
ಬೆಂಗಳೂರು (ಮಾ.13): ಒಳ ಮೀಸಲಾತಿ ಕಗ್ಗಂಟು ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಹಿರಿಯ ಸಚಿವರಿಗಾಗಿ ಸೋಮವಾರ ಔತಣಕೂಟ ಏರ್ಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಕೆ.ಎಚ್.ಮುನಿಯಪ್ಪ, ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಬೈರತಿ ಸುರೇಶ್, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಸೇರಿ ಸುಮಾರು 15 ಸಚಿವರನ್ನು ಔತಣ ಕೂಟಕ್ಕೆ ಆಹ್ವಾನಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಬಡವರ BPL ಕಾರ್ಡ್ APL ಆಗಿ ಪರಿವರ್ತನೆ! ವಿಧಾನಸಭೆಯಲ್ಲಿ ಪ್ರಪಕ್ಷಾತೀತ ಆಕ್ರೋಶ!
ಪರಿಶಿಷ್ಟ ಜಾತಿಯ ಒಳಮೀಸಲಾತಿ ಗೊಂದಲದ ಹಿನ್ನೆಲೆಯಲ್ಲಿ ಔತಣಕೂಟದ ರೂಪದಲ್ಲಿ ಸಭೆ ಆಯೋಜಿಸಲಾಗಿದ್ದು, ಪ್ರಮುಖ ಸಚಿವರಿಂದ ಮುಖ್ಯಮಂತ್ರಿ ಅವರು ಗೊಂದಲ ನಿವಾರಣೆ ಕುರಿತು ಅಭಿಪ್ರಾಯ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ