
ಬೆಂಗಳೂರು(ಮೇ.02): ಕೋವಿಡ್ ನಿಯಂತ್ರಣಕ್ಕೆ ಹೇರಲಾಗಿರುವ ಜನತಾ ಕರ್ಫ್ಯೂ ನಿಯಮದಲ್ಲಿ ಕೆಲವು ಸಡಿಲಿಕೆ ಮಾಡಲಾಗಿದ್ದು, ತಳ್ಳುವ ಗಾಡಿ ಮತ್ತು ಎಲ್ಲಾ ಹಾಪ್ಕಾಮ್ಸ್ಗಳಲ್ಲಿ ಹಣ್ಣು ತರಕಾರಿ ವ್ಯಾಪಾರಕ್ಕೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6ಗಂಟೆಯವರೆಗೆ ಅನುವು ಮಾಡಿಕೊಡಲಾಗಿದೆ.
ಜೊತೆಗೆ, ಎಪಿಎಂಸಿ ಮತ್ತು ದಿನಸಿ ಅಂಗಡಿಗಳಿಗೆ ಬೆಳಗ್ಗೆ 6 ಗಂಟೆಯಿಂದ ನಾಲ್ಕು ತಾಸುಗಳ ಮಾತ್ರ ತೆಗೆಯಲು ಮಾತ್ರ ನೀಡಲಾಗಿದ್ದ ಅವಕಾಶವನ್ನು ಮಧ್ಯಾಹ್ನ 12 ಗಂಟೆಯವರೆಗೆ ವಿಸ್ತರಣೆ ಮಾಡಲಾಗಿದೆ. ಎಲ್ಲ ರೀತಿಯ ಸಂತೆ, ವಾರದ ಸಂತೆಗಳನ್ನು ನಿರ್ಬಂಧಿಸಲಾಗಿದೆ. ಹೊಸ ನಿಯಮ ಭಾನುವಾರದಿಂದಲೇ ಅನ್ವಯವಾಗಲಿದೆ ಎಂದು ಸರ್ಕಾರ ಆದೇಶಿಸಿದೆ.
"
ನಾಲ್ಕು ತಾಸುಗಳ ಕಾಲ ಮಾತ್ರ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಿದ್ದರಿಂದ ಮಾರುಕಟ್ಟೆಗಳಲ್ಲಿ ಮತ್ತು ದಿನಸಿ ಅಂಗಡಿಗಳಲ್ಲಿ ಬೆಳಗ್ಗೆ ಜನಸಂದಣಿಯಾಗುತ್ತಿದೆ. ಇದನ್ನು ತಪ್ಪಿಸಲು ವ್ಯಾಪಾರದ ಸಮಯವನ್ನು ಹೆಚ್ಚಿಸಲಾಗಿದೆ. ಹಾಪ್ಕಾಮ್ಸ್, ಎಲ್ಲ ಹಾಲಿನ ಬೂತುಗಳು, ತಳ್ಳುವ ಗಾಡಿ ಮೂಲಕ ಹಣ್ಣು, ತರಕಾರಿಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡದೆ ಮಾರುಕಟ್ಟೆಬೆಲೆಗೆ ಮಾರಾಟ ಮಾಡಲು ಅನುಮತಿ ನೀಡಲಾಗಿದೆ. ಈ ವ್ಯಾಪಾರವು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಎಪಿಎಂಸಿ ಮತ್ತು ದಿನಸಿ ಅಂಗಡಿಗಳನ್ನು ಬೆಳಗ್ಗೆ 6ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ತೆರೆಯಲು ಅನುಮತಿ ಕಲ್ಪಿಸಲಾಗಿದೆ.
ಎಪಿಎಂಸಿಗೂ ವಿನಾಯ್ತಿ
- ಬೆಳಗ್ಗೆ 6ರಿಂದ 10ರವರೆಗಷ್ಟೇ ಇದ್ದ ಅಗತ್ಯ ವಸ್ತು ಖರೀದಿ ಅವಕಾಶ
- ಈಗ ನಿಯಮಗಳನ್ನು ಮತ್ತಷ್ಟುಸಡಿಲಗೊಳಿಸಿದ ರಾಜ್ಯ ಸರ್ಕಾರ
- ಎಪಿಎಂಸಿಗಳಲ್ಲೂ ಮಧ್ಯಾಹ್ನ 12ರವರೆಗೂ ವ್ಯಾಪಾರ ಅವಕಾಶ
- ಸಂತೆ, ವಾರದ ಸಂತೆಗಳಿಗೆ ನಿರ್ಬಂಧ
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ