
ಮಂಗಳೂರು, (ಮೇ.11): ಇಂದು (ಮಂಗಳವಾರ) ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಭಾಗದಲ್ಲಿ ಮೇ 13ರಂದು ರಂಜಾನ್ ಹಬ್ಬ ಆಚರಿಸುವಂತೆ ಉಳ್ಳಾಲ ಖಾಜಿ ಸೈಯದ್ ಕೂರತ್ ತಂಗಲ್ ಸೂಚಿಸಿದ್ದಾರೆ.
ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ದುಬೈನಲ್ಲಿ ಗುರುವಾರದಂದು (ಮೇ.13) ರಂಜಾನ್ ಹಬ್ಬ ಆಚರಿಸಲಾಗುತ್ತದೆ. ಪ್ರತಿ ವರ್ಷವೂ ಸಹ ರಾಜ್ಯದ ಇತರೆ ಭಾಗಗಳಿಗಿಂತ ಕರವಾಳಿ ಭಾಗದಲ್ಲಿ ಒಂದು ದಿನ ಮುಂಚೆನೇ ರಂಜಾನ್ ಹಬ್ಬ ಆಚರಿಸುವುದನ್ನು ನಾವು ಇಲ್ಲಿ ಸ್ಮರಿಸಬಹುದು.
ರಂಜಾನ್ ಆಚರಣೆಗೆ ಸರ್ಕಾರದಿಂದ ಗೈಡ್ ಲೈನ್ಸ್ ಬಿಡುಗಡೆ: ಹಬ್ಬ ಇದರಂತೆ ಆಚರಿಸಬೇಕು
ಈ ಬಾರಿ ಕೊವಿಡ್ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವ ಕಾರಣ ಈದುಲ್ ಫಿತ್ರ್ ಹಬ್ಬವನ್ನು ಸರಳವಾಗಿ ಮನೆಯಲ್ಲಿಯೇ ಆಚರಿಸಬೇಕು. ಅತ್ಯಂತ ಸರಳವಾಗಿ ಆಚರಿಸಬೇಕು. ಬದವಡಿಗೆ ಹೆಚ್ಚಿನ ದಾನ ನೀಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ ಹಾಝ್ ಅಹ್ಮದ್ ಮುಸ್ಲಿಯರ್ ಕರೆ ನೀಡಿದ್ದಾರೆ.
ಪವಿತ್ರ ಹಬ್ಬದ ಸಂಭ್ರಮಾಚರಣೆಯ ಸಮಯದಲ್ಲೇ ಕೊವಿಡ್ ಸೋಂಕು ಸಹ ಇರುವುದರಿಂದ ಹಬ್ಬದ ಆಚರಣೆ ಸೋಂಕಿನ ಹೆಚ್ಚಳ ಆಗಬಾರದು. ಎಲ್ಲರೂ ಮನೆಯಲ್ಲಿಯೇ ಬೆಳಗಿನ ಪ್ರಾರ್ಥನೆ ಸಲ್ಲಿಸಬೇಕು. ದೈಹಿಕ ಅಂತರ ಕಾಪಾಡಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳ ಮೂಲಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ