೆಸರು ಮತ್ತು ಯಾವ ಶಾಖೆ ಎಂಬುದನ್ನು ಆಯ್ಕೆ ಮಾಡಿ.
ನಂತರ ಎಕ್ಸ್ಪೋರ್ಟ್ ಮೇಲೆ ಕ್ಲಿಕ್ ಮಾಡಿ. ಆಗ ಆ ಶಾಖೆಯಲ್ಲಿ ಯಾವೆಲ್ಲ ರೈತರ ಸಾಲ ಮನ್ನಾ ಆಗಿದೆ ಎಂಬುದರ ಪಟ್ಟಿ ಕಾಣಿಸಿಕೊಳ್ಳುತ್ತದೆ. ಅಲ್ಲಿ ನಿಮ್ಮ ಹೆಸರು ಇದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಿ.
ಹಾಗಾದ್ರೆ ಏನ್ನೇಕೆ ತಡ ನೀವು ಕೂಡಾ ಆನ್ ಲೈನ್ ನಲ್ಲಿ ನಿಮ್ಮ ಸಾಲ ಮನ್ನಾ ಆಗಿರುವುದನ್ನು ಚೆಕ್ ಮಾಡಿಕೂಳ್ಳುವುದಕ್ಕೆ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ